ಮನೆ ತೆರವುಗೊಳಿಸಿದವರಿಗೆ ಸೌಲಭ್ಯ ಕಲ್ಪಿಸಿ

•ಕಸ ವಿಲೇವಾರಿ ಪದ್ಧತಿ ಅಳವಡಿಸಿಕೊಳ್ಳಿ•ಸಹಾಯಧನ ಸದ್ಬಳಕೆ ಮಾಡಿಕೊಳ್ಳಿ: ವೆಂಕಟೇಶ್‌

Team Udayavani, Jul 24, 2019, 3:27 PM IST

24-July-29

ಬಾಳೆಹೊನ್ನೂರು: ಬನ್ನೂರು ಗ್ರಾಮ ಸಭೆಯಲ್ಲಿ ಜಿಪಂ ಸದಸ್ಯೆ ಚಂದ್ರಮ್ಮ ಮಾತನಾಡಿದರು.

ಬಾಳೆಹೊನ್ನೂರು: ಭದ್ರಾನದಿ ಸೇತುವೆ ಪಕ್ಕದಲ್ಲಿನ ಬಂಡಿಮಠದಲ್ಲಿ ಹಲವಾರು ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸವಿದ್ದು, ಇದೀಗ ಭದ್ರಾನದಿ ಸೇತುವೆ ಕಾಮಗಾರಿ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಸುಮಾರು 25 ಮನೆಗಳನ್ನು ತೆರವುಗೊಳಿಸಬೇಕಾಗಿದೆ. ಮನೆ ತೆರವುಗೊಳಿಸಿದವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಸಮೀಪದ ಬನ್ನೂರು ವಿದ್ಯಾಗಣಪತಿ ಸಮುದಾಯ ಭವನದಲ್ಲಿ ಬನ್ನೂರು ಗ್ರಾಪಂನ 2019-20ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆಯಲ್ಲಿ ಮಾತನಾಡಿದರು.

ಜಿಪಂ ಸದಸ್ಯೆ ಚಂದ್ರಮ್ಮ ಮಾತನಾಡಿ, ಗ್ರಾಪಂ ವ್ಯಾಪ್ತಿಯ ವಸತಿ ಮನೆಗಳನ್ನು ಆದಷ್ಟು ಬೇಗ ನಿರ್ಮಿಸಿಕೊಳ್ಳಬೇಕು. ಅಲ್ಲದೆ ಬಾಳೆಹೊನ್ನೂರು ಸಮೀಪದ ಬಂಡಿಮಠ ಹತ್ತಿರದ ಭದ್ರಾ ಸೇತುವೆ ಪಕ್ಕದಲ್ಲಿ ಮಾಸಿಸುವ ಮನೆಯವರು ಮನೆಯನ್ನು ತೆರವು ಗೊಳಿಸಬೇಕಾದ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆ ಹಾಗೂ ಶಾಸಕರೊಂದಿಗೆ ಚರ್ಚಿಸಿ ಸೂಕ್ತ ಬದಲಿ ವ್ಯವಸ್ಥೆ ಮಾಡಲಾಗುವುದು. ಜಿಪಂ ವತಿಯಿಂದ ಗಂಗಾಕಲ್ಯಾಣ ಯೋಜನೆ, ಮತ್ತು ಮಹಿಳಾ ಸಂಘಕ್ಕೆ ಸ್ವ ಉದ್ಯೋಗ ಕೈಗೊಳ್ಳಲು ಸುಮಾರು 2ರಿಂದ ಮೂರು ಲಕ್ಷ ಸಹಾಯ ಧನವಿದ್ದು ಅದರ ಸದುಪಯೋಗ ಪಡೆಯಬೇಕು ಎಂದರು.

ಗ್ರಾಪಂ ಅಧ್ಯಕ್ಷ ಟಿ.ಎಂ.ವೆಂಕಟೇಶ್‌ ಮಾತನಾಡಿ, ಬನ್ನೂರು ಗ್ರಾಪಂ ವ್ಯಾಪ್ತಿಯಲ್ಲಿ ಸೂಕ್ತ ಕಸ ವಿಲೇವಾರಿ ಪದ್ಧತಿ ಅಳವಡಿಸಿಕೊಂಡು ಸ್ವಚ್ಛ ಪರಿಸರ ಕಾಪಾಡಿಕೊಳ್ಳಬೇಕು. ಕಂದಾಯ ಮತ್ತು ತೆರಿಗೆಯನ್ನು ಸಕಾಲದಲ್ಲಿ ಪಾವತಿಸಿ ಪಂಚಾಯಿತಿಯ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿ ಸುಜಾತ ಗ್ರಾಮ ಸಭೆಯಲ್ಲಿ 2019-20ನೇ ಸಾಲಿನ ವಿವಿಧ ಯೋಜನೆ ಮತ್ತು ಇಲಾಖೆಗಳ ಫಲಾನುಭವಿಗಳ ಆಯ್ಕೆ, ಸರ್ಕಾರದ ಮಾರ್ಗಸೂಚಿಯಂತೆ ನಿವೇಶನ ಮತ್ತು ಕಟ್ಟಡಗಳ ತೆರಿಗೆಗಳನ್ನು ವೈಜ್ಞಾನಿಕವಾಗಿ ಪರಿಷ್ಕರಿಸುವ ವಿಚಾರ, 2018-19ನೇ ಸಾಲಿನ ಬಸವ ವಸತಿ ಯೋಜನೆ ಫಲಾನುಭವಿಗಳ ಆಯ್ಕೆ ಸೇರಿದಂತೆ ಇತರ ವಿಚಾರಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.

ಶಿಕ್ಷಣ, ಕೃಷಿ, ತೋಟಗಾರಿಕೆ, ಪಶು ವೈದ್ಯ, ಸಾಮಾಜಿಕ ಅರಣ್ಯ, ಆರೋಗ್ಯ ಇಲಾಖೆ, ಅರಣ್ಯ, ಕಂದಾಯ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಗ್ರಾಪಂ ಉಪಾಧ್ಯಕ್ಷೆ ಕೆ.ಪಿ.ಶ್ಯಾಮಲಾ, ಮಾರ್ಗದರ್ಶಿ ಅಧಿಕಾರಿ ಮಲ್ಲಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಎಚ್.ಎಂ. ಪ್ರಶಾಂತ್‌, ಸದಸ್ಯ ಗೋವಿಂದರಾಜು, ಸರೋಜಮ್ಮ, ಶಶಿಕಲಾ, ಪವಿತ್ರ, ತಾಪಂ ಸದಸ್ಯೆ ಭಾಗ್ಯಲಕ್ಷ್ಮಿ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.