ವಾರಾಂತ್ಯ ಕರ್ಫ್ಯೂಗೆ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ


Team Udayavani, Jan 8, 2022, 7:07 PM IST

ವಾರಾಂತ್ಯ ಕರ್ಫ್ಯೂಗೆ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ

ರಬಕವಿ-ಬನಹಟ್ಟಿ: ರಾಜ್ಯ ಸರಕಾರ ವಿಧಿಸಿದ ವಾರಾಂತ್ಯ ಕರ್ಫ್ಯೂಗೆ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶನಿವಾರ ಬೆಳಿಗ್ಗೆಯಿಂದಲೇ ಕಾಯಿಪಲ್ಲೆ, ಹಾಲು ಹಾಗೂ ಮೆಡಿಕಲ್ ಅಂಗಡಿಗಳನ್ನು ಬಿಟ್ಟು ಉಳಿದ ಎಲ್ಲಾ ಅಂಗಡಿಗಳೂ ಬಂದ್ ಇದ್ದು ಜನ ಸಂಚಾರ ಅತ್ಯಂತ ವಿರಳವಾಗಿತ್ತು.

ಸದಾ ಜನ  ಮತ್ತು ವಾಹನಗಳಿಂದ ಗಿಜಿಗುಡುತ್ತಿದ್ದ ಪಟ್ಟಣದ ಮುಖ್ಯರಸ್ತೆಗಳು, ಮಾರುಕಟ್ಟೆ ರಸ್ತೆ, ಗಾಂಧಿವೃತ್ತ, ರಬಕವಿಯ ಶಂಕರಲಿಂಗ ದೇವಸ್ಥಾನ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳೆಲ್ಲ ಜನರಿಲ್ಲದೇ ಬಿಕೋ ಎನ್ನುತ್ತಿದ್ದವು.

ಎಲ್ಲಾ ಅಂಗಡಿಗಳೂ ಕೂಡಾ ಬಂದ್ ಇದ್ದುದರಿಂದ ಜನ ಪೇಟೆಗೆ ಬರುವ ಗೋಜಿಗೇ ಹೋಗಿಲ್ಲ. ಹೋಟೇಲ್‌ಗಳು ಸಹ ಬಾಗಿಲೇ ತೆರೆಯದೇ ಬಂದ್ ಮಾಡಿದ್ದು ಕಂಡು ಬಂತು. ಕೆಲವು ಕಡೆಗಳಲ್ಲಿ ಹಣ್ಣು ವ್ಯಾಪಾರಸ್ಥರು ತಳ್ಳುವ ಗಾಡಿಗಳಲ್ಲಿ ವ್ಯಾಪಾರ ಮಾಡುಲು ಬಂದರೂ ಕೂಡಾ ಗಿರಾಕಿಗಳೇ ಇಲ್ಲದೇ ಕಾಯುವಂತಾಗಿತ್ತು. ಜನರು ರಸ್ತೆಗಿಳಿಯದೇ ಇರುವುದರಿಂದ ಪೊಲೀಸ್ ಇಲಾಖೆಯ ಕೆಲಸ ಸುಗಮವಾಗಿತ್ತು. ಆದರೂ ಅಲ್ಲಲ್ಲಿ ನಿಂತು ಓಡಾಡುವವರನ್ನು ವಿಚಾರಿಸುತ್ತಿರುವುದು ಕಂಡು ಬಂತು.

ಎರಡನೇ ಶನಿವಾರವಾದ್ದರಿಂದ ಸರಕಾರಿ ಕಚೇರಿಗಳು, ಬ್ಯಾಂಕುಗಳಿಗೆ ರಜೆ ಇದ್ದುದರಿಂದ ಜನರ ಓಡಾಟ ಇನ್ನಷ್ಟು ವಿರಳವಾಗಿತ್ತು. ಕೆಲವೊಂದು ಸೇವೆಗಳಿಗೆ ಹಾಗೂ ಆಸ್ಪತ್ರೆಗೆ ಹೋಗುವವರಿಗೆ, ವ್ಯಾಕ್ಸಿನೇಶನ್ ತೆಗೆದುಕೊಳ್ಳಲು ಹೋಗುವವರಿಗೆ ವಿನಾಯಿತಿ ಇದ್ದರೂ ಸಹ ಜನ ಹೆಚ್ಚಾಗಿ ಹೊರಗೆ ಬರದೇ ಇರುವುದರಿಂದ ರಸ್ತೆಗಳೆಲ್ಲ ಖಾಲಿ ಖಾಲಿಯಾಗಿತ್ತು. ಒಟ್ಟಾರೆ ಬೆಳಿಗ್ಗೆಯಿಂದಲೇ ಜನ ಸಂಚಾರ ಇಲ್ಲದೇ ಬಂದ್ ಸಂಪೂರ್ಣ ಯಶಸ್ವಿಯಾಗಿತ್ತು.

ಈ ಸಂದರ್ಭದಲ್ಲಿ ರಬಕವಿ-ಬನಹಟ್ಟಿ ತಹಶೀಲ್ದಾರ ಸಂಜಯ ಇಂಗಳೆ ಪತ್ರಿಕೆಯೊಂದಿಗೆ ಮಾತನಾಡಿ, ತಾಲೂಕಿನಲ್ಲಿ ವಾರಾಂತ್ಯದ ಕರ್ಫ್ಯೂಗೆ ಜನಸ್ಪಂದಿಸಿದ್ದು ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ ಮಾಡಿ ಸಹಕರಿಸಿದ್ದಾರೆ. ಅಲ್ಲದೇ ಕೆಲವು ವಿನಾಕಾರಣ ಹೊರಗೆ ಬರುವವರ ವಿರುದ್ದ ಪೊಲೀಸ ಇಲಾಖೆಯವರು ಅಗತ್ಯ ಕ್ರಮ ತೆಗೆದುಕೊಂಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸಿಪಿಐ ಜೆ. ಕರುಣೇಶಗೌಡ ಮಾತನಾಡಿ, ವಾರಾಂತ್ಯದ ಕರ್ಫ್ಯೂ ಹಿನ್ನಲೆಯಲ್ಲಿ ಪ್ರತಿಯೊಬ್ಬರು ಕಟ್ಟು ನಿಟ್ಟಾಗಿ ಸರಕಾರದ ನಿಯಮಗಳನ್ನು ಪಾಲಿಸಬೇಕು ಅನಗತ್ಯವಾಗಿ ಬೈಕ ಮೇಲೆ ಓಡಾಡುವುದು ಮಾಡಬಾರದು. ತಪ್ಪಿದ್ದಲ್ಲಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.