ಬಾಗಲಕೋಟೆ: ಯೋಗ ಮಾಡುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು !
Team Udayavani, Jun 21, 2018, 12:14 PM IST
ತೇರದಾಳ: ಅಂತರಾಷ್ಟ್ರೀಯ ಯೋಗ ದಿನದಂದು ಯೋಗಾಸನ ಮಾಡುತ್ತಿದ್ದ ವೇಳೆಯೇ ಹೃದಯಾಘಾತಕ್ಕೊಳಗಾಗಿ ಶಿಕ್ಷಕರೊಬ್ಬರು ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ಗುರುಪುರ ಕ್ಯಾಂಪಸ್ನ ಎಸ್.ಜೆ. ಹೆಣ್ಣು ಮಕ್ಕಳ ಪ್ರೌಢ ಶಾಲೆಯಲ್ಲಿ ಘಟನೆ ನಡೆದಿದ್ದು, ಶಿಕ್ಷಕ ವಿಶ್ವನಾಥ ಬಿರಾದರ್ (50) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಯೋಗಾಸನ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.