ಟಿಕೆಟ್‌ ತಪ್ಪಲು ಕಾಂಗ್ರೆಸ್‌ ಮುಖಂಡರೇ ಕಾರಣ: ಆರತಿ

ನನಗೆ ಟಿಕೆಟ್‌ ತಪ್ಪಿಸಿದ್ದು ಬೇಸರ ತರಿಸಿದೆ: ಡಾ| ಆರತಿ ಕೃಷ್ಣ

Team Udayavani, Apr 8, 2019, 5:12 PM IST

8-April-33

ಬಾಳೆಹೊನ್ನೂರು: ಡಾ| ಆರತಿ ಕೃಷ್ಣ ಹಾಗೂ ಅನಿವಾಸಿ ಭಾರತೀಯ ಕಾಂಗ್ರೆಸ್‌ನ ಸದಸ್ಯರು ಪೇಟೆಕೆರೆಯ ಪರಿಶಿಷ್ಟ ಕಾಲೋನಿಯ ಮನೆ ಮನೆಗೆ ತೆರಳಿ ಮೈತ್ರಿ ಅಭ್ಯರ್ಥಿ ಪರ ಮತಯಾಚನೆ ಮಾಡಿದರು.

ಬಾಳೆಹೊನ್ನೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್‌ ಕೈತಪ್ಪಿದ್ದರೂ ಮೈತ್ರಿ ಧರ್ಮ ಪಾಲಿಸಿ ಜೆಡಿಎಸ್‌ ಅಭ್ಯರ್ಥಿ ಪರ ಮತ ಯಾಚಿಸುವುದಾಗಿ ಅನಿವಾಸಿ ಭಾರತೀಯ ಸಮಿತಿ ಮಾಜಿ ಉಪಾಧ್ಯಕ್ಷೆ ಆರತಿಕೃಷ್ಣ ತಿಳಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ನನಗೆ ಟಿಕೆಟ್‌ ನೀಡುವುದಾಗಿ ಭರವಸೆ ನೀಡಿದ್ದು, ಕೊನೆಯ ಕ್ಷಣದಲ್ಲಿ ಟಿಕೆಟ್‌ ಕೈ ತಪ್ಪಿತು.ಈ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ಗೆ ಉತ್ತಮ ಅವಕಾಶವಿದ್ದು, ಮೈತ್ರಿ ಅಭ್ಯರ್ಥಿಗೆ ಇದು ವರವಾಗಲಿದೆ ಎಂದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಮುಖಂಡರು ನನ್ನ ಪರ ಪ್ರಯತ್ನ ಮಾಡದೇ ಇರುವುದು ಟಿಕೆಟ್‌ ಕೈ
ತಪ್ಪಲು ಕಾರಣವಾಗಿದೆ. ಒಂದು ವೇಳೆ ಟಿಕೆಟ್‌ ದೊರೆತು ಚುನಾವಣೆಯಲ್ಲಿ ಜಯಗಳಿಸಿದ್ದಲ್ಲಿ ಮಹಿಳೆಯೊಬ್ಬಳು ಉನ್ನತ ಸ್ಥಾನಕ್ಕೇರುತ್ತಾರೆ ಎಂಬ ಭೀತಿಯಿಂದ ಪ್ರಯತ್ನ ಮಾಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅನಿವಾಸಿ ಭಾರತೀಯ ಕಾಂಗ್ರೆಸ್‌ನ ಸಮಿತಿಯ ಸದಸ್ಯರು ದೂರದ ಸೌದಿ ಅರೇಬಿಯಾ ಹಾಗೂ ದುಬೈನಿಂದ ತಂಡೋಪತಂಡವಾಗಿ ಬಂದು ಮೈತ್ರಿ ಅಭ್ಯರ್ಥಿಪರ ಮತ ಯಾಚನೆ ಮಾಡಲಿದ್ದಾರೆ ಎಂದರು.

