ಮೂಳೆ ಗಟ್ಟಿಯಾಗಿದ್ದರೆ ದೇಹ ಸದೃಢ: ಡಾ| ನರೇಂದ್ರ

150ಕ್ಕೂ ಹೆಚ್ಚು ಜನರಿಗೆ ಉಚಿತ ಆರೋಗ್ಯ ತಪಾಸಣೆ

Team Udayavani, Jun 17, 2019, 4:19 PM IST

17-June-35

ಬಾಳೆಹೊನ್ನೂರು: ಮಸೀದಿಕೆರೆ ಅಲ್ ಬದ್ರಿಯಾ ಶಾದಿಮಹಲ್ ಸಭಾಂಗಣದಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ ನಡೆಯಿತು.

ಬಾಳೆಹೊನ್ನೂರು: ಚಿಕ್ಕಂದಿನಿಂದಲೇ ಮೂಳೆಗಳ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿದರೆ ವಯಸ್ಸಾದಾಗ ಮೂಳೆ ಸಂಬಂಧಿ ಕಾಯಿಲೆಗಳು ಕಂಡು ಬರುವುದು ಕಡಿಮೆಯಾಗುತ್ತದೆ ಎಂದು ಉಡುಪಿಯ ಸುನಾಗ್‌ ಆಸ್ಪತ್ರೆಯ ಆಡಳಿತ ನಿದೆೇರ್ಶಕ ಹಾಗೂ ಮೂಳೆ ತಜ್ಞ ಡಾ| ನರೇಂದ್ರ ಕುಮಾರ್‌ ಹೇಳಿದರು.

ಅವರು ಪಟ್ಟಣ ಸಮೀಪದ ಮಸೀದಿಕೆರೆ ಅಲ್ ಬದ್ರಿಯಾ ಶಾದಿಮಹಲ್ ಸಭಾಂಗಣದಲ್ಲಿ ಬಾಳೆಹೊನ್ನೂರು ಟೀಂ ಜಾಗೃತ್‌ ಸಹಾಯ ಹಸ್ತ, ಉಡುಪಿಯ ಹೆಚ್.ಎಲ್. ಸುಬ್ರಹ್ಮಣ್ಯ ಸ್ಮಾರಕ ಸುನಾಗ್‌ ಆರ್ಥೋಕೇರ್‌ ಮತ್ತು ಮಲ್ಟಿಸ್ಪೆಷಾಲಿಟಿ ಸೆಂಟರ್‌ ಮತ್ತು ಇಂಪಾಲ್ ಗ್ರೂಪ್ಸ್‌ ನ ಮಾಲೀಕ ಟಿ.ಎಂ.ನಾಸೀರ್‌ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಮೂಳೆ ಸಾಂದ್ರತೆ ತಪಾಸಣೆ, ಬೆನ್ನು ನೋವು, ಸಂವಾತ, ಕ್ರೀಡಾಚಟುವಟಿಕೆ ನೋವು, ಗಂಟು ಮರು ಜೋಡಣೆ, ದಂತ ಚಿಕಿತ್ಸೆ ಬಗ್ಗೆ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಮೂಳೆಗಳು ಗಟ್ಟಿಮುಟ್ಟಾಗಿದ್ದರೆ ಮಾತ್ರ ದೇಹ ಗಟ್ಟಿಯಾಗಿರಲು ಸಾಧ್ಯ, ಅಲ್ಲದೆ ಮೂಳೆಗಳ ಆರೋಗ್ಯ ಕಾಪಾಡಲು ಸಮತೋಲನ ಆಹಾರ ಅಗತ್ಯವಾಗಿದೆ. ಮೂಳೆನೋವು, ಮೂಳೆ ಸವೆತ, ಮೂಳೆ ಕ್ಯಾನ್ಸರ್‌ ಲಕ್ಷಣಗಳು ಹಾಗೂ ಮೂಳೆಗಳ ಆರೋಗ್ಯದ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.

