ತಾಯಿಯ ಸಾವಿಗೆ ಕಾರಣವಾಯ್ತು ಮಗನ ವಿಡಿಯೋ ಕಾಲ್ !
Team Udayavani, Nov 23, 2020, 11:42 AM IST
ಬಾಗಲಕೋಟೆ: ಮಗನ ವಿಡಿಯೋ ಕಾಲ್, ತಾಯಿಯ ಸಾವಿಗೆ ಕಾರಣವಾದ ಘಟನೆ ಸೋಮವಾರ ಬೆಳಗ್ಗೆ ಜಿಲ್ಲೆಯಲ್ಲಿ ಸಂಭವಿಸಿದೆ.
ಹೌದು, ಯೋಧ ಶೇಖರಯ್ಯ ವಿಭೂತಿ ಮತ್ತು ಪತ್ನಿ ಪುಷ್ಪಾವತಿ ಅವರು ಬೈಕನಲ್ಲಿ ಹುನಗುಂದ ತಾಲೂಕು ಮುಗನೂರ ಬಳಿ ಹೊರಟಿದ್ದರು. ಈ ವೇಳೆ ಯೋಧ ಶೇಖರಯ್ಯ ಅವರ ಪುತ್ರನ ವಿಡಿಯೋ ಕಾಲ್ ಬಂದಿದ್ದು, ಬೈಕ್ ಓಡಿಸುತ್ತಲೇ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತ ಹೊರಟಿದ್ದರು.
ಈ ವೇಳೆ ಮುಗನೂರ ಗ್ರಾಮದ ಬಳಿ ರಸ್ತೆಯಲ್ಲಿ ಹಂಪ್ಸ್ ಇದ್ದು, ಅದನ್ನು ಗಮನಿಸದೆ ಶೇಖರಯ್ಯ ಅವರು ವೇಗವಾಗಿ ಹಂಪ್ಸ್ ಮೇಲಿನಿಂದ ಬೈಕ್ ಜಿಗಿಸಿದ್ದಾರೆ. ಇದರಿಂದ ಬೈಕ್ ನ ಹಿಂಬದಿ ಕುಳುತಿದ್ದ ಪುಷ್ಪಾವತಿ (35) ಆಯತಪ್ಪಿ ರಸ್ತೆಯ ಮೇಲೆ ಬಿದ್ದಿದ್ದಾರೆ. ಆಗ ತಲೆಗೆ ತೀವ್ರ ಪೆಟ್ಟುಬಿದ್ದು ಪುಷ್ಪಾವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಸಿಎಂಗೆ ತಮ್ಮ ಸರ್ಕಾರ ಉಳಿಸಿಕೊಳ್ಳುವುದು ಮುಖ್ಯ, ರೈತರ ಹಿತವಲ್ಲ: ಡಿ ಕೆ ಶಿವಕುಮಾರ್
ಹಿಂಬದಿ ಕುಳಿತ ಪತ್ನಿ ರಸ್ತೆಯ ಮೇಲೆ ಬಿದ್ದು ಸಾವನ್ನಪ್ಪಿರುವುದು ಕಂಡ ಯೋಧ ಶೇಖರಯ್ಯ, ಪತ್ನಿಯ ಶವವನ್ನು ಅಪ್ಪಿ ಗೋಳಾಡಿ ಅಳುತ್ತಿದ್ದ ದೃಶ್ಯ ಮನಕಲುಕುವಂತಿತ್ತು.
ಇಂದು ಬೆಳಿಗ್ಗೆ ಜಮ್ಮು ಕಾಶ್ಮೀರದಲ್ಲಿ ಕರ್ತವ್ಯಕ್ಕೆ ಹೊರಡಬೇಕಿದ್ದ ಯೋಧ, ಪತ್ನಿಯನ್ನು ತವರು ಮನೆ ಹಿರೆಮಳಗಾವಿ ಗ್ರಾಮಕ್ಕೆ ಬಿಡಲು ಹೊರಟಿದ್ದರು.
ಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