ಈ ಹಿಂದೆ ದುಬೈನಲ್ಲಿ ನಡೆದ ಅನಿವಾಸಿ ಭಾರತೀಯ ಕಾಂಗ್ರೆಸ್‌ನ ಸಮಾವೇಶಕ್ಕೆ ರಾಹುಲ್‌ ಗಾಂಧಿ  ಬಂದಿದ್ದರು. ಆ ಸಮಾವೇಶದಲ್ಲಿ ಕೊಲ್ಲಿ ರಾಷ್ಟ್ರದ 60 ಸಾವಿರಕ್ಕೂ ಹೆಚ್ಚು ಅನಿವಾಸಿ ಭಾರತೀಯರು ಭಾಗವಹಿಸಿದ್ದರು ಎಂದು ತಿಳಿಸಿ ಲೋಕಸಭಾ ಚುನಾವಣೆಯಲ್ಲಿ ನನಗೆ ಬೆಂಬಲ ವ್ಯಕ್ತಪಡಿಸುವುದಾಗಿ ತಿಳಿಸಿದ್ದರು ಎಂದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷಕ್ಕೆ ನಮ್ಮ ತಂದೆ ಬೇಗಾನೆ ರಾಮಯ್ಯನವರ ಕೊಡುಗೆ ಅಪಾರ. ಕೃಷ್ಣ ಫೌಂಡೇಶನ್‌ ಮೂಲಕ ಹಲವಾರು ಸಮಾಜಮುಖೀ ಕಾರ್ಯಗಳನ್ನು ಮಾಡಿದ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಪೇಕ್ಷೆ ನನ್ನದಾಗಿತ್ತು ಎಂದು ತಿಳಿಸಿದರು.

ಸೌದಿ ಅರೇಬಿಯಾದ ಅಬ್ದುಲ್‌ ಶಕೀಲ್‌ ಮಾತನಾಡಿ, ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವನಾದ ನಾನು ಇದೀಗ ಸೌದಿಅರೇಬಿಯಾದಲ್ಲಿ ನೆಲೆಸಿದ್ದೇನೆ. ಡಾ| ಆರತಿಕೃಷ್ಣ ಅವರು ಹಲವಾರು ಸಮಾಜಮುಖೀ ಕೆಲಸಗಳನ್ನು ಮಾಡಿದ್ದಾರೆ. ಅವರು ಈ ಬಾರಿಯ ಲೋಕಸಭಾ ಚುನಾವಣೆಲ್ಲಿ ಸ್ಪ ರ್ಧಿಸಲು ಅವಕಾಶ
ವಂಚಿತಾಗಿರುವುದು ಬೇಸರ ಮೂಡಿಸಿದೆ.

ಆದಾಗಿಯೂ ಸಹ ಆರತಿಕೃಷ್ಣರ ಮನವಿ ಮೇರೆಗೆ ತಂಡೋಪತಂಡವಾಗಿ ಆಗಮಿಸಿ ಮಂಗಳೂರು, ಉಡುಪಿ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತು ರಾಹುಲ್‌ ಗಾಂಧಿ  ಸ್ಪ ರ್ಧಿಸುವ ಕೇರಳದ ವೈನಾಡಿನಲ್ಲೂ ಪ್ರಚಾರ ಮಾಡುವುದಾಗಿ
ತಿಳಿಸಿದರು. ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆ ಅವರ ಕೊಡುಗೆ ಶೂನ್ಯ. ಅವರು ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿಲ್ಲ, ಮೋದಿ ಹೆಸರಿನಲ್ಲಿ ಮತಯಾಚಿಸುತ್ತಿರುವುದು ವಿಷಾದಕರ ಅಭ್ಯರ್ಥಿಯು ತನ್ನ ಸಾಧನೆ ಏನೆಂದಬುದನ್ನು ತೋರಿಸಬೇಕಿತ್ತು ಎಂದು ವ್ಯಂಗ್ಯವಾಡಿದರು.

ಈ ಹಿನ್ನಲೆಯಲ್ಲಿ ಅವರ ಬೆಂಬಲಿಗರಾಗಿ ಕಾಂಗ್ರೆಸ್‌-ಜೆಡಿಎಸ್‌ ಪರ ಮತಯಾಚನೆಯಲ್ಲಿ ಪಾಲ್ಗೊಂಡು ರಾಹುಲ್‌ ಗಾಂಧಿ  ಅವರನ್ನು
ಪ್ರಧಾನಮಂತ್ರಿ ಮಾಡಬೇಕೆಂಬ ಮಹದಾಸೆಯನ್ನು ಹೊಂದಿದ್ದೇವೆ ಎಂದರು.

ಸೌದಿ ಅರೇಬಿಯಾದ ಮಹಮ್ಮದ್‌ ಇಕ್ಬಾಲ್‌, ಸಾಜಿದ್‌ ಸಾಮ್ರಾಣಿ, ದುಬೈನ ಮಹಮ್ಮದ್‌ ಸಾದಿಕ್‌, ಮಾಗುಂಡಿಯ ಅಬ್ದುಲ್‌ ವಹೀದ್‌
ಉಸ್ಥಿತರಿದ್ದರು.

ಟಾಪ್ ನ್ಯೂಸ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.