ಪ್ರಯಾಣಿಕರ ಗೋಳು ಕೇಳ್ಳೋರ್ಯಾರು?  

ನೂರಾರು ಸಮಸ್ಯೆಗಳ ಆಗರವಾಗಿದೆ ನಾಲ್ಕು ರಾಜ್ಯಗಳ ಮಧ್ಯ ವರ್ತುಲವಾದ ಗದ್ದನಕೇರಿ ಕ್ರಾಸ್‌

Team Udayavani, Mar 30, 2022, 5:17 PM IST

passenger

ಬಾಗಲಕೋಟೆ: ಇದು ನಾಲ್ಕು ರಾಜ್ಯಗಳಿಗೆ ತೆರಳುವಾಗ ಮಧ್ಯ ಸಿಗುವ ಪ್ರಮುಖ ವರ್ತುಲ. ಮಹಾರಾಷ್ಟ್ರ, ಕರ್ನಾಟಕ, ಕೇರಳ ಹಾಗೂ ಗೋವಾ ರಾಜ್ಯಗಳಿಗೆ ರಸ್ತೆ ಮಾರ್ಗದ ಮೂಲಕ ತೆರಳುವ ಪ್ರತಿಯೊಬ್ಬರೂ ಇಲ್ಲಿಂದಲೇ ಸಾಗಬೇಕು. ಆದರೆ ಹಲವು ಇಲಾಖೆಗಳ ನಿರ್ಲಕ್ಷ್ಯದಿಂದ ಪ್ರಯಾಣಿಕರು ತೀವ್ರ ಸಂಕಷ್ಟ-ಸಮಸ್ಯೆ ಎದುರಿಸುವಂತಾಗಿದೆ. ಹೌದು. ಇದರ ಹೆಸರೇ ಆನದಿನ್ನಿ ಕ್ರಾಸ್‌ (ಗದ್ದನಕೇರಿ ಕ್ರಾಸ್‌). ಮಹಾರಾಷ್ಟ್ರದಿಂದ ಹುಬ್ಬಳ್ಳಿ, ಕೇರಳಕ್ಕೆ ತೆರಳಬೇಕಾದರೆ, ಆಂಧ್ರಪ್ರದೇಶದಿಂದ ರಾಜ್ಯದ ಬೆಳಗಾವಿ, ಗೋವಾ ರಾಜ್ಯಕ್ಕೆ ತೆರಳುವ ಬಹುತೇಕ ಸರಕು-ಸಾಗಣೆ ವಾಹನಗಳು ಈ ಮಾರ್ಗದಿಂದ ಸಾಗಬೇಕು. ಹೀಗಾಗಿ ಉತ್ತರ ಕರ್ನಾಟಕದಲ್ಲಿಯೇ ಗದ್ದನಕೇರಿ ಕ್ರಾಸ್‌ ಎಂದೇ ಈ ಪ್ರದೇಶ ಹೆಸರುವಾಸಿಯಾಗಿದೆ. ಜತೆಗೆ ಇದೊಂದು ವ್ಯಾಪಾರಿ ಕೇಂದ್ರವಾಗಿಯೂ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದೆ.

ಬಸ್‌ ನಿಲ್ದಾಣವೇ ಇಲ್ಲ

ಈ ವರ್ತುಲದಲ್ಲಿ ರಾಯಚೂರು-ಬಾಚಿ (ಬೆಳಗಾವಿ), ವಿಜಯಪುರ-ಹುಬ್ಬಳ್ಳಿ, ಗದ್ದನಕೇರಿ-ಬಾಣಾಪುರ ಸಹಿತ ಒಟ್ಟು ಮೂರು ರಾಷ್ಟ್ರೀಯ ಹೆದ್ದಾರಿಗಳು ಸಂಪರ್ಕಿಸುತ್ತವೆ. ಜತೆಗೆ ಇಲ್ಲಿ 24 ಗಂಟೆಯೂ ವಿವಿಧ ವ್ಯಾಪಾರದ ಅಂಗಡಿಗಳು ಕಾರ್ಯ ನಿರ್ವಹಿಸುತ್ತವೆ. ದೊಡ್ಡ ಹೊಟೇಲ್‌ಗ‌ಳು ಇವೆ. ಎರಡು ಪೆಟ್ರೋಲ್‌ ಬಂಕ್‌ ಇವೆ. ಮುಖ್ಯವಾಗಿ ಬೆಳಗಾವಿಗೆ, ಹುಬ್ಬಳ್ಳಿಗೆ, ರಾಯಚೂರಿಗೆ, ಕೊಪ್ಪಳಕ್ಕೆ, ಗದುಗಿಗೆ, ಬೆಳಗಾವಿ, ಗೋವಾಕ್ಕೆ ತೆರಳುವ ಜನರು ಇಲ್ಲಿಗೆ ಬಂದೇ ಮುಂದೆ ಸಾಗುತ್ತಾರೆ. ಗದ್ದನಕೇರಿ ಕ್ರಾಸ್‌ನ ವರ್ತುಲದ ಬಳಿಕ ಬಾಗಲಕೋಟೆ, ಬೆಳಗಾವಿ, ಹುಬ್ಬಳ್ಳಿ ಮತ್ತು ವಿಜಯಪುರ ತೆರಳುವ ಮಾರ್ಗದಲ್ಲಿ ಒಟ್ಟು ನಾಲ್ಕು ಕಡೆ ಖಾಸಗಿ ವಾಹನ ಸಹಿತ ಬಸ್‌ಗಳ ನಿಲುಗಡೆ ವ್ಯವಸ್ಥೆ ಇದೆ. ಚಿಕ್ಕ ಚಿಕ್ಕ ಬಸ್‌ ತಂಗುದಾಣಗಳಿದ್ದು, ಇಲ್ಲಿ ಎಲ್ಲಾ ಮಾರ್ಗದ ಬಸ್‌ಗಳ ಸಂಚಾರ, ನಿಲುಗಡೆಗೂ ಬಸ್‌ ನಿಲ್ದಾಣ ನಿರ್ಮಿಸಬೇಕೆಂಬ ಬೇಡಿಕೆಗೆ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಈ ನಾಲ್ಕೂ ಮಾರ್ಗದ ಬಸ್‌, ಕಾರು ಸಹಿತ ಎಲ್ಲ ವಾಹನ ಹೆದ್ದಾರಿಯ ರಸ್ತೆಯಲ್ಲೇ ನಿಲ್ಲುತ್ತವೆ. ಇದರಿಂದ ಸಾಕಷ್ಟು ಬಾರಿ ಅಪಘಾತ, ಗಲಾಟೆ ಕೂಡ ಆಗಿವೆ.

