ಬನ್ನಿಮಹಾಕಾಳಿ ಉತ್ಸವ ಮೂರ್ತಿ ಹೊತ್ತು ಕೆಂಡ ಹಾತ್ತು  ಭಕ್ತರು

ಉಜ್ಜಯಿನಿ ಶ್ರೀ ಆದಿಶಕ್ತಿ ಬನ್ನಿ ಮಹಾಕಾಳಿ- ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇಗುಲದಲ್ಲಿ ನವರಾತ್ರಿ ಪೂಜೆ

Team Udayavani, Oct 9, 2019, 12:59 PM IST

09-October-10

ಬಾಳೆಹೊನ್ನೂರು: ಶ್ರೀ ಕ್ಷೇತ್ರ ಉಜ್ಜಯಿನಿ ಆದಿಶಕ್ತಿ ಶ್ರೀ ಬನ್ನಿಮಹಾಕಾಳಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಶ್ರೀ ಬನ್ನಿಮಹಾಕಾಳಿ ಉತ್ಸವ ಮೂರ್ತಿಯನ್ನು ಹೊತ್ತು ಭಕ್ತರು ಕೆಂಡ ಹಾಯ್ದರು.

ಸಮೀಪದ ಖಾಂಡ್ಯ ಹೋಬಳಿ ಉಜ್ಜಯಿನಿ ಶ್ರೀ ಆದಿಶಕ್ತಿ ಬನ್ನಿ ಮಹಾಕಾಳಿ ಅಮ್ಮನವರ ಮತ್ತು ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವದ ಅಂಗವಾಗಿ ಸೋಮವಾರ ಆಯುಧ ಪೂಜೆ, ಶ್ರೀ ಅಮ್ಮನವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ವಿವಿಧ ಧಾರ್ಮಿಕ ಸಂಪ್ರದಾಯಗಳೊಂದಿಗೆ ಬಾಳೆಗಿಡ ನೆಟ್ಟು, ಅದರ ಮೇಲೆ ತೆಂಗಿನಕಾಯಿ ಇಟ್ಟು ಬಿಲ್ಲು ಬಾಣ ಹಾಗೂ ಕೋವಿಯಿಂದ ಗುರಿ ಹೊಡೆಯಲಾಯಿತು. ನಂತರ ಛತ್ರಿ, ಚಾಮರ ಮತ್ತು ಮಂಗಳವಾದ್ಯಗಳೊಂದಿಗೆ ಕೆಂಡದ ರಾಶಿಗೆ ಆರತಿ ಎತ್ತಿ ಪೂಜೆ ಸಲ್ಲಿಸಿ, ಶ್ರೀ ಮಲ್ಲಿಕಾರ್ಜುನಸ್ವಾಮಿ ಹಾಗೂ ಶ್ರೀ ಬನ್ನಿಮಹಾಕಾಳಿ ಅಮ್ಮನವರ ಉತ್ಸವ ಮೂರ್ತಿಯನ್ನು ಹೊತ್ತು ಕೆಂಡ ಹಾಯ್ದು ಭಕ್ತಿ ಸಮರ್ಪಿಸಲಾಯಿತು.

ಕೆಂಡೋತ್ಸವದ ನಂತರ ಶ್ರೀ ಆದಿಶಕ್ತಿ ಬನ್ನಿ ಮಹಾಕಾಳಿ ಅಮ್ಮನವರ ದೇವಸ್ಥಾನದ ಧರ್ಮಾಧಿಕಾರಿ ಯು.ಸಿ.ಗೋಪಾಲಗೌಡ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಶರನ್ನವರಾತ್ರಿ ದಸರಾ ನಾಡಹಬ್ಬಕ್ಕೆ ವಿಶೇಷ ಮಹತ್ವವಿದೆ. ನವರಾತ್ರಿ ಶಕ್ತಿಯನ್ನು ಆರಾ ಧಿಸುವ ಬಹು ದೊಡ್ಡ ಹಬ್ಬವಾಗಿದೆ. ಜೀವನದ ಮೌಲ್ಯಗಳ ಪುನರುತ್ಥಾನದಿಂದ ಶ್ರೇಯಸ್ಸು ಕಾಣಲು ಸಾಧ್ಯ. ಮೂಲ ನಂಬಿಕೆಗಳನ್ನು ಜಾಗೃತಗೊಳಿಸಿ ಧರ್ಮ, ಸಂಸ್ಕೃತಿ ಮತ್ತು ಆದರ್ಶ ಪರಂಪರೆ ಬೆಳೆಸುವುದೇ ದಸರಾ ಮಹೋತ್ಸವದ ಮೂಲ ಗುರಿಯಾಗಿದೆ ಎಂದರು.

ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಮುಂಭಾಗದ ಅಗ್ನಿ ಕುಂಡದಲ್ಲಿ ಭಸ್ಮಕ್ಕೆ ದಿವ್ಯ ಶಕ್ತಿಯಿದ್ದು, ಒಂದು ವರ್ಷ ಕಾಲ ಆ ಭಸ್ಮವನ್ನು ಮನೆಯಲ್ಲಿ ಇರಿಸಿಕೊಂಡರೆ ಯಾವುದೇ ತೊಂದರೆಗಳು ಎದುರಾಗುವುದಿಲ್ಲವೆಂದು ತಿಳಿಸಿದರು.

ಶ್ರೀ ಗುರು ಪರದೇಶಪ್ಪನವರ ಮಠದ ವೇದಮೂರ್ತಿ ಮಧುಕುಮಾರ್‌, ಕೂಸುಗಲ್ಲು ಚಂದ್ರಶೇಖರಗೌಡರು, ಅಂಡವಾನೆ ಎ.ಟಿ.ಸುಬ್ರಾಯಗೌಡರು, ಜಯರಾಮ್‌, ಸುರೇಶ್‌ಗೌಡ, ಪಟ್ನ ಪಿ.ಎ.ಪುಟ್ಟಸ್ವಾಮೇಗೌಡರು, ತೋರುವಾನೆ ಟಿ.ಕಾಳಪ್ಪಗೌಡರು ಸೇರಿದಂತೆ ಖಾಂಡ್ಯ, ಬಾಸಾಪುರ, ಕಡುವಂತಿ, ಬಿದರೆ, ಗಂಗೇಗಿರಿ, ಚಂದ್ರವಳ್ಳಿ, ಕರಡಿಖಾನ್‌, ಚಿಕ್ಕಮಗಳೂರು, ಸಖರಾಯಪಟ್ಟಣ ಹಾಗೂ ಬಾಳೆಹೊನ್ನೂರು ಸುತ್ತಮುತ್ತಲ ಭಕ್ತರುಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.