ಜಿಲ್ಲೆಯಾದ್ಯಂತ ವೀಕೆಂಡ್‌-ನೈಟ್‌ ಕರ್ಫ್ಯೂ ಜಾರಿ

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ತಂಡದಿಂದ ತಪಾಸಣೆಗೆ ಒಳಪಡಿಸಲಾಗುತ್ತಿದೆ.

Team Udayavani, Jan 6, 2022, 5:19 PM IST

ಜಿಲ್ಲೆಯಾದ್ಯಂತ ವೀಕೆಂಡ್‌-ನೈಟ್‌ ಕರ್ಫ್ಯೂ ಜಾರಿ

ಬಾಗಲಕೋಟೆ: ಕೋವಿಡ್‌ ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ಜಿಲ್ಲೆಯಾದ್ಯಂತ ವೀಕೆಂಡ್‌ ಮತ್ತು ನೈಟ್‌ ಕರ್ಫ್ಯೂ ಪಾಲನೆಗೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ. ರಾಜೇಂದ್ರ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿ ಅನ್ವಯ ನೈಟ್‌ ಕರ್ಫ್ಯೂ ಮುಂದುವರಿಯಲಿದ್ದು, ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್‌ ಕರ್ಫ್ಯೂ ಹೇರಲಾಗಿದೆ. ವಿಕೆಂಡ್‌ ಕರ್ಫ್ಯೂ ಸಮಯದಲ್ಲಿ ಮೆಡಿಕಲ್‌, ಹಾಲಿನ ಅಂಗಡಿ ಹೊರತುಪಡಿಸಿ ಉಳಿದವುಗಳಿಗೆ ಅವಕಾಶವಿರುವುದಿಲ್ಲ. ಆದರೆ ಹೋಮ್‌ ಡಿಲೆವರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು
ತಿಳಿಸಿದರು.

ಕಂದಾಯ, ಪೊಲೀಸ್‌, ಆರೋಗ್ಯ ಹಾಗೂ ಪಂಚಾಯತ್‌ ರಾಜ್‌ ಹಾಗೂ ಇತರೆ ಇಲಾಖೆಗಳು ಹೊರತುಪಡಿಸಿ ಉಳಿದ ಇಲಾಖೆಗಳು ಸೋಮವಾರದಿಂದ ಶುಕ್ರವಾರದ ವರೆಗೆ ಕಾರ್ಯನಿರ್ವಹಿಸಲಿವೆ. ಕ್ಲಬ್‌, ರೆಸ್ಟೋರೆಂಟ್‌, ಬಾರ್‌, ಹೋಟೆಲ್‌, ಚಿತ್ರಮಂದಿರ, ರಂಗಮಂದಿರ ಆಸನ ಸಾಮರ್ಥ್ಯದ ಶೇ. 50 ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮಾಲ್‌, ಶಾಪಿಂಗ್‌ ಕಾಂಪ್ಲೆಕ್ಸ್‌ ಹಾಗೂ ದಿನಸಿ ಅಂಗಡಿಗಳು ವಾರದ ದಿನಗಳಲ್ಲಿ ಎಂದಿನಂತೆ ಕಾರ್ಯನಿರ್ವಹಿಸಲಿವೆ. ಅಲ್ಲದೇ ಇದರ ಜೊತೆಗೆ ಪ್ರತಿಯೊಂದು ಅಂಗಡಿಗಳಲ್ಲಿ ಎರಡು ಡೋಸ್‌ ಲಸಿಕೆ ಪಡೆದವರಿಗೆ ಮಾತ್ರ ಪ್ರವೇಶವಿರುವ ಬಗ್ಗೆ ಬೋರ್ಡ್‌ ಹಾಕಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಲಸಿಕೆ ಪಡೆದವರಿಗೆ ದೇವಸ್ಥಾನ ಪ್ರವೇಶ:
ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಲಸಿಕೆ ಪಡೆದ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಇದನ್ನು ಹೊರತುಪಡಿಸಿ ಹರಕೆ, ಸೇವೆ, ಜಾತ್ರೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ದೇವಸ್ಥಾನದಲ್ಲಿ ಅನ್ನಸಂತರ್ಪಣೆ, ಪ್ರಸಾದ ಹಾಗೂ ತೀರ್ಥ ಕೊಡುವುದನ್ನೂ ನಿಷೇಧಿಸಲಾಗಿದೆ.

