ಏತ ನೀರಾವರಿ ಕಾಮಗಾರಿ ವಿಳಂಬ: ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡ ಅಧಿಕಾರಿ
Team Udayavani, Jul 30, 2022, 7:20 PM IST
ರಬಕವಿ-ಬನಹಟ್ಟಿ: ರಬಕವಿ ಬನಹಟ್ಟಿ ಮತ್ತು ಜಮಖಂಡಿ ತಾಲ್ಲೂಕಿನ ಮಹತ್ವದ ನೀರಾವರಿ ಯೋಜನೆಗಳಲ್ಲಿ ಒಂದಾದ ಕುಲಹಳ್ಳಿ ಹುನ್ನೂರ ಏತ ನೀರಾವರಿ ಕಾಮಗಾರಿಯು ವಿಳಂಬವಾಗುತ್ತಿದ್ದು, ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಈ ವೇಳೆ ಲಿಂಗನೂರು ಮಿರಜನ ಗುತ್ತಿಗೆದಾರರ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಗುಂಗೆ, ಆಗಸ್ಟ್ ತಿಂಗಳ ಕೊನೆಗೆ ಕಾಮಗಾರಿಯನ್ನು ಮುಗಿಸಬೇಕು. ಇಲ್ಲದಿದ್ದರೆ ನಿಮ್ಮ ಟೆಂಡರ್ ರದ್ದು ಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಆಗಸ್ಟ್ ನಾಲ್ಕರಂದು ತಾವು ಮತ್ತೆ ಕಾಮಗಾರಿ ಪರಿಶೀಲನೆಗೆ ಬರುತ್ತಿದ್ದೇನೆ. ಅಷ್ಟರಲ್ಲಿ ಇನ್ನಷ್ಟು ಕಾರ್ಮಿಕರನ್ನು ಬಳಸಿಕೊಂಡು ಕೂಡಲೇ ಕಾಮಾಗರಿಯನ್ನು ಮುಕ್ತಾಯಗೊಳಿಸಬೇಕು ಎಂದು ಎಚ್ಚರಿಕೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿ, ಅಗಸ್ಟ್ ಕೊನೆಯ ವಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾಲ್ಲೂಕಿಗೆ ಆಗಮಿಸಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಸಸಾಲಟ್ಟಿ ಏತ ನೀರಾವರಿ ಕಾಮಗಾರಿಗೆ ಭೂಮಿಪೂಜೆ ಮತ್ತು ಕುಲಹಳ್ಳಿ ಹುನ್ನೂರ ಏತ ನೀರಾವರಿ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದರು.
2018 ರಲ್ಲಿ ಕುಲಹಳ್ಳಿ ಹುನ್ನೂರ ಏತ ನೀರಾವರಿ ಟೆಂಡರ್ ಆಗಿದ್ದು ಮಾರ್ಚ್ 2020 ರೊಳಗಾಗಿ ಮುಕ್ತಾಯವಾಗಬೇಕಾಗಿತ್ತು. ಗುತ್ತಿಗೆದಾರರ ಸರಿಯಾಗಿ ಕಾಮಗಾರಿಯನ್ನು ನಿರ್ವಹಣೆ ಮಾಡದೆ ಇರುವುದರಿಂದ ಕಾಮಗಾರಿ ವಿಳಂಬವಾಗಿದೆ. ಆದ್ದರಿಂದ ಕಾಮಗಾರಿಯನ್ನು ಬೇಗನೆ ಮುಕ್ತಾಯಗೊಳಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಶಾಸಕ ಸಿದ್ದು ಸವದಿ ತಿಳಿಸಿದರು.
ಸ್ಥಳೀಯ ರೈತರು ಗುತ್ತಿಗೆದಾರರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು.
ಜಮಖಂಡಿ ಜಿಎಲ್ಬಿಸಿಯ ಅಧೀಕ್ಷಕ ಎಂಜಿನಿಯರ್ ಪ್ರಶಾಂತ ಗಿಡದಾನಪ್ಪಗೋಳ, ಶ್ರೀಧರ ನಂದ್ಯಾಳ, ಆನಂದ ಕಂಪು, ಶಂಕರ ಹುನ್ನೂರ ಸೇರಿದಂತೆ ಅನೇಕ ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್