ಜಿಲ್ಲಾಧಿಕಾರಿ ಆದೇಶಕ್ಕಿಲ್ಲ ಕಿಮ್ಮತ್ತು


Team Udayavani, Mar 18, 2020, 11:46 AM IST

ಜಿಲ್ಲಾಧಿಕಾರಿ ಆದೇಶಕ್ಕಿಲ್ಲ ಕಿಮ್ಮತ್ತು

ಸಾಂದರ್ಭಿಕ ಚಿತ್ರ

ಮಹಾಲಿಂಗಪುರ: ಕಳೆದೊಂದು ವಾರದಿಂದ ವಿಶ್ವವನ್ನೇ ತಲ್ಲಣಗೊಳಿಸಿದ ಕೊರೊನಾ ವೈರಸ್‌ ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ, ರಾಜ್ಯ ಸರ್ಕಾರವು ಶಾಲಾ-ಕಾಲೇಜು, ಸಭೆ-ಸಮಾರಂಭ ಜಾತ್ರೆ-ಉತ್ಸವಗಳಿಗೆ ಕಡಿವಾಣ ಹಾಕಿದೆ.

ಅದರಂತೆಯೇ ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಬಾಗಲಕೋಟೆ ಜಿಲ್ಲಾಧಿಕಾರಿಗಳು ಮಾ. 23ರವರೆಗೆ ಜಿಲ್ಲೆಯಲ್ಲಿನ ವಾರದ ಸಂತೆ ನಿಷೇಧಿಸಿ ಸೋಮವಾರ ಆದೇಶ ಹೊರಡಿಸಿದ್ದಾರೆ. ಆದರೆ ಜಿಲ್ಲಾಧಿಕಾರಿ ಆದೇಶದ ನಡುವೆಯೂ ಪಟ್ಟಣದ ಮಂಗಳವಾರದ ಸಂತೆ ಯಥಾಸ್ಥಿತಿಯಲ್ಲಿ ನಡೆದಿದೆ.

ಕೊರೊನಾ ವೈರಸ್‌ ಪ್ರಭಾವದ ಹಿನ್ನೆಲೆ ಸಂತೆಗೆ ಆಗಮಿಸುತ್ತಿದ್ದ ಗ್ರಾಹಕರ ಸಂಖ್ಯೆಯು ಅಲ್ಪ ಪ್ರಮಾಣ ಕಡಿಮೆಯಾಗಿತ್ತು. ಈ ಕುರಿತು ಪುರಸಭೆ ಮುಖ್ಯಾಧಿಕಾರಿ ಬಾಬುರಾವ ಕಮತಗಿ ಪ್ರತಿಕ್ರಿಯಿಸಿ, ವಾರದ ಸಂತೆಗಾಗಿ ಜಿಲ್ಲಾ ಧಿಕಾರಿ ಆದೇಶದ ಕುರಿತು ರಬಕವಿ-ಬನಹಟ್ಟಿ ತಹಶೀಲ್ದಾರ್‌ ಮತ್ತು ಜಮಖಂಡಿ ಉಪವಿಭಾಗಾಧಿಕಾರಿಗಳ ಕುರಿತು ಚರ್ಚಿಸಿ, ಸಾರ್ವಜನಿಕರಿಗೆ ಅವಶ್ಯವಿರುವ ದಿನನಿತ್ಯ ವಸ್ತುಗಳ ಮಾರಾಟ ತೊಂದರೆ ಬೇಡ ಎಂಬ ಕಾರಣಕ್ಕಾಗಿ ಸಂತೆ ಬಂದ್‌ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಪಟ್ಟಣದಲ್ಲಿ ಕೊರೊನಾ ವೈರಸ್‌ ಕುರಿತು ಪುರಸಭೆಯಿಂದ ಜಾಗೃತಿ ಕಾರ್ಯಕ್ರಮ ಮಾಡಲಾಗಿದೆ. ಎಸಿ ಅವರ ಸಭೆಯಲ್ಲಿ ನಿರ್ಣಯಿಸಿದಂತೆ ಫುಟ್‌ಪಾತ್‌ನಲ್ಲಿ ಚಹಾ ಅಂಗಡಿ, ಹೋಟೆಲ್‌, ಪಾನಿಪುರಿ ಅಂಗಡಿ ಸೇರಿದಂತೆ ಬೀದಿಬದಿಯಲ್ಲಿನ ಅಂಗಡಿಗಳನ್ನು ಬಂದ್‌ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಪತ್ರಿಕೆಗೆ ತಿಳಿಸಿದ್ದಾರೆ.

31ರವರೆಗೆ ಚಿತ್ರಮಂದಿರ ಬಂದ್‌: ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರದಿಂದ ಪಟ್ಟಣದ ಅಷ್ಟಗಿ ಮತ್ತು ಮಾರುತಿ ಚಿತ್ರಮಂದಿರಗಳಲ್ಲಿನ ಚಿತ್ರಪ್ರದರ್ಶನ ರದ್ದುಗೊಳಿಸಲಾಗಿದೆ. ಮಾ.31ರವರೆಗೂ ಚಿತ್ರ ಪ್ರದರ್ಶನ ಇರುವುದಿಲ್ಲ ಎಂದು ಚಿತ್ರ ಮಂದಿರ ಪ್ರದರ್ಶಕರು ತಿಳಿಸಿದ್ದಾರೆ.

ಜಾಗೃತಿ-ಸ್ವಚ್ಛತೆಗೆ ಆದ್ಯತೆ: ಕೊರೊನಾ ವೈರಸ್‌ ಮುಂಜಾಗ್ರತಾ ಹಿನ್ನೆಲೆ ಪಟ್ಟಣದಲ್ಲಿ ಹೆಚ್ಚಿನ ಜನಜಾಗೃತಿ ಕಾರ್ಯಕ್ರಮ ಮಾಡುವುದು ಹಾಗೂ ಪಟ್ಟಣದ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದು ಅವಶ್ಯ. ಈ ಕುರಿತು ಪುರಸಭೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಪಟ್ಟಣದಲ್ಲಿ ಸರ್ಕಾರದ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ರೋಗ ಹರಡದಂತೆ ಮುಂಜಾಗ್ರತಾ ಕಾರ್ಯಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್‌ ತೇರದಾಳ ಮತಕ್ಷೇತ್ರದ ಅಧ್ಯಕ್ಷ ನಿಂಗಪ್ಪ ಬಾಳಿಕಾಯಿ, ಬಸವರಾಜ ರಾಯರ, ವಿವಿಧ ಸಂಘಟನೆಗಳ ಅಧ್ಯಕ್ಷರಾದ ಅನೀಲ ಕಿರಿಕಿರಿ, ನಾಗರಾಜ ಭಜಂತ್ರಿ, ಅಸ್ಲಂ ಕೌಜಲಗಿ, ಸುರೇಶ ಮಡಿವಾಳರ, ಶಿವಾ ಟಿರ್ಕಿ, ವೀರೇಶ ನ್ಯಾಮಗೌಡರ, ವಿನೋದ ಸಿಂಪಿ, ಶಶಿಕಾಂತ ಮುಕ್ಕೆನ್ನವರ, ಚೇತನ ಕಲಾಲ, ರವಿ ಹುಣಶ್ಯಾಳ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.