ಕಾಡಾ ಅಧ್ಯಕ್ಷ ಸ್ಥಾನ ಸ್ವೀಕರಿಸಿ; ಬಿಜೆಪಿ ಟಿಕೆಟ್‌ ಬಿಟ್ಟುಕೊಡಬೇಡಿ


Team Udayavani, Oct 13, 2019, 4:09 PM IST

13-October-15

ಬಳಗಾನೂರು: ಬಿಜೆಪಿ ಪಕ್ಷಕ್ಕಾಗಿ ದುಡಿದ ಹಿನ್ನೆಲೆಯಲ್ಲಿ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ “ಕಾಡಾ’ ಅಧ್ಯಕ್ಷ ಸ್ಥಾನಕ್ಕೆ ನಿಮ್ಮನ್ನು ಸರ್ಕಾರ ಆಯ್ಕೆ ಮಾಡಿದೆ. ಕಾಡಾ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಿ. ಆದರೆ ಕಳೆದ ಬಾರಿ ಚುನಾವಣಾ ಫಲಿತಾಂಶ ಕುರಿತು ನ್ಯಾಯಾಲಯದಲ್ಲಿ ಹೂಡಿದ ದಾವೆಯನ್ನು ಯಾವುದೇ ಕಾರಣಕ್ಕೆ ಹಿಂದಕ್ಕೆ ಪಡೆಯಬೇಡಿ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರದ ಟಿಕೆಟ್‌ನೂ ಬಿಟ್ಟುಕೊಡಬೇಡಿ” ಇದು ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಬಿಜೆಪಿ ಜಿಲ್ಲಾಧ್ಯಕ್ಷ, ಮಸ್ಕಿ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಆರ್‌. ಬಸನಗೌಡ ಅವರಿಗೆ ನೀಡಿದ ಸಲಹೆ.

ಬಳಗಾನೂರು ಪಟ್ಟಣ, ಜವಳಗೇರಾ ಹಾಗೂ ಗುಡದೂರು ಜಿಪಂ ಕ್ಷೇತ್ರ ವ್ಯಾಪ್ತಿಯ ಅಭಿಮಾನಿ ಬಳಗ ಹಾಗೂ ಬಿಜೆಪಿ ಕಾರ್ಯಕರ್ತರ ಸಭೆ ಪಟ್ಟಣದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಅನೇಕ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ಒಂದು ವೇಳೆ ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಸಿಗದಿದ್ದರೆ ನಿಮ್ಮೊಂದಿಗೆ ನಾವಿದ್ದೇವೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ನಿಮ್ಮನ್ನೇ ಗೆಲ್ಲಿಸುತ್ತೇವೆ. ಸದ್ಯಕ್ಕೆ ಕಾಡಾಅಧ್ಯಕ್ಷ ಸ್ಥಾನ ಸ್ವೀಕರಿಸಿ ಮುಂದಿನ ಬದಲಾವಣೆಗೆ ಕಾದು ನೋಡೋಣ ಎಂದು ಅಭಿಪ್ರಾಯ ತಿಳಿಸಿದರು.

ಅಭಿಮಾನಿಗಳು, ಪದಾಧಿಕಾರಿಗಳ ಸಲಹೆ ಆಲಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆರ್‌. ಬಸನಗೌಡ ತುರ್ವಿಹಾಳ, ಕಳೆದ ಬಾರಿಯ ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ತಮಗೆ ಕ್ಷೇತ್ರದ 60 ಸಾವಿರ ಮತದಾರರು, ಅಭಿಮಾನಿಗಳು ಮತ ಚಲಾಯಿಸಿ ಬೆಂಬಲಿಸಿದ್ದಾರೆ. ತಾವು ಚುನಾವಣೆಯಲ್ಲಿ ಸೋತರೂ
ನಿಷ್ಠೆಯಿಂದ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇನೆ ಎಂದು ಹೇಳಿದರು.

