ಬಾಳೆಹೊನ್ನೂರಲ್ಲೂ ಭಾರೀ ಮಳೆ: ಭದ್ರೆ ನೀರಿನ ಮಟ್ಟ ಹೆಚ್ಚಳ
Team Udayavani, Sep 9, 2019, 7:49 PM IST
ಬಾಳೆಹೊನ್ನೂರು: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭದ್ರಾ ನದಿಯಲ್ಲಿ ನೀರಿನ ಮಟ್ಟ ಏರುತ್ತಿದೆ.
ಬಾಳೆಹೊನ್ನೂರು: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭದ್ರಾ ನದಿಯಲ್ಲಿ ನೀರಿನ ಮಟ್ಟ ಹಂತಹಂತವಾಗಿ ಏರುತ್ತಿದೆ.
ಕಳಸ, ಹೊರನಾಡು, ಕುದುರೆಮುಖ, ಬಾಳೆಹೊಳೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಮಳೆಯಿಂದಾಗಿ ನಾಟಿ ಮಾಡಿದ ಗದ್ದೆಯಲ್ಲಿ ಭತ್ತದ ಸಸಿ ಕೊಳೆತು ಹೋಗುತ್ತಿದ್ದು, ಏಡಿಗಳ ಕಾಟ ಹೆಚ್ಚಾಗಿದೆ.
ಕೊಳೆ ರೋಗದಿಂದ ಅಡಕೆ ಮಿಡಿ ಉದುರುತ್ತಿದ್ದರೆ, ಮತ್ತೂಂದೆಡೆ ಮಂಗಗಳು ಅಳಿದುಳಿದ ಅಡಕೆ ಮಿಡಿಗಳನ್ನು ಕಿತ್ತು ಹಾಕುತ್ತಿರುವುದರಿಂದ ರೈತರಿಗೆ ನಷ್ಟ ಉಂಟಾಗುತ್ತಿದೆ. ಕಾಫಿ ತೋಟದಲ್ಲಿ ನೀರು ನಿಂತ ಹಿನ್ನೆಲೆಯಲ್ಲಿ ಕಾಫಿ ಕಾಯಿಗಳು ಉದುರಲು ಪ್ರಾರಂಭವಾಗಿವೆ. ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ನಷ್ಟ ಸಂಭವಿಸಿರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