ಕೃಷಿ ಕ್ಷೇತ್ರದಿಂದ ಯುವಕರು ವಿಮುಖ: ಡಾ|ಆನಂದ


Team Udayavani, Jan 13, 2020, 11:23 AM IST

bk-tdy-3

ಜಮಖಂಡಿ: ಕೃಷಿ ಕ್ಷೇತ್ರದಿಂದ ಯುವ ರೈತರು ವಿಮುಖರಾಗುತ್ತಿದ್ದಾರೆ ಎಂದು ಸಾವಯವ ಕೃಷಿ ಮಿಷನ್‌ ಅಧ್ಯಕ್ಷ ಡಾ| ಎಸ್‌ ಆನಂದ ಹೇಳಿದರು.

ಮರೇಗುದ್ದಿ ಗ್ರಾಮದಲ್ಲಿ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಕೃಷಿ ಇಲಾಖೆ ಜಮಖಂಡಿ ಹಾಗೂ ಅಡವಿಸಿದ್ದೇಶ್ವರ ಜಾತ್ರಾ ಕಮೀಟಿ ಹಮ್ಮಿಕೊಂಡಿದ್ದ ಆತ್ಮಯೋಜನೆ ಅಡಿಯಲ್ಲಿ ಕೃಷಿ ವಿಚಾರ ಸಂಕಿರಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ಕೃಷಿ ಭೂಮಿ ಮಾರಾಟ ಮಾಡಿ ನಗರಗಳಿಗೆ ಹೋಗುತ್ತಿರುವುದು ಸಾಮಾನ್ಯವಾಗಿದೆ. ವಂಶಸ್ಥರಿಂದ ಬಂದಿರುವ ಕೃಷಿ ಪರಂಪರೆ ಉಳಿಸಿಕೊಂಡು ಹೋಗುವ ಕೆಲಸ ಆಗಬೇಕು. ರೈತರು ರಾಸಾಯನಿಕಗಿಂತ ನೈಸರ್ಗಿಕವಾಗಿ ಸಿಗುವ ಸಂಪನ್ಮೂಲಗಳ ಬಳಕೆ ಮಾಡಬೇಕು ಎಂದರು.

ವಿಜಯಪುರದ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದ ಸಹವಿಸ್ತರಣಾ ನಿರ್ದೇಶಕ ಡಾ| ಆರ್‌.ಬಿ. ಬೆಳ್ಳಿ ಮಾತನಾಡಿ, ನೀರಿನ ಅನುಕೂಲ ಹೆಚ್ಚಾದಂತೆ ರೈತರು ಅಸಮರ್ಪಕ ನೀರಾವರಿ ಮಾಡಿ, ಹೆಚ್ಚಿನ ರಾಸಾಯನಿಕ ಗೊಬ್ಬರ, ಕೀಟನಾಶಕ ಮತ್ತು ಕಳೆನಾಶಕ ಬಳಸಿ ಭೂಮಿಯ ಫಲವತ್ತತೆ ಕಳೆದುಕೊಳ್ಳುತ್ತಿದ್ದಾರೆ. ಮುಂದಿನ ಪೀಳಿಗೆಗೋಸ್ಕರ ಉತ್ತಮ ಭೂಮಿ ಉಳಿಸಿಕೊಳ್ಳಬೇಕಾಗಿದೆ. ಸರ್ಕಾರ ಬಜೆಟ್‌ನಲ್ಲಿ ಸಾವಯವ ಕೃಷಿಗೆ ಹೆಚ್ಚು ಅನುದಾನ ಘೋಷಿಸುವ ಯೋಜನೆ ಬರಲಿದೆ ಎಂದರು.

ವಿಜಯಪುರ ಕೃಷಿ ಮಹಾವಿದ್ಯಾಲಯ ಮಣ್ಣು ವಿಜ್ಞಾನಿ ಡಾ| ವಿದ್ಯಾವತಿ ಯಡಹಳ್ಳಿ ಮಾತನಾಡಿ, ನಮ್ಮ ಶರೀರದಲ್ಲಿ ನಡೆಯುವ ಚಟುವಟಿಕೆಗಳಂತೆ ಮಣ್ಣಿನಲ್ಲಿ ಕೂಡ ಸಹ ಚಟುವಟಿಕೆಗಳು ನಡೆಯುತ್ತಿರುತ್ತವೆ. ರೈತರು ಮಣ್ಣು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮಣ್ಣಿನಲ್ಲಿ ಸಾವಯವ ಅಂಶ ಹೆಚ್ಚಿಸಿ, ರಾಸಾಯನಿಕಗಳ ಬಳಕೆ ಕಡಿತಗೊಳಿಸಿ ಫಲವತ್ತತೆ ಹೆಚ್ಚಿಸಿಕೊಳ್ಳಬೇಕು. ನೀರಿನ ವೈಜ್ಞಾನಿಕ ಬಳಕೆ ಮಾಡಿಕೊಂಡು ಸವಳು-ಜವಳು ಹಾಗೂ ಮಣ್ಣಿನ ಸವಕಳಿ ತಡೆಗಟ್ಟಬೇಕು ಎಂದರು.

ಸಹಾಯಕ ಕೃಷಿ ನಿರ್ದೇಶಕ ಎಂ.ಎಸ್‌. ಬುಜರುಖ, ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ ಎಸ್‌.ಟಿ. ಪಾಟೀಲ, ಅಡವಿ ಸಿದ್ದೇಶ್ವರ ಮಠದ ಗುರುಪಾದಸ್ವಾಮಿಗಳು ಮಾತನಾಡಿದರು. ಸಾವಯವ ಕೃಷಿಕ ಆರ್‌.ಟಿ. ಪಾಟೀಲ, ಕೃಷಿ ಅಧಿ ಕಾರಿ ಎಸ್‌.ಎಂ. ಬಿರಾದಾರ, ಸಹಾಯಕ ಕೃಷಿ ಅಧಿಕಾರಿಗಳಾದ ಕೆ.ಎಸ್‌. ಅನಂತಪುರ, ಐ.ಬಿ. ಪುರಾಣಿಕ ಮಠ, ಆತ್ಮಯೋಜನೆ ತಾಲೂಕ ತಾಂತ್ರಿಕ ವ್ಯವಸ್ಥಾಪಕ ಕೆ.ಎ.ಜಮಖಂಡಿ ಇದ್ದರು.

ಜಿಲ್ಲಾ ಮತ್ತು ತಾಲೂಕುಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದ ಸಾಧಕರನ್ನು ಹಾಗೂ ದಾನಿಗಳನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.