ಬಸ್‌ ನಿಲ್ದಾಣ ಉದ್ಘಾಟನೆ ಎಂದು?


Team Udayavani, Oct 20, 2019, 12:45 PM IST

bk-tdy-4

ಅಮೀನಗಡ: ಬರೋಬ್ಬರಿ ಅರ್ಧಕೋಟಿ ಖರ್ಚು ಮಾಡಿ ಪ್ರಯಾಣಿಕರಿಗೆ ಅನುಕೂಲವಾಗಲೆಂದು ನಿರ್ಮಿಸಿದ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣ ಅನಾಥವಾಗಿ ನಿಂತಿದೆ. ಸೂಳೇಭಾವಿ ಸುಂದರ ಬಸ್‌ ನಿಲ್ದಾಣ ನಿರ್ಮಾಣಗೊಂಡು ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ.

ಹೌದು, ಸೂಳೇಭಾವಿ ಗ್ರಾಮದ ಬಹುದಿನಗಳ ಬೇಡಿಕೆ ನೂತನ ಬಸ್‌ ನಿಲ್ದಾಣ ಕಾಮಗಾರಿ ಬಹುತೇಕ ಮುಗಿದಿದೆ. ಸುಣ್ಣ-ಬಣ್ಣಗಳಿಂದ ಕಂಗೊಳಿಸುತ್ತಿರುವ ಬಸ್‌ ನಿಲ್ದಾಣ ಈಗ ಉದ್ಘಾಟನೆಗೆ ಸಜ್ಜಾಗಿದೆ. 50 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣದ ಕಾಮಗಾರಿ ಪೂರ್ಣಗೊಂಡು ಆಗಲೇ ಒಂದು ವರ್ಷ ಕಳೆದಿವೆ. ಹೊಸ ಬಸ್‌ ನಿಲ್ದಾಣ ಉದ್ಘಾಟನೆ ಕಂಡಿಲ್ಲ. ಹೀಗಾಗಿ ಹೊಸದಾಗಿ ಅಳವಡಿಸಿದ್ದ ಕಿಟಕಿ, ಗಾಜು ಎಲ್ಲವೂ ಪುಡಿಯಾಗಿವೆ. ವರ್ಷವಾದರೂ ಕೂಡಾ ಉದ್ಘಾಟನೆ ಭಾಗ್ಯ ಕಾಣದ ಗ್ರಾಮದ ನೂತನ ಬಸ್‌ ನಿಲ್ದಾಣದಲ್ಲಿ ರಾತ್ರಿಯಾಗುತ್ತಿದ್ದಂತೆ ಕೆಲ ಕಿಡಿಗೇಡಿಗಳ ಕಾಟ ಹೆಚ್ಚುತ್ತದೆ.

ಕೆಲವರು ಬಸ್‌ ನಿಲ್ದಾಣದ ಕಟ್ಟಡದಲ್ಲಿ ಮಧ್ಯ ಸೇವಿಸುತ್ತಿದ್ದಾರೆ. ಎಲ್ಲೆಂದರಲ್ಲಿ ಮದ್ಯದ ಬಾಟಲಿ, ಪೌಚಗಳು ಬಿದ್ದಿವೆ. ಸ್ವಚ್ಚತೆ ಸಿಬ್ಬಂದಿ ಇಲ್ಲದಿರುವುದರಿಂದ ಅಸ್ವಚ್ಚತೆ ವಾತಾವರಣ ನಿರ್ಮಾಣವಾಗಿದೆ. ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದೆ. ಗುಟ್ಕಾ ತಿಂದು ಉಗಿಯಲಾಗಿದೆ. ಕಸ ಕಡ್ಡಿ ಪ್ಲಾಸ್ಟಿಕ, ಸಿಗರೇಟ್‌ ಪ್ಯಾಕ್‌ ಸೇರಿದಂತೆ ಎಲ್ಲೆಂದರಲ್ಲಿ ಉಗುಳುವ ಮೂಲಕ ಹೊಸ ಬಸ್‌ ನಿಲ್ದಾಣ ನೋಡಲಾಗದ ಸ್ಥಿತಿ ತಲುಪಿದೆ. ಕೆಲ ಕಿಡಿಗೇಡಿಗಳು ನೂತನವಾಗಿ ನಿರ್ಮಾಣಗೊಂಡ ಬಸ್‌ ನಿಲ್ದಾಣದ ಕಿಟಕಿಯ ಗ್ಲಾಸ್‌ ಮುರಿದು ಹಾಕಿದ್ದಾರೆ.

