ನೇಕಾರ ಸಮುದಾಯ ಪ್ರವರ್ಗ-1ಕ್ಕೆ ಸೇರಿಸಿ
Team Udayavani, Dec 27, 2020, 1:52 PM IST
ಬನಹಟ್ಟಿ: ರಾಜ್ಯದಲ್ಲಿರುವ ನೇಕಾರ ಸಮುದಾಯಕ್ಕೆ ದೊರೆಯಬೇಕಾದ ಸೌಲಭ್ಯಗಳುದೊರೆಯದೆ ಇರುವುದರಿಂದ ನೇಕಾರರುವಂಚಿತರಾಗುತ್ತಿದ್ದಾರೆ. ಆದ್ದರಿಂದ ನೇಕಾರರನ್ನು ಪ್ರವರ್ಗ-1ರಲ್ಲಿ ಸೇರಿಸುವ ನಿಟ್ಟಿನಲ್ಲಿ ಹೋರಾಟ ಅಗತ್ಯವಾಗಿದೆ ಎಂದು ನೇಕಾರ ಮುಖಂಡ ಮನೋಹರ ಶಿರೋಳ ಹೇಳಿದರು.
ಶನಿವಾರ ಸ್ಥಳೀಯ ಬಂಗಾರೆವ್ವ ತಟ್ಟಿಮನಿ ಸಭಾಭವನದಲ್ಲಿ ನಡೆದ ನೇಕಾರ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.ಈ ನಿಟ್ಟಿನಲ್ಲಿ ನೇಕಾರ ಸಮುದಾಯದ ಪ್ರಮುಖರು ಪಕ್ಷ ಬೇಧ ಮರೆತು ಒಂದಾಗಿಹೋರಾಟ ಮಾಡಬೇಕಾಗಿದೆ. ಪ್ರವರ್ಗ-1ಕ್ಕೆಸೇರಿದಾಗ ಮಾತ್ರ ಮುಂಬರುವ ನೇಕಾರರ ಮಕ್ಕಳಿಗೆ ಅನುಕೂಲವಾಗಲಿದೆ. ನೇಕಾರರು ಕೂಡಾ ಸಾಮಾಜಿಕ, ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಡಿ.ಎಸ್.ಮಾಚಕನೂರ ಮಾತನಾಡಿ, ಈಗಾಗಲೇ ನೇಕಾರ ಜಾತಿಯನ್ನುಪ್ರವರ್ಗ-2 ರಲ್ಲಿ ಸೇರಿಸಲಾಗಿದೆ. ಇಲ್ಲಿ ಒಟ್ಟು26 ಜಾತಿಗಳಿವೆ. ಇದರಿಂದಾಗಿ ನೇಕಾರರಿಗೆದೊರೆಯಬೇಕಾದ ಯಾವುದೆ ಸೌಲಭ್ಯಗಳುದೊರೆಯುತ್ತಿಲ್ಲ. ಆದ್ದರಿಂದ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಗಮನ ನೀಡಿ ನೇಕಾರ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದರು.
ಮುಖಂಡ ಶಂಕರ ಸೋರಗಾವಿ ಮಾತನಾಡಿ,ಮಹಾರಾಷ್ಟ್ರ ರಾಜ್ಯದಲ್ಲಿ ಈಗಾಗಲೇ ಅಲ್ಲಿರುವನೇಕಾರರಿಗೆ ವಿಶೇಷ ಸ್ಥಾನಮಾನ ನೀಡಿದ್ದಾರೆ. ರಾಜ್ಯದಲ್ಲೂ ಕೂಡಾ ನೇಕಾರರಿಗೆ ವಿಶೇಷ ಮೀಸಲಾತಿಯನ್ನು ನೀಡುವಲ್ಲಿ ಸರ್ಕಾರ ಮುಂದಾಗಬೇಕು. ಈ ನಿಟ್ಟಿನಲ್ಲಿ ರಾಜ್ಯಾದಂತ ಹೋರಾಟ ಅಗತ್ಯವಾಗಿದೆ. ನೇಕಾರ ಸಮುದಾಯ ಜಾಗೃತವಾಗಬೇಕು ಎಂದರು.
ಜಿ.ಎಸ್.ಗೊಂಬಿ, ಶಂಕರ ಜುಂಜಪ್ಪನವರ ಸೇರಿದಂತೆ ಅನೇಕರು ಮಾತನಾಡಿದರು. ಮಂಗಳವಾರ ಪೇಟೆ ದೈವ ಮಂಡಳಿಯ ಅಧ್ಯಕ್ಷ ಶ್ರೀಶೈಲ ಧಬಾಡಿ ಅಧ್ಯಕ್ಷತೆ ವಹಿಸಿದ್ದರು. ಶಂಕರ ಜಾಲಿಗಿಡದ, ಓಂಪ್ರಕಾಶ ಬಾಗೇವಾಡಿ, ಪ್ರಭುಹಟ್ಟಿ, ಶ್ರೀನಿವಾಸ ಹುಬ್ಬಳ್ಳಿ, ನಗರಸಭಾ ಅಧ್ಯಕ್ಷ ಶ್ರೀಶೈಲ ಬೀಳಗಿ, ಮಲ್ಲಿನಾಥ ಕಕಮರಿ, ಈರಣ್ಣ ಚಿಂಚಕಂಡಿ, ರವಿ ಬಾಡಗಿ, ರವಿ ಚನಪನ್ನವರ, ರಾಜೇಂದ್ರ ಭದ್ರನವರ, ಬಸವರಾಜ ಗುಡೋಡಗಿ, ಶಿವಾನಂದ ಬುದ್ನಿ, ಡಾ| ಶಂಕರ ವಸ್ತ್ರದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್