ದೇವಸ್ಥಾನಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಈ ಬಗ್ಗೆ ದೇವಸ್ಥಾನದ ಕಮಿಟಿಯವರ ಸಭೆ ಕರೆದು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ತಿಳಿಸಲಾಗಿದೆ. ಕಲ್ಯಾಣಿಯಲ್ಲಿ ಸ್ನಾನ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ವಾರದ ಸಂತೆಯನ್ನು ರದ್ದು ಮಾಡಲಾಗಿದೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿ, ವೀಕೆಂಡ್‌ ಮತ್ತು ನೈಟ್‌ ಕರ್ಫ್ಯೂ ಸಂದರ್ಭದಲ್ಲಿ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ನಿರ್ಧಾಕ್ಷಿಣ್ಯವಾಗಿ ಕಾನೂನಿನ ಕ್ರಮ ಜರುಗಿಸಲಾಗುತ್ತದೆ. ನೈಟ್‌ ಕರ್ಫ್ಯೂ ರಾತ್ರಿ 10ರಿಂದ ಪ್ರಾರಂಭವಾಗಲಿದ್ದು, 9.30 ಗಂಟೆಗೆ ಎಲ್ಲ ಅಂಗಡಿ ಮುಗ್ಗಟ್ಟು, ಬಾರ್‌, ಕ್ಲಬ್‌, ರೆಸ್ಟೋರೆಂಟ್‌ಗಳು ಮುಚ್ಚತಕ್ಕದ್ದು. ಪಾಲನೆಯಾಗದಿದ್ದಲ್ಲಿ ಸೂಕ್ತ ಕ್ರಮ ವಹಿಸಲಾಗುತ್ತದೆ ಎಂದು ತಿಳಿಸಿದರು.

ಜಿ.ಪಂ. ಸಿಇಒ ಟಿ. ಭೂಬಾಲನ್‌ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕೋವಿಡ್‌ ಮೂರನೇ ಅಲೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಹಾಗೂ ಕಣ್ಗಾವಲು ಇಡಲಾಗುತ್ತದೆ. ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ದುಡಿಯಲು ಹೋದ ಕಾರ್ಮಿಕರು ಮರಳಿ ತಮ್ಮ ಊರಿಗಳಿಗೆ ಬಂದಲ್ಲಿ ಅವರಿಗೆ ತಪಾಸಣೆ ಮಾಡಿಸಿ ನರೇಗಾದಡಿ ಕೆಲಸ ನೀಡಲು ಕ್ರಮ ವಹಿಸಲಾಗುತ್ತದೆ. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ತಂಡದಿಂದ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಬಾಲ್ಯ ವಿವಾಹ ತಡೆಗೆ ಕ್ರಮವಹಿಸಲಾಗುತ್ತಿದೆ. ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿ ಪಾಲನೆಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೋವಿಡ್‌ ಮೂರನೇ ಅಲೆ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದು, ಅದನ್ನು ತಡೆಯಲು ಕ್ರಮ ವಹಿಸುವುದರ ಜೊತೆಗೆ ಕೋವಿಡ್‌ ಪಾಸಿಟಿವ್‌ ಬಂದ ವ್ಯಕ್ತಿಗಳ ಚಿಕಿತ್ಸೆಗೆ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಆಕ್ಸಿಜನ್‌ ಕಮಿಟಿ ಸಲಹೆಯಂತೆ ಎಲ್ಲ ರೀತಿಯ ಸಲಕರಣೆಗಳನ್ನು ಪರೀಕ್ಷಿಸಿ ಸೂಸ್ಥಿತಿಯಲ್ಲಿ ಇಡಲಾಗಿದೆ. ಮೆಡಿಶಿಗಳ ಸಂಗ್ರಹ ಮಾಡಿಕೊಳ್ಳಲಾಗುತ್ತಿದೆ. ಇದರ ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಶೇ.50 ರಷ್ಟು ಕೋವಿಡ್‌ ಚಿಕಿತ್ಸೆಗೆ ಬೆಡ್‌ಗಳನ್ನು ಮೀಸಲಿರಿಸಲು ತಿಳಿಸಲಾಗಿದೆ.
ಕ್ಯಾಪ್ಟನ್‌ ಡಾ| ಕೆ. ರಾಜೇಂದ್ರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.