ಪರಿಹಾರಧನ ಬಹಿಷ್ಕರಿಸಲು ನಿರ್ಧಾರ

ವಿಶೇಷ ಅಧಿವೇಶನದಲ್ಲಿ ನಿಯಮ ತಿದ್ದುಪಡಿ ಮಾಡಿ•ಪ್ರತಿ ಎಕರೆ ಕಬ್ಬಿಗೆ ಒಂದು ಲಕ್ಷ ಪರಿಹಾರ ನೀಡಿ

Team Udayavani, Aug 29, 2019, 1:08 PM IST

29-Agust-24

ಬಾಗಲಕೋಟೆ: ಮುಧೋಳ ತಾಲೂಕಿನ ಚಿಚಖಂಡಿಯಲ್ಲಿ ಘಟಪ್ರಭಾ ನದಿಯಿಂದ ಹಾನಿಯಾದ ಕಬ್ಬು.

ಶ್ರೀಶೈಲ ಕೆ. ಬಿರಾದಾರ
ಬಾಗಲಕೋಟೆ:
ಮೂರು ನದಿಗಳ ಭೀಕರ ಪ್ರವಾಹಕ್ಕೆ ತುತ್ತಾಗಿರುವ ಸಂತ್ರಸ್ತರಿಗೆ, ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ನಿಯಮದಡಿ ನೀಡುವ ಪರಿಹಾರಧನ ಬಹಿಷ್ಕರಿಸಲು ಜಿಲ್ಲೆಯ ಸಂತ್ರಸ್ತ ರೈತರು ನಿರ್ಧರಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ಸ್ಪಂದನೆ ಹಾಗೂ ರಾಜ್ಯ ವಿಪತ್ತು ಸ್ಪಂದನೆ ಅಡಿಯಲ್ಲಿ ರಾಜ್ಯ ಸರ್ಕಾರ ಸಂತ್ರಸ್ತರಿಗೆ ಪರಿಹಾರ ನೀಡಲು ಮುಂದಾಗಿದೆ. ರೈತರು ಬೆಳೆದ ಬೆಳೆ ಸಂಪೂರ್ಣ ಹಾನಿಯಾಗಿದ್ದು, ಇದಕ್ಕೆ ಸೂಕ್ತ ಪರಿಹಾರ ಕೊಡುವುದಾಗಿ ಸರ್ಕಾರ ಹೇಳಿದ್ದರೂ ಎನ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರವೇ ಪರಿಹಾರ ನೀಡಲು ಅವಕಾಶವಿದೆ. ಹೀಗಾಗಿ ಹೆಚ್ಚಿನ ಪರಿಹಾರ ಕೊಡದಿದ್ದರೆ ಯಾವುದೇ ಕಾರಣಕ್ಕೂ ಪರಿಹಾರ ಪಡೆಯದಿರಲು ರೈತರು ನಿರ್ಧರಿಸಿದ್ದಾರೆ.

ಪರಿಹಾರ ಸಾಕಾಗಲ್ಲ: ಎನ್‌ಡಿಆರ್‌ಎಫ್‌ನಡಿ ಹೆಕ್ಟೇರ್‌ವಾರು ಬೆಳೆ ಹಾನಿಗೆ ಪರಿಹಾರ ನೀಡುತ್ತಿದ್ದು, ಅದನ್ನು ಎಕರೆವಾರು ನೀಡಬೇಕು. ಮುಖ್ಯವಾಗಿ ಈಗಿರುವ ಎನ್‌ಡಿಆರ್‌ಎಫ್‌ ನಿಯಮ ಬದಲಿಸಿಯೇ ಪರಿಹಾರ ನೀಡಬೇಕೆಂಬುದು ಸಂತ್ರಸ್ತರ ಪ್ರಮುಖ ಒತ್ತಾಯವಾಗಿದೆ.

