ಮೋದಿ ಬಂದು ಬಾಗಲಕೋಟೆ ಅಭಿವೃದ್ಧಿ ಮಾಡ್ತಾರಾ?
Team Udayavani, Apr 13, 2019, 1:44 PM IST
ಮಹಾಲಿಂಗಪುರ: ಕಾಂಗ್ರೆಸ್ ಪಕ್ಷ ಉತ್ತರ ಕರ್ನಾಟಕದ ಮಹಿಳೆ ವೀಣಾ ಕಾಶಪ್ಪನವರ ಅವರಿಗೆ ಟಿಕೆಟ್ ನೀಡಿ ಅವಕಾಶ ಕಲ್ಪಿಸಿದೆ. ಎಲ್ಲರೂ ತಮ್ಮ ಮತವನ್ನು ನೀಡಿ ಬದಲಾವಣೆಗೆ ಅವಕಾಶ ನೀಡಬೇಕು ಎಂದು ಮಾಜಿ ಸಚಿವೆ ಉಮಾಶ್ರೀ ಮನವಿ ಮಾಡಿದರು. ಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಬಿಜೆಪಿ ಅಭ್ಯರ್ಥಿಗಳು ತಮಗೆ ಮತ ನೀಡಿ ಅನ್ನುತ್ತಿಲ್ಲ. ಮೋದಿ ನೋಡಿ ಮತ ನೀಡಿ ಎಂದು ಕೇಳುತ್ತಾರೆ. ಮೋದಿ ಬಂದು ಜಿಲ್ಲೆಯ ಅಭಿವೃದ್ಧಿ ಮಾಡ್ತಾರಾ ಎಂದು ಪ್ರಶ್ನಿಸಿ, ಧರ್ಮದ ಒಡೆದು ಆಳುವ ನೀತಿ ಅನುಸರಿಸುವ ಬಿಜೆಪಿಗೆ ಜನ ತಕ್ಕ
ಪಾಠ ಕಲಿಸಲಿಬೇಕು ಎಂದರು.
ನಮಗೆ 56 ಎದೆಯುಳ್ಳ ವ್ಯಕ್ತಿ ಬೇಕಾಗಿಲ್ಲ. ರೈತರ, ಮಹಿಳೆಯರು, ಜನಸಾಮಾನ್ಯರ ನೋವು ನಲಿವಿಗೆ ಸ್ಪಂದಿಸುವ ಹೃದಯವಂತ ವ್ಯಕ್ತಿ ಬೇಕು. ಪುಲ್ವಾಮಾದಲ್ಲಿ ಸೈನಿಕರ ಸಾವಿಗೆ ಬಿಜೆಪಿ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ ಎಂದು ಆರೋಪಿಸಿದರು.
ಲೋಕಸಭಾ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ ಮಾತನಾಡಿ, ಬಿಜೆಪಿಯವರಿಗೆ ಅಭ್ಯರ್ಥಿ ಬಗ್ಗೆ ನಂಬಿಕೆ ಇಲ್ಲದೇ ಮೋದಿ ನೋಡಿ ವೋಟ್ ಹಾಕಿ ಎಂದು ಮತ ಕೇಳುತ್ತಿದ್ದಾರೆ. ಮತದಾರರು ಎಚ್ಚರಿಕೆಯಿಂದ ಉತ್ತಮರನ್ನು ಗುರುತಿಸಿ ಆಯ್ಕೆ ಮಾಡಬೇಕು ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಎಸ್.ಆರ್. ಪಾಟೀಲ, ಸಕ್ಕರೆ ಸಚಿವ ಆರ್.ಬಿ. ತಿಮ್ಮಾಪುರ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ, ಬಸವರಾಜ ಕೊಣ್ಣೂರ ಉಪಸ್ಥಿತರಿದ್ದರು.
ಕಾಂಗ್ರೆಸ್ ಸರ್ಕಾರ ರೈತರ ಪರವಾಗಿದೆ. ಮೋದಿ ಸರ್ಕಾರ ಮಾರ್ಕೆಟಿಂಗ್ ಮಾಡುವ ಸರ್ಕಾರ. ಸುಳ್ಳು ಹೇಳಿ ಕಣ್ಣಿಗೆ ಮಣ್ಣೇರಚುವ ಕಾರ್ಯವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ಅಭಿವೃದ್ಧಿಗೆ ಶ್ರಮಿಸುವ ವೀಣಾ ಕಾಶಪ್ಪನವರ ಅವರನ್ನು
ಗೆಲ್ಲಿಸಬೇಕು.
ಸಂಯುಕ್ತಾ ಪಾಟೀಲ, ವಿಜಯಪುರ ಡಿಸಿಸಿ ಬ್ಯಾಂಕ್ ನಿರ್ದೇಶಕಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