ಪ್ರತಿನಿತ್ಯ ಯೋಗಭ್ಯಾಸದಿಂದ ಉತ್ತಮ ಆರೋಗ್ಯ: ಶಾಸಕ ಸಿದ್ದು ಸವದಿ


Team Udayavani, Jun 21, 2022, 12:28 PM IST

6

ರಬಕವಿ-ಬನಹಟ್ಟಿ: ನಾವು ಪ್ರತಿನಿತ್ಯ ತಪ್ಪದೇ ಯೋಗ ಮಾಡುವುದರಿಂದ ಉತ್ತಮ ಶಾರೀರಿಕ ಸಂಪತ್ತು ಹೊಂದಬಹುದು ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು.

ಅವರು ಜೂ.21ರಂದು ಬನಹಟ್ಟಿಯ ಎಸ್‌ಆರ್‌ಎ ಮೈದಾನದಲ್ಲಿ ತೇರದಾಳ ಮತಕ್ಷೇತ್ರದ ಬಿಜೆಪಿ ವತಿಯಿಂದ ಆಜಾಧಿ ಕಾ ಅಮೃತಮಹೋತ್ಸವದ 8ನೇ ವಿಶ್ವ ಯೋಗಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯೋಗದ ಆಚರಣೆಗೆ ಯಾವುದೇ ಧರ್ಮ, ಜಾತಿಗಳ ಕಟ್ಟಳೆಗಳಿಲ್ಲ. ವಿಶ್ವದ ಬಹುತೇಕ ಎಲ್ಲ ರಾಷ್ಟ್ರಗಳೂ ಯೋಗದ ಮಹತ್ವ ಅರಿತು ತಮ್ಮ ರಾಷ್ಟ್ರಗಳಲ್ಲಿ ಯೋಗ ಆಚರಣೆ ಮಾಡುತ್ತಾರೆ. ಮುಂದಿನ ಜನಾಂಗ ಸದೃಢ ಮತ್ತು ಮಾನಸಿಕ ಸಕ್ಷಮತೆ ಹೊಂದಬೇಕಾದರೆ ನಾವು ದಿನ ನಿತ್ಯ ಯೋಗಾಚರಣೆಯಲ್ಲಿ ತೊಡಗಬೇಕು ಎಂದರು.

ಸಾನ್ನಿದ್ಯ ವಹಿಸಿದ್ದ ರಬಕವಿ ಗುರುದೇವ ಬ್ರಹ್ಮಾನಂದ ಆಶ್ರಮದ ಗುರುಸಿದ್ದೇಶ್ವರ ಶ್ರೀಗಳು ಮಾತನಾಡಿ, ಆಧುನಿಕ ಭಗೀರಥರಾಗಿ ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಶ್ರೇಯಸ್ಸು ಪ್ರಧಾನ ಮಂತ್ರಿ ಮೋದಿಯವರಿಗೆ ಸಲ್ಲುತ್ತದೆ. ಯೋಗವನ್ನು ಇಡೀ ವಿಶ್ವಕ್ಕೆ ತಲುಪಿಸುವ ಕಾರ್ಯ ಮಾಡಿದ್ದು ಶ್ಲ್ಯಾಘನೀಯ. ನಮ್ಮ ಜೀವನ ಯೋಗಮಯ ಜೀವನವಾಗಬೇಕು. ಯೋಗ ನಮ್ಮ ಜೀವನದ ಕ್ರಮವಾಗಬೇಕು. ಯೋಗದ ಮೂಲಕ ಆರೋಗ್ಯವನ್ನು ಸಾಧಿಸಬೇಕು. ಯೋಗ ಅಭ್ಯಾಸ ಮಾಡಿ ನಮ್ಮ ಜೀವನವನ್ನು ಯೋಗಮಯ ಮಾಡಿಕೊಳ್ಳೋಣ ಆರೋಗ್ಯವನ್ನು ಹೊಂದೋಣ ಎಂದರು.

