ಕೆಬಿಜೆಎನ್ನೆಲ್‌ ಎಂಡಿ ಕಚೇರಿ ಸ್ಥಳಾಂತರ ಎಂದು?


Team Udayavani, Feb 19, 2020, 11:34 AM IST

bk-tdy-1

ಸಾಂಧರ್ಬಿಕ ಚಿತ್ರ

ಆಲಮಟ್ಟಿ: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕೆಲ ಕಚೇರಿಗಳನ್ನು ಅತೀ ಹಿಂದುಳಿದ ಜಿಲ್ಲೆಗಳಿಗೆ ವರ್ಗಾಯಿಸಿದ್ದರೂ ಕೂಡ ಅಧಿಕಾರಿಗಳು ಲಾಬಿಯಿಂದ ತಾವಿರುವ ಸ್ಥಳದಲ್ಲೇ ಕಾರ್ಯ ಮುಂದುವರಿಸಿದ್ದು, ಇದರಿಂದ ಅಭಿವೃದ್ಧಿ ಆಗುವುದಾದರೂ ಯಾವಾಗ ಎಂದು ಜನರು ಆಸೆಗಣ್ಣಿನಿಂದ ನೋಡುವಂತಾಗಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿರುವ ಟಿ.ಎಂ.ಭಾಸ್ಕರರಾವ್‌ 2020 ಫೆ.2ರಂದು ಆದೇಶ ಹೊರಡಿಸಿ ವರ್ಗಾವಣೆಯಾಗಿರುವ ಕಚೇರಿಗಳು 2020 ಫೆ.17ರೊಳಗೆ ಸ್ಥಳಾಂತರಿಸುವಂತೆ ಹಾಗೂ ಪಾಲನೆಯಾದ ಕ್ರಮ ಕುರಿತು ತಿಳಿಸಲು ಸೂಚಿಸಿದ್ದರು. ಆದರೆ ಸರ್ಕಾರದ ಆದೇಶದಂತೆ ಕಚೇರಿ ಮಾತ್ರ ಇನ್ನೂ ಆರಂಭಗೊಂಡಿಲ್ಲ.

ಕಚೇರಿ ಸ್ಥಳಾಂತರಿಸಲು ಹಿಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಯವರು 2018ರಲ್ಲಿ ಕೆಲ ಕಚೇರಿಗಳನ್ನು ಹಿಂದುಳಿದ ಪ್ರದೇಶಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು. ನಂತರ 2019 ಸೆ.18ರಂದು ಸಚಿವ ಸಂಪುಟದಲ್ಲಿ ನಿರ್ಣಯಿಸಿದಂತೆ ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಯನ್ನು ತೀವ್ರಗೊಳಿಸಲು ಹಾಗೂ ಆ ಭಾಗದ ನಾಗರಿಕರಿಗೆ ರಾಜ್ಯಾಡಳಿತ ಹತ್ತಿರವಾಗಲು ರಾಜ್ಯ ಸರ್ಕಾರದ ಕಚೇರಿಗಳಾಗಿರುವ ಆಲಮಟ್ಟಿಗೆ ಕೃಷ್ಣಾ ಭಾಗ್ಯ ಜಲ ನಿಗಮ ವ್ಯವಸ್ಥಾಪಕ ನಿರ್ದೇಶಕರ ಕಚೇರಿ, ದಾವಣಗೆರೆಗೆ ಕರ್ನಾಟಕ ನೀರಾವರಿ ನಿಗಮ, ಬೆಳಗಾವಿಗೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ, ಸಕ್ಕರೆ ನಿರ್ದೇಶಕ ಕಚೇರಿ, ಹುಬ್ಬಳ್ಳಿಗೆ ನಗರಾಭಿವೃದ್ಧಿ ಇಲಾಖೆ, ಹಂಪಿಗೆ ಪ್ರವಾಸೋದ್ಯಮ ಇಲಾಖೆ, ಧಾರವಾಡಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಜಾಗೃತ ವಿಭಾಗ) ಮತ್ತು ಕಾನೂನು ಇಲಾಖೆ, ಕಲಬುರಗಿ ಹಾಗೂ ಬೆಳಗಾವಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯನ್ನು ಸ್ಥಳಾಂತರಿಸಲು ಆದೇಶಿಸಲಾಗಿತ್ತು.