ಅಲ್ ಬದ್ರೀಯಾ ಜುಮ್ಮಾ ಮಸೀದಿ ಅಧ್ಯಕ್ಷ ಹಾಗೂ ಇಂಪಾಲ್ ಕನ್‌ಸ್ಟ್ರಕ್ಷನ ಮಾಲೀಕ ಟಿ.ಎಂ. ನಾಸೀರ್‌ ಮಾತನಾಡಿ, ಗ್ರಾಮೀಣ ಪ್ರದೇಶ ಬಡ ಜನತೆಯ ಅನುಕೂಲಕ್ಕಾಗಿ ಸಂಘಟಕರು ವ್ಯವಸ್ಥೆ ಮಾಡಿರುವುದು ಶ್ಲಾಘನೀಯ. ವೈದ್ಯಕೀಯ ಚಿಕಿತ್ಸೆ ದುಬಾರಿಯಾಗಿರುವ ಇಂದಿನ ದಿನಗಳಲ್ಲಿ ಕಡಿಮೆ ದರದಲ್ಲಿ ಚಿಕಿತ್ಸೆ ನೀಡುತ್ತಿದ್ದು, ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಬಾಳೆಹೊನ್ನೂರು ಕ್ಲಾಸಿಕ್‌ ಜೇಸಿ ಸಂಸ್ಥೆಯ ಅಧ್ಯಕ್ಷ ಸಿ.ಪಿ. ರಮೇಶ್‌ ಮಾತನಾಡಿ, ಟೀಂ ಜಾಗೃತ್‌ ಸಹಾಯ ಹಸ್ತ ತಂಡವು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದೆ ಎಂದು ತಿಳಿಸಿದರು.

ಟೀಂ ಜಾಗೃತ್‌ ಸಹಾಯ ಹಸ್ತ ತಂಡದ ಅಧ್ಯಕ್ಷ ಕಾನ್ಕೆರೆ ಗೌತಮ್‌ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕೊಪ್ಪ ಸಹಕಾರ ಸಾರಿಗೆ ಸಂಸ್ಥೆಯ ಮಹೇಶ್‌, ಉಡುಪಿಯ ದಂತ ವೈದ್ಯ ಮಂಜುನಾಥ್‌ ಮೆಸ್ತ ಹಾಗೂ ಟೀಂ ಜಾಗೃತ್‌ ಸಹಾಯ ಹಸ್ತ ತಂಡದ ಆದರ್ಶ ಪೂಜಾರಿ, ಸಂಕೀರ್ಣ, ಮಾಗೋಡು ಶರಣ್‌, ದಿವಿನ ಪೂಜಾರಿ, ಪೈಜಲ್, ಮಂಜುನಾಥಶೆಟ್ಟಿ, ಟಿ.ಟಿ. ಇಸ್ಮಾಯಿಲ್ ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

ಶಿಬಿರದಲ್ಲಿ ಉಡುಪಿ ಸುನಾಗ್‌ ಆಸ್ಪತ್ರೆಯ ಡಾ.ನರೇಂದ್ರ ಕುಮಾರ್‌, ಡಾ. ಮಂಜುನಾಥ್‌, ಡಾ. ವೀಣಾ ನರೇಂದ್ರ, ಶೋಭಾ ಆಚಾರ್ಯ, ಪ್ರಸನ್ನ ಕಾರಂತ್‌, ಲತಾ, ಪರ್ಜಾನಾ, ಸುಷ್ಮಾ, ಕೃತಿ ಇವರುಗಳು ಶಿಬಿರದಲ್ಲಿ ಸುಮಾರು 150ಕ್ಕೂ ಹೆಚ್ಚು ಜನರಿಗೆ ಉಚಿತ ಅರೋಗ್ಯ ತಪಾಸಣೆ ನಡೆಸಿದರು. ಇದೇ ಸಂದರ್ಭದಲ್ಲಿ ಉಚಿತ ಸುನಾಗ್‌ ಆರೋಗ್ಯ ಕಾರ್ಡ್‌ ವಿತರಿಸಲಾಯಿತು. ಇಂಪಾಲ್ ಗ್ರೂಪ್ಸ್‌ ನ ಮಾಲೀಕ ಟಿ.ಎಂ. ನಾಸೀರ್‌ಅವರನ್ನು ಸನ್ಮಾನಿಸಲಾಯಿತು. ತಂಡದ ಕಾರ್ಯದರ್ಶಿ ಎಸ್‌.ಕೆ. ರಫಿಕ್‌ ನಿರೂಪಿಸಿ, ಇಬ್ರಾಹಿಂ ಶಾಪಿ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.