ಇಡೀ ವಿಶ್ವದ ಮನುಕುಲಕ್ಕೆ ಯೋಗ ವಿದ್ಯೆಯ ಮಹತ್ತ ಸಾರಿದ ದೇಶ ಭಾರತ. ರೋಗ ರಹಿತ ಮನುಕುಲದ ಮುಂದುವರಿಕೆಗೆ ಭಾರತದ ಯೋಗ ದಾನ ಬಹು ಮುಖ್ಯವಾಗಿದೆ. ಸದೃಢ ಮನಸ್ಸು ಹಾಗೂ ದೇಹ ಹೊಂದಬೇಕಾದರೆ ಯೋಗದಿಂದ ಮಾತ್ರ ಸಾಧ್ಯ ಎಂದು ನುಡಿದರು.

ಬನಹಟ್ಟಿ ಹಿರೇಮಠದ ಶರಣಬಸವ ಶಿವಾಚಾರ್ಯರು, ರಾಮಪೂರದ ಸಿದ್ರಾಮ ಶ್ರೀಗಳು, ಹೊಸೂರನ ಸಂಗಮೇಶ್ವರ ಶ್ರೀಗಳು ವೇದಿಕೆಯಲ್ಲಿದ್ದರು.

ಬನಹಟ್ಟಿ ಆರೋಗ್ಯ ಯೋಗಫೀಠ ಫೌಂಡೇಶನ್‌ನ ಡಾ. ಪರಶುರಾಮ ರಾವಳ ಹಾಗೂ ಯೋಗ ಗುರು ಹಾಗೂ ಹಳೆ ಹುಬ್ಬಳ್ಳಿ ವೀರಭಿಕ್ಷಾವರ್ತಿ ಮಠದ ಶ್ರೀ ಶಿವಶಂಕರ ಶಿವಾಚಾರ್ಯ ಶ್ರೀಗಳು ಯೋಗಾಸನ ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂಜಯ ಇಂಗಳೆ, ಬಿಜೆಪಿ ನಗರಘಟಕದ ಅಧ್ಯಕ್ಷ ಧರೆಪ್ಪ ಉಳ್ಳಾಗಡ್ಡಿ, ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಂಜಯ ಹಿಪ್ಪರಗಿ, ಸಿಪಿಐ ಜೆ. ಕರಣೇಶಗೌಡ, ಶ್ರೀಶೈಲ ಬೀಳಗಿ, ಶಿವಾನಂದ ಗಾಯಕವಾಡ, ವಿನಾಯಕ ತಾಂಬಟ, ಮಹಾದೇವ ಕೋಟ್ಯಾಳ, ಕುಮಾರ ಕದಂ, ಬನಹಟ್ಟಿ ಪಿಎಸ್‌ಐ ಸುರೇಶ ಮಂಟೂರ, ಪೌರಾಯುಕ್ತ ಶ್ರೀನಿವಾಸ ಜಾಧವ, ಮಹಾಲಿಂಗಪುರ ಪಿಎಸ್‌ಐ ವಿಜಯ ಕಾಂಬಳೆ, ಪ್ರಭು ಪೂಜಾರಿ, ಪ್ರಭಾಕರ ಮೊಳೇದ, ಗೌರಿ ಮಿಳ್ಳಿ, ವೈಷ್ಣವಿ ಬಾಗೇವಾಡಿ, ಮೀನಾಕ್ಷಿ ಸವದಿ, ಸವಿತಾ ಹೊಸರ, ವಿದ್ಯಾ ಧಬಾಡಿ, ರಾಜೇಂದ್ರ ಅಂಬಲಿ, ಅರುಣ ಬುದ್ನಿ, ಪಿ. ಆರ್. ಮಠಪತಿ, ಸದಾಶಿವ ಪರೀಟ, ಶ್ರೀಶೈಲ ಗಸ್ತಿ ಸೇರಿದಂತೆ ಅನೇಕರು ಇದ್ದರು.‌

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.