ಅದರನ್ವಯ ಕಚೇರಿಗಳು ವರ್ಗಾವಣೆಗೊಂಡ ಸ್ಥಳಕ್ಕೆ ಬಾರದೇ ಇರುವುದರಿಂದ ಸರ್ಕಾರ ಮತ್ತೆ ಆದೇಶ ಹೊರಡಿಸಲಾಗಿದ್ದು, ಹಿರಿಯ ಅಧಿಕಾರಿಗಳು ಈಗಲಾದರೂ ಸರ್ಕಾರದ ಆದೇಶ ಪಾಲನೆ ಮಾಡಿ ವರ್ಗಾವಣೆಗೊಂಡಿರುವ ಕಚೇರಿಗಳಿಗೆ ತೆರಳಿ ಕಾರ್ಯ ನಿರ್ವಹಿಸಬೇಕಿದೆ. ಸಮಗ್ರ ಕರ್ನಾಟಕ ಅಭಿವೃದ್ಧಿಯ ಹಿತದೃಷ್ಟಿಯಿಂದ ದಕ್ಷಿಣ ಭಾಗದಲ್ಲಿಯೇ ಕೇಂದ್ರೀಕೃತವಾಗಿರುವ ಕಚೇರಿಗಳಲ್ಲಿ ಕೆಲ ಕಚೇರಿಗಳನ್ನು ಉತ್ತರ ಕರ್ನಾಟಕ ಭಾಗಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಅಧಿವೇಶನದಲ್ಲಿ ಘೋಷಿಸಿ 2019ರ ಏ.1ರಿಂದ ಕಾರ್ಯಾರಂಭ ಮಾಡಲು 10-1-2019ರಂದು ಆದೇಶಿಸಲಾಗಿತ್ತು. ಸಿಎಂ ಕುಮಾರಸ್ವಾಮಿಯವರು ಬೆಂಗಳೂರಿನಲ್ಲಿರುವ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ಕೃಷ್ಣಾಭಾಗ್ಯ ಜಲನಿಗಮದ ಆಡಳಿತ ಕಚೇರಿಯನ್ನು ನೋಂದಾಯಿತ ಆಡಳಿತ ಕಚೇರಿ ಆಲಮಟ್ಟಿಗೆ ಹಾಗೂ ಕರ್ನಾಟಕ ನೀರಾವರಿ ನಿಗಮವನ್ನು ದಾವಣಗೆರೆಗೆ ಸ್ಥಳಾಂತರಿಸಿದ್ದರು.

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (ವಿದ್ಯುತ್‌ ಮಗ್ಗಗಳ ಅಭಿವೃದ್ಧಿ ನಿಗಮ) ಹಾಗೂ ಸಕ್ಕರೆ ನಿರ್ದೇಶಕರು ಮತ್ತು ಕಬ್ಬು ಅಭಿವೃದ್ಧಿ ಆಯುಕ್ತರ ಕೇಂದ್ರ ಕಚೇರಿಗಳನ್ನು ಬೆಳಗಾವಿಗೆ, ನಗರಾಭಿವೃದ್ಧಿ ಇಲಾಖೆ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯನ್ನು ವಿಭಜಿಸಿ ಉತ್ತರ ಕರ್ನಾಟಕದ ಹುಬ್ಬಳ್ಳಿಗೆ ಪ್ರತ್ಯೇಕವಾಗಿ ಸ್ಥಾಪಿಸುವುದು ಹಾಗೂ ಮೈಸೂರಿನಲ್ಲಿದ್ದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರಾ ಇಲಾಖೆಯನ್ನು ಹಂಪಿಗೆ ಹಾಗೂ ಕಾನೂನು ಇಲಾಖೆಯ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರ ಪೈಕಿ ಒಬ್ಬ ಸದಸ್ಯರ ಚೇರಿಯನ್ನು ಧಾರವಾಡಕ್ಕೆ ಸ್ಥಳಾಂತರಿಸಲಾಗಿತ್ತು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ರಾಜ್ಯ ಮಾಹಿತಿ ಆಯೋಗದ ಆಯುಕ್ತರ ಪೈಕಿ ಎರಡು ಮಾಹಿತಿ ಆಯುಕ್ತರ ಕಚೇರಿಗಳಲ್ಲಿ ಒಂದು ಪೀಠ ಕಲ್ಬುರ್ಗಿಗೆ ಹಾಗೂ ಒಂದು ಪೀಠ ಬೆಳಗಾವಿಗೆ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕರ್ನಾಟಕ ಲೋಕಾಯುಕ್ತದಲ್ಲಿರುವ ಎರಡು ಉಪ ಲೋಕಾಯುಕ್ತ ಕಚೇರಿಗಳ ಪೈಕಿ ಒಂದು ಉಪ ಲೋಕಾಯುಕ್ತ ಕಚೇರಿಯನ್ನು ಧಾರವಾಡಕ್ಕೆ ಸ್ಥಳಾತರಿಸಿ ಒಟ್ಟು 9 ಕಚೇರಿಗಳನ್ನು ಸ್ಥಳಾಂತರಿಸಿ 2019ರ ಏ. 1ರಂದು ಜಾರಿಗೆ ಬರುತ್ತದೆ ಎಂದು ತಿಳಿಸಲಾಗಿದ್ದರೂ ಕಚೇರಿಗಳು ಬಾರದೇ ಇರುವುದರಿಂದ ಮತ್ತೆ ನೂತನವಾಗಿ 23-9-2019ರಂದು ಸರ್ಕಾರದ ವತಿಯಿಂದ ಮತ್ತೂಮ್ಮೆ ಆದೇಶ ಹೊರಡಿಸಿ ಸ್ಥಳಾಂತರಗೊಳ್ಳದ ಕಚೇರಿಗಳು ಅಕ್ಟೋಬರ್‌ ಅಂತ್ಯದೊಳಗೆ ಸ್ಥಳಾಂತರಗೊಳ್ಳಬೇಕೆಂದು ಮತ್ತೆ ಆದೇಶ ನೀಡಿತ್ತು.