ರೈತನಾಗಿ ಬೆಳೆದ ನಾನು ಅ ಧಿಕಾರದ ಆಸೆಗಾಗಿ ಕ್ಷೇತ್ರದ ಹೃದಯವಂತ ಮತದಾರರನ್ನು ಕಳೆದುಕೊಳ್ಳಲು ಎಂದಿಗೂ ಇಷ್ಟಪಡುವುದಿಲ್ಲ. ಕಳೆದ ಬಾರಿ ಪಕ್ಷದ ವರಿಷ್ಠರು ಕ್ಷೇತ್ರದಲ್ಲಿ ಆಕಾಂಕ್ಷಿ ಅಭ್ಯರ್ಥಿಗಳ ಪರ ಸರ್ವೇ ಮಾಡುವ ಮೂಲಕ ಟಿಕೆಟ್‌ ನೀಡಿದ್ದರು. ಈ ಬಾರಿಯೂ ಅದನ್ನೇ ಮುಂದುವರಿಸುವಂತೆ ವರಿಷ್ಠರ ಗಮನಕ್ಕೆ ತರಲು ಕಾರ್ಯಕರ್ತರು ಮುಂದಾಗಬೇಕು. ಕ್ಷೇತ್ರದಲ್ಲಿ ಸರಕಾರದ ಅನುದಾನದಡಿ ಕೈಗೊಂಡ ವಿವಿಧ ಕಾಮಗಾರಿಗಳ ಹೆಸರಿನಲ್ಲಿ ಅನರ್ಹ ಶಾಸಕರು ಮತ್ತು ಅವರ ಬಳಗ ಕೋಟಿಗಟ್ಟಲೆ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.

ತಮಗೆ ಮಸ್ಕಿ ಕ್ಷೇತ್ರದ ಟಿಕೆಟ್‌ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೇರಿ ರಾಜ್ಯ ಮುಖಂಡರ ಮೇಲೆ ಒತ್ತಡ ಹಾಕಲು ಕ್ಷೇತ್ರದ ಕಾರ್ಯಕರ್ತರು ಸಿದ್ಧರಾಗಬೇಕು ಎಂದು ಹೇಳಿದರು.

ಸಭೆ ಉದ್ಘಾಟಿಸಿದ ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ವಿಶ್ವನಾಥ ಪಾಟೀಲ, ಮಸ್ಕಿ ನಗರ ಬ್ಲಾಕ್‌ ಅಧ್ಯಕ್ಷ ಅಪ್ಪಾಜಿಗೌಡ, ಮುಖಂಡರಾದ ಹೂವಿನಬಾವಿ ಸಿದ್ದಣ್ಣ, ಶಿವಕುಮಾರ, ಮಾನಪ್ಪ ಮಟ್ಟೂರು, ರಾಮಣ್ಣ ವಕೀಲರು, ಬಸನಗೌಡ, ಬುಳ್ಳನಗೌಡ ಮಾತನಾಡಿದರು.

ಮುಖಂಡರಾದ ಬಸನಗೌಡ ಮುದೇಗೌಡ್ರು, ಅಮರಯ್ಯಸ್ವಾಮಿ, ಸಿದ್ದನಗೌಡ, ಲಿಂಗರಾಜ, ಮಲ್ಲಿಕಾರ್ಜುನ, ಮಲ್ಲಣ್ಣ, ಬಸವರಾಜಗೌಡ, ಮಲ್ಲರೆಡ್ಡೆಪ್ಪ, ಕರಿಯಪ್ಪ, ಶರಣಪ್ಪ ಸೇರಿದಂತೆ ಮುಖಂಡರು, ಕಾರ್ಯಕರ್ತರು ಬಿಜೆಪಿ ಬೆಂಬಲಿತ ಪಪಂ ಸದಸ್ಯರು, ಸುತ್ತಲಿನ ಗ್ರಾಮಗಳ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.