ಜಮ್ಮು-ಕಾಶ್ಮೀರದಲ್ಲಿ ಬಳಬಟ್ಟಿ ಯೋಧ ಹುತಾತ್ಮ

ತರಬೇತಿ ನೀಡುವ ವೇಳೆ ಆರ್‌ಡಿಎಕ್ಸ್‌ ಸ್ಫೋಟ•ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Team Udayavani, May 25, 2019, 11:11 AM IST

25-May-12

ಆಲಮಟ್ಟಿ: ಬಳಬಟ್ಟಿಯಲ್ಲಿ ಹುತಾತ್ಮ ಯೋಧ ಶ್ರೀಶೈಲ ತೋಳಮಟ್ಟಿ ಪಾರ್ಥೀವ ಶರೀರವನ್ನು ಮೆರವಣಿಗೆ ನಡೆಸಲಾಯಿತು.

ಆಲಮಟ್ಟಿ: ಸ್ಫೊಧೀಟದಲ್ಲಿ ಹುತಾತ್ಮರಾಗಿರುವ ವೀರಯೋಧ ಶ್ರೀಶೈಲ ರಾಯಪ್ಪ ತೋಳಮಟ್ಟಿ ಕುರಿ ಕಾಯ್ದು ಕುಟುಂಬ ಸಲುಹಿ ಮುಂದೆ ಸೈನ್ಯ ಸೇರಿ ಅಲ್ಲಿಯೂ ಎಲ್ಲರಿಂದ ಪ್ರಶಂಸೆಗೆ ಒಳಗಾದ ವ್ಯಕ್ತಿ.

ಶ್ರೀಶೈಲ ರಾಯಪ್ಪ ತೋಳಮಟ್ಟಿ ಜಮ್ಮು-ಕಾಶ್ಮೀರದಲ್ಲಿ ಮೇ 22ರಂದು ಹುತಾತ್ಮರಾಗಿರುವ ಸುದ್ದಿ ಕೇಳಿದ ಕುಟುಂಬ ಸದಸ್ಯರಿಗೆ ಸುದ್ದಿಯನ್ನು ಮೊದಲು ನಂಬಲಾಗಲಿಲ್ಲ. ನಂತರ ಜಿಲ್ಲಾಧಿಕಾರಿಗಳ ಕಚೇರಿಯಿಂದ ಬಂದ ಸುದ್ದಿಯೆಂದ ನಂತರವೇ ನಂಬಿ ಕಣ್ಣೀರಾಕಿ ಉಳಿದವರಿಗೂ ಸುದ್ದಿ ತಲುಪಿಸಲಾಯಿತು.

ಹುತಾತ್ಮ ಯೋಧನ ಪಾರ್ಥಿವ ಶರೀರ ಬಳಬಟ್ಟಿಗೆ ಬಂದ ನಂತರ ಮೆರವಣಿಗೆಯುದ್ದಕ್ಕೂ ನಾಗರಿಕರು ಪುಷ್ಪ ಮಳೆಗರೆದರು. ದಾರಿಯುದ್ದಕ್ಕೂ ವಂದೇ ಮಾತರಂ, ಜೈ ಜವಾನ್‌ ಜೈ ಕಿಸಾನ್‌, ಶ್ರೀಶೈಲ ಅಮರ್‌ ಹೇ ಎನ್ನುವ ಘೋಷಣೆಯೊಂದಿಗೆ ಪಟಾಕಿ ಸಿಡಿಸುತ್ತ ಸಾಗಿದರು.

ರಾಯಣ್ಣನ ನಂಟು: ಶ್ರೀಶೈಲನ ತಂದೆ ಹೆಸರೂ ರಾಯಪ್ಪ ಅವರಿಗೆ ಹೆಣ್ಣು ಕೊಟ್ಟ ಮಾವನ ಹೆಸರೂ ರಾಯಪ್ಪ ಮತ್ತು ಆತನ ಅಂತ್ಯಸಂಸ್ಕಾರ ನಡೆದ ಸ್ಥಳವು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ವೃತ್ತ. ಹೀಗೆ ಶ್ರೀಶೈಲನು ಜನ್ಮ‌ಃತವಾಗಿ ರಾಯಣ್ಣನವರೊಂದಿಗೆ ಅವರ ಸ್ಫೂರ್ತಿ ಸೆಲೆಯಾಗಿ ತಂದೆ ರಾಯಪ್ಪ ಹಾಗೂ ಮಾದೇವಿಯವರ ಪುತ್ರನಾಗಿ ಜೂನ್‌ 10, 1985ರಲ್ಲಿ ಜನಿಸಿ ಪ್ರಾಥಮಿಕ ಶಿಕ್ಷಣವನ್ನು ತನ್ನ ಅಜ್ಜಿಯ ತವರು ಮನೆಯಾಗಿರುವ ಬಾಗಲಕೋಟೆ ತಾಲೂಕಿನ ಇಲಾಳದಲಿ,್ಲ ಪ್ರೌಢ ಶಿಕ್ಷಣವನ್ನು ತನ್ನ ತಂದೆ ಹುಟ್ಟೂರಾದ ಬಳಬಟ್ಟಿಯ ಸರ್ಕಾರಿ ಪ್ರೌಢಶಾಲೆ, ಪಪೂ ಶಿಕ್ಷಣ ಶಂಕ್ರಪ್ಪ ಸಕ್ರಿ ಜ್ಯೂನಿಯರ ಕಾಲೇಜು ಹಾಗೂ ಪದವಿ ಪ್ರಥಮ ವರ್ಷ ಬಸವೇಶ್ವರ ವಿದ್ಯಾಲಯದಲ್ಲಿ ಆಗಿದ್ದು ಪದವಿ ಪ್ರಥಮ ವರ್ಷವಿದ್ದಾಗ 2005 ಸೆ‌ಪೆ‌rಂಬರ್‌ ತಿಂಗಳಿನಲ್ಲಿ ಸೈನ್ಯಕ್ಕೆ ಸೇರಿದ್ದಾನೆ.