ಇದರಿಂದ ವಿಚಲಿತರಾದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ದಶಕಗಳಿಂದ ರಾಜಧಾನಿಯಲ್ಲಯೇ ಉಳಿದುಕೊಂಡಿದ್ದ ನೌಕರರು ತಮ್ಮ ಕುತಂತ್ರ ಬುದ್ಧಿ ಬಳಸಿ ಆಲಮಟ್ಟಿಯಲ್ಲಿರುವ ಕಚೇರಿಗೆ ಬಾರದೇ ಕಚೇರಿಯ ನಾಮಫಲಕದಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರು ನೋಂದಾಯಿತ ಕಚೇರಿ ಆಲಮಟ್ಟಿ ಎಂದು ಬರೆದು ಅದರ ಕೆಳಭಾಗದಲ್ಲಿ ಸಂಪರ್ಕ ಕಚೇರಿ ಪಿಡಬ್ಲ್ಯೂಡಿ ಕಚೇರಿ ಪೂರಕ ಕಟ್ಟಡ 3ನೇಮಹಡಿ, ಕೆ.ಆರ್‌.ವೃತ್ತ ಬೆಂಗಳೂರು ಎಂದು ನಮೂದಿಸಿದ್ದಾರೆ. ಇದರಿಂದ ಮತ್ತೆ ಎಂ.ಡಿ.ಯವರ ಕಚೇರಿಯನ್ನು ಬೆಂಗಳೂರಿನಲ್ಲೇ ಉಳಿಸಿಕೊಂಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿಯವರು ಅಧಿವೇಶನದಲ್ಲಿ ನೀಡಿದ ಭರವಸೆಗಳು ಹಾಗೂ ಸರ್ಕಾರದ ಆದೇಶಗಳಿಗೆ ಕವಡೆಕಾಸಿನ ಕಿಮ್ಮತ್ತಿಲ್ಲವೇ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೌಲಭ್ಯಗಳಿದ್ದರೂ ಬಾರದ ಕಚೇರಿ: ಕೋಟ್ಯಂತರ ರೂ.ಗಳನ್ನು ವ್ಯಯ ಮಾಡಿ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಆಡಳಿತಾತ್ಮಕ ಹಾಗೂ ಆರ್ಥಿಕ ವಿಭಾಗದ ಇಬ್ಬರು ವ್ಯವಸ್ಥಾಪಕ ನಿರ್ದೇಶಕರು, ತಾಂತ್ರಿಕ ಸಿಬ್ಬಂದಿ ಹೀಗೆ ಎಲ್ಲ ಅಧಿಕಾರಿಗಳಿಗೆ ಅನುಕೂಲವಾಗುವಂತೆ ಬೃಹತ್‌ ಕಟ್ಟಡ ನಿರ್ಮಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಎಲ್ಲ ಅ ಧಿಕಾರಿಗಳು ವಾಸಿಸಲು ಸುಸಜ್ಜಿತ ಎಲ್ಲ ಸೌಲಭ್ಯ ಹೊಂದಿರುವ ಬಂಗಲೆಗಳು ಇಂದು ಬೂತ ಬಂಗಲೆಗಳಂತೆ ಬಿಕೋ ಎನ್ನುವಂತಾಗಿವೆ.

ಉತ್ತರ ಕರ್ನಾಟಕದವರೇ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನ ಎಂ.ಡಿ.ಕಚೇರಿಯಲ್ಲಿದ್ದಾರೆ. ಅವರು ಅಲ್ಲಿಯೇ ವಾಸಿಸಲು ಎಲ್ಲ ವ್ಯವಸ್ಥೆ ಮಾಡಿಕೊಂಡಿದ್ದಾರೆ. ದಕ್ಷಿಣದಿಂದ ಉತ್ತರಕ್ಕೆ ಬರಲಾಗದ ಸಿಬ್ಬಂದಿಗಳ ಮೇಲೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಹೆಸರು ಹೇಳಲು ಇಚ್ಚಿಸದ ಕೃಷ್ಣಾ ಭಾಗ್ಯಜಲನಿಗಮದ ಉದ್ಯೋಗಿ

 

-ಶಂಕರ ಜಲ್ಲಿ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.