ಸಮಸ್ಯೆಗಳ ಆಗರ

ಇಂತಹ ಪ್ರಮುಖ ವರ್ತುಲ, ನಾಲ್ಕು ರಾಜ್ಯಗಳಿಗೆ ತೆರಳುವ ಪ್ರಮುಖ ಹೆದ್ದಾರಿಗಳನ್ನು ಸಂಪರ್ಕಿಸುವ ಸ್ಥಳದಲ್ಲಿ ಪ್ರಯಾಣಿಕರ ಶೌಚಕ್ಕಾಗಿ ನಿರ್ಮಿಸಿದ ಶೌಚಾಲಯ ಬಾಗಿಲೇ ತೆರೆಯುತ್ತಿಲ್ಲ. ಹೀಗಾಗಿ ಜನರು, ರಸ್ತೆಯ ಪಕ್ಕದಲ್ಲಿ ಮೂತ್ರಿಗೆ ಹೋಗಬೇಕಾದ ಅನಿವಾರ್ಯತೆ ಇದೆ. ಪುರುಷರಾದರೆ, ರಸ್ತೆಯ ಪಕ್ಕ ಹೋಗ್ತಾರೆ, ಮಹಿಳೆಯರ ಪರಿಸ್ಥಿತಿ ಹೇಳಲಸಾಧ್ಯ. ಮುಖ್ಯವಾಗಿ ನಾಲ್ಕು ಪ್ರಮುಖ ಹೆದ್ದಾರಿಗಳು ಸಾಗುವ ಇಲ್ಲಿ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆಯೇ ಇಲ್ಲ. ಇಲ್ಲಿದ್ದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದ್ದು, ಕುಡಿಯುವ ನೀರಿನ ಅರವಟ್ಟಿಗೆ ಇಡಲೂ ಇಲ್ಲಿ ಸೂಕ್ತ ಸ್ಥಳವಿಲ್ಲ. ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಇದೆ. ಒಟ್ಟಾರೆ ಇಂತಹ ಪ್ರಮುಖ ವರ್ತುಲದಲ್ಲಿ ಕುಡಿಯುವ ನೀರು, ಶೌಚಾಲಯ, ಬಸ್‌ ನಿಲ್ದಾಣ ಸಹಿತ ಪ್ರಯಾಣಿಕರಿಗೆ ಅಗತ್ಯವಾದ ಸೌಲಭ್ಯ ಕಲ್ಪಿಸಬೇಕೆಂಬ ಒತ್ತಾಯ ತೀವ್ರವಾಗಿ ಕೇಳಿ ಬರುತ್ತಿದೆ.

ಗದ್ದನಕೇರಿ ಕ್ರಾಸ್‌, ಇದೊಂದು ದೊಡ್ಡ ಸಂಪರ್ಕ ವರ್ತುಲವಾಗಿದೆ. ಇಲ್ಲಿನ ವರ್ತುಲ ದೊಡ್ಡದಾಗಿ ನಿರ್ಮಿಸಿದ್ದು, ಬೃಹತ್‌ ಲಾರಿಗಳು ತಿರುವು ಪಡೆಯುವ ವೇಳೆ ಭಾರ ಒಂದೆಡೆ ಬಿದ್ದು ಟೈರ್‌ಗಳು ಬ್ಲಾಸ್ಟ್‌ ಆಗುತ್ತಿವೆ. ಟೈರ್‌ಗಳು ಬೃಹತ್‌ ಬಾಂಬ್‌ ಸ್ಫೋಟದಂತೆ ಶಬ್ದ ಮಾಡುತ್ತಿದ್ದು, ಸುತ್ತಲಿನ ಜನ ಭಯಗೊಳ್ಳುತ್ತಿದ್ದಾರೆ. ಇಲ್ಲಿ ಬಸ್‌ ನಿಲ್ದಾಣ, ಶೌಚಾಲಯ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ನಿರಂತರವಾಗಿರುವಂತೆ ನೋಡಿಕೊಳ್ಳಬೇಕು – ಸಂತೋಷ ಬಜೆಟ್ಟಿ, ಯುವ ಮುಖಂಡ ಗದ್ದನಕೇರಿ.

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.