ಲಕ್ಷಾನಟ್ಟಿ ಗ್ರಾಪಂಗೆ ಮಹಿಳೆಯರ ಮುತ್ತಿಗೆ

ಮೂರು ತಿಂಗಳಿಂದ ಸಮರ್ಪಕವಾಗಿ ನೀರು ಪೂರೈಕೆಯಿಲ್ಲ•ನಿತ್ಯದ ಕೆಲಸ ಬಿಟ್ಟು ನೀರು ತರುವ ದುಸ್ಥಿತಿ

Team Udayavani, Jun 12, 2019, 9:41 AM IST

bk-tdy-3..

ಲೋಕಾಪುರ: ಚೌಡಾಪುರದ ಹರಿಜನ ಕಾಲೋನಿಯ ಮಹಿಳೆಯರು ಲಕ್ಷಾನಟ್ಟಿ ಗ್ರಾಪಂಗೆ ಖಾಲಿ ಕೊಡಗಳೊಂದಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಲೋಕಾಪುರ: ಮೂರು ತಿಂಗಳಿಂದ ಕುಡಿಯುವ ನೀರಿನ ಸರಬರಾಜು ಇಲ್ಲದ್ದನ್ನು ಖಂಡಿಸಿ ಚೌಡಾಪುರ ಗ್ರಾಮದ ಎಸ್‌.ಸಿ ಕಾಲೋನಿ ನಿವಾಸಿಗಳು ಹಾಗೂ ಮಹಿಳೆಯರು ಮಂಗಳವಾರ ಖಾಲಿ ಕೊಡಗಳೊಂದಿಗೆ ಲಕ್ಷಾನಟ್ಟಿ ಗ್ರಾಪಂ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕಳೆದ 3 ತಿಂಗಳಿಂದ ಚೌಡಾಪುರ ಎಸ್‌.ಸಿ ಕಾಲೋನಿಯ ಗ್ರಾಮಸ್ಥರು ಕುಡಿಯುವ ನೀರಿಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದು, ಗ್ರಾಮ ಪಂಚಾಯತಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ನಿತ್ಯದ ಕೆಲಸ ಬಿಟ್ಟು ನೀರು ತರುವುದೇ ಒಂದು ಉದ್ಯೋಗವಾಗಿದೆ. ಕೊಡ ನೀರಿಗಾಗಿ 2-3 ಕಿ.ಮೀ ದೂರ ಸಾಗುವ ಅನಿವಾರ್ಯತೆ ಎದುರಾಗಿದ್ದು, ಪಕ್ಕದ ಗ್ರಾಮದಿಂದ ನೀರು ತರಬೇಕಾದ ಅನಿವಾರ್ಯತೆ ಎದುರಾಗಿದೆ. ಕೂಡಲೇ ಸಮರ್ಪಕ ನೀರು ಪೂರೈಸುವಂತೆ ಆಗ್ರಹಿಸಿದರು.

ಕುಡಿಯುವ ನೀರಿನ ಯೋಜನೆ ಮತ್ತು ಕೊಳವೆ ಬಾವಿಗಳಲ್ಲಿ ಅಂತರ್ಜಲ ಪಾತಾಳಕ್ಕೆ ಕುಸಿದಿರುವ ಕಾರಣ ನೀರಿನ ಪೂರೈಕೆ ಬಂದ್‌ ಆಗಿದೆ. ಇದರಿಂದ ಗ್ರಾಮದಲ್ಲಿ ನೀರಿನ ಹಾಹಾಕಾರ ಉಂಟಾಗಿದೆ. ಸಂಬಂಧ ಅಧಿಕಾರಿಗಳು ಕ್ರಮ ವಹಿಸಬೇಕು ಆಗ್ರಹಿಸಿದ್ದಾರೆ. ಗ್ರಾಮದಲ್ಲಿ ಹಲವು ವರ್ಷಗಳಿಂದಲೂ ಕುಡಿಯುವ ನೀರಿಗೆ ಅಭಾವ ಉಂಟಾಗಿತ್ತು. ಈ ಬಗ್ಗೆ ಗ್ರಾಪಂಗೆ ಮನವಿ ಮಾಡಿದರೂ ಅಧಿಕಾರಿಯಾಗಲಿ, ಜನಪ್ರತಿನಿಧಿಯಾಗಲಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವಲ್ಲಿ ಗಂಭೀರ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ನೀರಿನ ಕೊರತೆಯಿಂದ ಬಳಲುತ್ತಿದ್ದು, ತಮ್ಮ ಮನೆಯಿಂದ ಕುಡಿಯಲು ದಿನಾಲು ನೀರಿನ ಬಾಟಲಿಗಳನ್ನು ತೆಗೆದುಕೊಂಡು ಬರುವಂತಾಗಿದೆ. ಇದರಿಂದ ಈ ಶಾಲೆಯಲ್ಲಿ ಅಡುಗೆ ಮಾಡಲು ನೀರಿನ ಕೊರತೆ ಇರುವುದರಿಂದ ಬೇರೆ ಕಡೆಯಿಂದ ನೀರು ತಂದು ಮಾಡುವಂತಹ ಪರಿಸ್ಥಿತಿ ಉಂಟಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮುತ್ತಪ್ಪ ಮಾಳಿ ಮತ್ತು ಈರಪ್ಪ ದೊಡಮನಿ, ಹನಮವ್ವ ಈರಣ್ಣ ಮಾದರ, ಯಲ್ಲವ್ವ ದೊಡಮನಿ, ಗಂಗವ್ವ ಮಾದರ, ಯಮನವ್ವ ದೊಡಮನಿ, ಸುಸಲವ್ವ ದೊಡಮನಿ, ಮಹಾದೇವಿ ಮಾದರ, ಬಸವ್ವ ಮಾದರ, ಹನಮವ್ವ ದೊಡಮನಿ, ರಾಮಣ್ಣ ದೊಡಮನಿ ವೆಂಕಣ್ಣ ದೊಡಮನಿ, ಶಂಕರ ದೊಡಮನಿ, ಹನಮಂತ ದೊಡಮನಿ, ಮಹಾದೇವ ನರಸಾಪುರ, ಪ್ರಜ್ವಲ್ ದೊಡಮನಿ, ಕಾಶಿನಾಥ ದೊಡಮನಿ, ಪುಂಡಲಿಕ ದೊಡಮನಿ, ಮಲ್ಲಪ್ಪ ದೊಡಮನಿ, ಇತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.