2008ರಲ್ಲಿ ಅಂಗಡಗೇರಿಯ ಈರಮ್ಮ ರಾಯಪ್ಪ ಮೆಂಡೆಗಾರ ಅವರ ಪುತ್ರಿ ಗೀತಾ ಅವರೊಂದಿಗೆ ಮದುವೆಯಾಗಿದ್ದು, ವೇದಾಶ್ರೀ ಹಾಗೂ ವಿಶ್ವನಾಥ ಎಂಬ ಎರಡು ಮಕ್ಕಳಿದ್ದಾರೆ. ಹುತಾತ್ಮರಿಗೆ ಬೊಮ್ಮಣ್ಣ ಎಂಬ ಒಬ್ಬ ಸಹೋದರನಿದ್ದು ಆತನೂ ವ್ಯವಸಾಯದಲ್ಲಿ ತೊಡಗಿದ್ದಾನೆ.

ಮುಗ್ದ ಮಕ್ಕಳು: ಶ್ರೀಶೈಲ ರಾಯಪ್ಪ ಬಳಬಟ್ಟಿಯವರಿಗೆ 6 ವರ್ಷದ ವೇದಶ್ರೀ ಹಾಗೂ 4 ವರ್ಷದ ವಿಶ್ವನಾಥ ಎಂಬ ಮಕ್ಕಳಿದ್ದು ಅವರು ತಮ್ಮ ಮನೆಯ ಮುಂದೆ ಸೇರಿದ ಜನರನ್ನು ಕಂಡು ಮುಗ್ದತೆಯಿಂದ ಅವರ ಚಿಕ್ಕಪ್ಪನಿಗೆ ಚಾಕೋಲೇಟ್ ಕೊಡಿಸಲು ಕೇಳಿದಾಗ ಚಿಕ್ಕಪ್ಪನ ರೋಧನ ಮುಗಿಲು ಮುಟ್ಟಿತ್ತು.

ಮಕ್ಕಳು ತಮ್ಮ ತಂದೆ ಹುತಾತ್ಮರಾಗಿರುವದನ್ನೂ ಅರಿಯದ ಕಂದಮ್ಮಗಳನ್ನು ಕಂಡು ನೆರೆದ ಜನರು ಮಕ್ಕಳಿಗೆ ಅರಿವು ಮೂಡುವದಕ್ಕಿಂತ ಮುಂಚೆಯೇ ತಂದೆಯನ್ನು ಕಳೆದುಕೊಂಡ ನತದೃಷ್ಟರು ಎಂದು ಕಣ್ಣಾಲಿಗಳನ್ನು ತುಂಬಿಕೊಂಡು ಮುಗ್ದ ಮಕ್ಕಳನ್ನು ತಬ್ಬಿಕೊಂಡು ಸಂಬಂಧಿಗಳು ರೋಧಿಸುವ ದೃಶ್ಯ ಸಾಮಾನ್ಯವಾಗಿತ್ತು.

ಧೃತಿಗೆಟ್ಟ ಪಾಲಕರು: ನಮ್ಮದು ಮೂಲ ಬಡತನ ಕುಟುಂಬವಾಗಿದ್ದು ನಮ್ಮ ತಂದೆಯವರು ನಾವು ಚಿಕ್ಕವರಿದ್ದಾಗಲೇ ತಾಯಿ ತವರು ಮನೆ ಇಲಾಳ ಗ್ರಾಮಕ್ಕೆ ಹೋಗಿದ್ದರು. ಇದರಿಂದ ನಾವು ಅಲ್ಲಿಯೇ ಇದ್ದು ಮುಂದೆ ನಮಗೆ ಮಕ್ಕಳಾದ ಮೇಲೆ ಅವರಿಗೆ ನಮ್ಮ ಊರಿನ ಹೆಸರನ್ನೇ ಅಡ್ರೆಸ್ಸನ್ನಾಗಿ ಮಾಡಿದ್ದರಿಂದ ತೋಳಮಟ್ಟಿ ಹೋಗಿ ಬಳಬಟ್ಟಿಯಾಯಿತು. ನನಗಿರುವ ಎರಡು ಮಕ್ಕಳಲ್ಲಿ ದೊಡ್ಡವನೇ ಶ್ರೀಶೈಲ ಅವನು ನಮ್ಮೊಂದಿಗೆ ಸಾಕಷ್ಟು ಶ್ರಮವಹಿಸಿ ದುಡಿಮೆಯೊಂದಿಗೆ ಶಿಕ್ಷಣ ಮುಂದುವರಿಸಿ ಸೇನೆಗೆ ಸೇರಿದ ನಂತರ ನಮಗೆಲ್ಲರಿಗೂ ಒಳ್ಳೆದಾಗಿತ್ತರ್ರೀ, ಈಗ ಅವನ ಇಲ್ಲ ಇನ್ನ ಸಣ್ಣ ಮಗ ಒಬ್ನ ಉಳಿದರ ಎಂದು ರೋಧಿಸುತ್ತಾ ಹೇಳಿದರು ರಾಯಪ್ಪ ತೋಳಮಟ್ಟಿ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.