ಶೌಚಾಲಯ ಸುತ್ತ ಕಸದ ರಾಶಿ: ನೂತನವಾಗಿ ನಿರ್ಮಾಣವಾಗಿರುವ ಸೂಳೇಭಾವಿ ಬಸ್‌ ನಿಲ್ದಾಣದಲ್ಲಿ ನಿರ್ಮಾಣಗೊಂಡ ಶೌಚಾಲಯಗಳ ಸುತ್ತ ಕಸದ ಗಿಡಗಳು ಬೆಳೆದು ನಿಂತಿವೆ. ಅಲ್ಲಿಗೆ ಹೋಗಿ ಬರಲು ಸಾಧ್ಯವಾಗದಷ್ಟು ಈ ಕಸದ ಗಿಡಗಳು ಬೆಳೆದು ನಿಂತಿವೆ. ಆವರಣದ ಸುತ್ತಲಿನ ಪ್ರದೇಶ ಸ್ವಚ್ಚವಾಗಿಟ್ಟುಕೊಳ್ಳುವಲ್ಲಿ ಸಾರಿಗೆ ಸಂಸ್ಥೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕೂಡಲೇ ಸಾರಿಗೆ ಸಂಸ್ಥೆಯ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಇನ್ನಾದರೂ ಸೂಳೇಬಾವಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಬಸ್‌ ನಿಲ್ದಾಣ ಉದ್ಘಾಟಿಸಿ, ಪ್ರಯಾಣಿಕರ ಸೌಲಭ್ಯ ಕಲ್ಪಿಸಬೇಕು. ಸೇವೆಗೆ ಒದಗುವ ಮೊದಲೇ ಕಿಟಕಿ-ಗಾಜು ಪುಡಿಯಾಗಿದ್ದು ದುರಸ್ತಿ ಮಾಡಬೇಕು. ಬಸ್‌ ನಿಲ್ದಾಣದ ಆವರಣ ಸುತ್ತ ಸ್ವತ್ಛತೆ ಮಾಡಬೇಕು ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.

ತಾಂತ್ರಿಕ ತೊಂದರೆಯಿಂದ ಉದ್ಘಾಟನೆ ತಡವಾಗಿದೆ. ಹಿರಿಯ ಅಧಿಕಾರಿಗಳ, ಕ್ಷೇತ್ರದ ಶಾಸಕರ ಜತೆ ಚರ್ಚೆ ಮಾಡಿ ಶೀಘ್ರ ಸೂಳೇಭಾವಿಯಲ್ಲಿ ಬಸ್‌ ನಿಲ್ದಾಣ ಉದ್ಘಾಟನೆ ಮಾಡಲಾಗುವುದು. ಬಸ್‌ ನಿಲ್ದಾಣ ಆವರಣದಲ್ಲಿ ಮುಂದಿನ ವರ್ಷ ಡಾಂಬರಿಕರಣ ಕಾಮಗಾರಿ ಮಾಡಲಾಗುವುದು. ಎಸ್‌.ಪಿ. ಕಡ್ಲಿಮಟ್ಟಿ, ಇಂಜಿನಿಯರ್‌, ಸಾರಿಗೆ ಸಂಸ್ಥೆ

 ಸೂಳೇಭಾವಿಯ ಬಹುದಿನಗಳ ಕನಸು ಬಸ್‌ ನಿಲ್ದಾಣ ನಿರ್ಮಾಣಗೊಂಡಿದ್ದು ನಮಗೆ ಸಂತಸವಾಗಿದೆ. ಆದರೆ ಬಸ್‌ ನಿಲ್ದಾಣ ನಿರ್ಮಾಣಗೊಂಡು ವರ್ಷವಾದರೂ ಉದ್ಘಾಟನೆಯಾಗಿಲ್ಲ . ಇದರಿಂದ ಹೊಸ ಬಸ್‌ ನಿಲ್ದಾಣದಲ್ಲಿ ಅಸ್ವಚ್ಚತೆ ನಿರ್ಮಾಣವಾಗಿದೆ. ಕೂಡಲೇ ಉದ್ಘಾಟಿಸಿ ಪ್ರಯಾಣಿಕರ ಉಪಯೋಗಕ್ಕೆ ಮುಕ್ತಗೊಳಿಸಬೇಕು.-ನಾಗೇಂದ್ರಸಾ ನಿರಂಜನ್‌, ಅಧ್ಯಕ್ಷರು, ಸೂಳೇಭಾವಿ ಗ್ರಾಪಂ

 

-ವಿಶೇಷ ವರದಿ

 

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.