ಸಂಸದರು, ಶಾಸಕರು, ತಮ್ಮ ವೇತನ ಹೆಚ್ಚಿಸಿಕೊಳ್ಳಲು ಯಾವುದೇ ವಿರೋಧವಿಲ್ಲದೇ ಅಧಿವೇಶನದಲ್ಲಿ ಬಿಲ್ ಪಾಸ್‌ ಮಾಡುತ್ತಾರೆ. ಆದರೆ, ರೈತರ ವಿಷಯದಲ್ಲಿ ಏಕೆ ಗಂಭೀರತೆ ತಾಳುತ್ತಿಲ್ಲ. ಕೇಂದ್ರ ಇಲ್ಲವೇ ರಾಜ್ಯ ಸರ್ಕಾರ, ಕೂಡಲೇ ವಿಶೇಷ ಅಧಿವೇಶನದಲ್ಲಿ ನಿಯಮಗಳನ್ನು ತಿದ್ದುಪಡಿ ಮಾಡಿ ನೆರೆ ಸಂತ್ರಸ್ತ ರೈತರಿಗೆ ಹೆಚ್ಚಿನ ಪರಿಹಾರ ಕೊಟ್ಟರೆ ಮಾತ್ರ ರೈತರು ಬದುಕುತ್ತಾರೆ. ಇಲ್ಲದಿದ್ದರೆ ಪ್ರವಾಹದಿಂದ ನೆಲಸಮಗೊಂಡ ಬೆಳೆ ಕಿತ್ತು ಹೊರ ಹಾಕಲು ಸರ್ಕಾರ ಕೊಡುವ ಪರಿಹಾರಧನ ಸಾಕಾಗಲ್ಲ ಎಂದು ರೈತರು ಗೋಳಿಡುತ್ತಿದ್ದಾರೆ.

ಎನ್‌ಡಿಆರ್‌ಎಫ್‌ ಮಾರ್ಗಸೂಚಿ: ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆ ಹಾನಿಯಾದರೆ, ರೈತರಿಗೆ ಪರಿಹಾರ ನೀಡಲು ಎನ್‌ಡಿಆರ್‌ಎಫ್‌ ಮಾರ್ಗಸೂಚಿಗಳಿವೆ. ಪ್ರತಿ ಹೆಕ್ಟೇರ್‌ಗೆ ಬೆಳೆವಾರು ಪರಿಹಾರ ನಿಗದಿ ಮಾಡಿದೆ. ಒಂದು ಹೆಕ್ಟೇರ್‌ ಕಬ್ಬು (ಎರಡೂವರೆ ಎಕರೆ) ಹಾನಿಯಾಗಿದ್ದರೆ ಅದಕ್ಕೆ ನಿಯಮದ ಪ್ರಕಾರ 13,850 ರೂ. ಪರಿಹಾರ ಬರುತ್ತದೆ. ಅದೇ ಒಂದು ಹೆಕ್ಟೇರ್‌ ಕಬ್ಬು ಬೆಳೆಯಲು ಸುಮಾರು 60ರಿಂದ 70 ಸಾವಿರ ಖರ್ಚು ಬಂದಿರುತ್ತದೆ. ಅದರಿಂದ 95ರಿಂದ 110 ಟನ್‌ ಕಬ್ಬು ಬೆಳೆಯುತ್ತಿದ್ದು, ಖರ್ಚು ತೆಗೆದರೂ, ಕನಿಷ್ಠ ಒಂದು ಹೆಕ್ಟೇರ್‌ನಿಂದ ಅಂದಾಜು 1.30 ಲಕ್ಷವರೆಗೆ ರೈತರಿಗೆ ಉಳಿತಾಯವಾಗುತ್ತದೆ. ಹೀಗಾಗಿ ಸರ್ಕಾರ ಪ್ರತಿ ಎಕರೆ ಕಬ್ಬಿಗೆ 1ಲಕ್ಷ ಪರಿಹಾರ ನೀಡಬೇಕು ಎಂಬುದು ರೈತರ ಒತ್ತಾಯ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.