ರೈಲು ಬಸ್‌ ಸಂಚಾರ ಪುನಾರಂಭ ಯಾವಾಗ?

ವರ್ಷದ ಹಿಂದೆ ಆರಂಭಗೊಂಡಿದ್ದ ಸೇವೆ ಒಂದೇ ತಿಂಗಳಲ್ಲಿ ಸ್ಥಗಿತ • ಸಾರ್ವಜನಿಕರ ಕನಸು ನನಸಾಗುವಷ್ಟರಲ್ಲೇ ಮತ್ತೆ ಕನಸಾಯ್ತು!

Team Udayavani, Jun 15, 2019, 9:36 AM IST

bk-tdy-1..

ಕಲಾದಗಿ: ಬಾಗಲಕೋಟೆ-ಖಜ್ಜಿಡೋಣಿ ರೈಲು ಬಸ್‌ ಖಜ್ಜಿಡೋಣಿ ರೈಲ್ವೆ ನಿಲ್ದಾಣದಲ್ಲಿ ನಿಂತಿರುವುದು. (ಸಾಂದರ್ಭಿಕ ಚಿತ್ರ)

ಕಲಾದಗಿ: ಬಾಗಲಕೋಟೆ -ಕುಡಚಿ ರೈಲು ಮಾರ್ಗ ಖಜ್ಜಿಡೋಣಿವರಗೆ ಮುಗಿದಿದ್ದು, ಈ ಮಾರ್ಗದಲ್ಲಿ ರೈಲ್ ಬಸ್‌ ಸಂಚಾರ ಆರಂಭವಾಗಿ ವರ್ಷವಾಗುವುದರೊಳಗೆ ಸ್ಥಗಿತಗೊಂಡಿದೆ. ಈ ಒಂದು ವರ್ಷದಲ್ಲಿ ರೈಲ್ ಬಸ್‌ ಖಜ್ಜಿಡೋಣಿ ನಿಲ್ದಾಣಕ್ಕೆ ಬಂದ ದಿನಕ್ಕಿಂತ ಬಾರದ ದಿನಗಳೇ ಹೆಚ್ಚು. ಇದರಿಂದ ಈ ಭಾಗದ ಜನರ ರೈಲು ಸಂಚಾರದ ಕನಸು ಕನಸಾಗಿಯೇ ಉಳಿದಿದೆ.

ಹೌದು, ಬಾಗಲಕೋಟೆ-ಕುಡಚಿ ರೈಲು ಮಾರ್ಗ ಜಿಲ್ಲೆಯ ಜನರ ಸ್ವಾತಂತ್ರ್ಯಪೂರ್ವ ಬೇಡಿಕೆಯಾಗಿದೆ. ಈ ರೈಲು ಮಾರ್ಗ ಕಾಮಗಾರಿ 2009ರಲ್ಲಿ ಆರಂಭವಾಗಿದ್ದು, 2017ರಲ್ಲಿ ಖಜ್ಜಿಡೋಣಿವರೆಗೆ 33 ಕಿ.ಮೀ. ಕಾಮಗಾರಿ ಮುಕ್ತಾಯಗೊಂಡಿದೆ. ಈ ಮಾರ್ಗ ವ್ಯಾಪ್ತಿ ಬರುವ ಜನರ ಅನುಕೂಲಕ್ಕಾಗಿ 2018, ಜೂನ್‌ 15ರಂದು ರೈಲು ಬಸ್‌ ಸೇವೆ ಆರಂಭಿಸಲಾಗಿತ್ತು. ಆದರೆ, ಈ ಸೇವೆ ಆರಂಭಗೊಂಡ ಒಂದು ತಿಂಗಳಲ್ಲಿಯೇ ಸ್ಥಗಿತಗೊಂಡಿದೆ. ಹೀಗಾಗಿ ಈ ಭಾಗದ ಜನರಿಗೆ ರೈಲು ಸಂಚಾರ ಕನಸು ಕನಸಾಗಗೇ ಉಳಿದಿದೆ.

ಜನಪ್ರತಿನಿಧಿಗಳ ನಿರ್ಲಕ್ಷ್ಯ: ಬಾಗಲಕೋಟೆ ಜಿಲ್ಲೆಯ ಜನರ ಬಹುನಿರೀಕ್ಷೆಯ ಮಹತ್ವಕಾಂಕ್ಷೆಯ ಬಾಗಲಕೋಟೆ-ಕುಡಚಿ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಮಂದ ಗತಿಯಲ್ಲಿ ಸಾಗಲು ಜನಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆಯೇ ಕಾರಣ. ರೈಲು ಮಾರ್ಗ ಪೂರ್ಣಗೊಂಡ ಮಾರ್ಗ ಮಧ್ಯೆ ರೈಲು ಬಸ್‌ ಸಂಚಾರ ನಡೆಯುವಂತೆ ನೋಡಿಕೊಳ್ಳುವುದರಲ್ಲೂ ತಮ್ಮ ಇಚ್ಚಾಶಕ್ತಿ ತೋರುತ್ತಿಲ್ಲ ಎಂದು ಈ ಭಾಗದ ಜನರ ಆರೋಪ. ಆದರೆ, ಬಾಗಲಕೋಟೆ-ಖಜ್ಜಿಡೋಣಿ ರೈಲು ಮಾರ್ಗದಲ್ಲಿ ರೈಲು ಬಸ್‌ ಸಂಚಾರ ಸ್ಥಗಿತಗೊಳ್ಳಲು ಪ್ರಯಾಣಿಕರ ಕೊರತೆ ಪ್ರಮುಖ ಕಾರಣ ಎಂದು ರೈಲ್ವೆ ಅಧಿಕಾರಿಯೊಬ್ಬರು ಪತ್ರಿಕೆಗೆ ತಿಳಿಸಿದ್ದಾರೆ.

ಪುನರಾರಂಭಕ್ಕೆ ಆಗ್ರಹ: ಖಜ್ಜಿಡೋಣಿ, ಕಲಾದಗಿ, ಹಿರೇಶೆಲ್ಲಿಕೇರಿ, ಚಿಕ್ಕಶೆಲ್ಲಿಕೇರಿ, ನೀರಬೂದಿಹಾಳ, ಕೆರಕಲಮಟ್ಟಿ, ಸೂಳಿಕೇರಿ ಇನ್ನಿತರ ಗ್ರಾಮಗಳ ಜನರಿಗೆ ಬಾಗಲಕೋಟೆಗೆ ತೆರಳಲು ರೈಲು ಬಸ್‌ ಸಂಚಾರ ಅನುಕೂಲವಾಗಿದೆ. ಈ ರೈಲು ಬಸ್‌ ಸಂಚಾರವನ್ನು ಪುನರಾರಂಭಿಸಬೇಕೆಂದು ಈ ಭಾಗದ ಜನರು ಆಗ್ರಹಿಸಿದ್ದಾರೆ.

•ಚಂದ್ರಶೇಖರ ಆರ್‌.ಎಚ್

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.