21ರಿಂದ ಲಿಂ| ಪಟ್ಟದ್ದೇವರ ಸ್ಮರಣೋತ್ಸವ
ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಲಹೆ ಉತ್ತಮ ವಾಗ್ಮಿಗಳಿಂದ ಸಭೆ
Team Udayavani, Apr 11, 2019, 3:48 PM IST
ಭಾಲ್ಕಿ: ಹಿರೇಮಠ ಸಂಸ್ಥಾನದಲ್ಲಿ ಲಿಂ| ಡಾ| ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ ನಿಮಿತ್ತ ಡಾ| ಬಸವಲಿಂಗ ಪಟ್ಟದ್ದೇವರು ಭಿತ್ತಿಪತ್ರ ಬಿಡುಗಡೆಗೊಳಿಸಿದರು.
ಭಾಲ್ಕಿ: ಈ ಭಾಗದ ನಡೆದಾಡುವ ದೇವರೆಂದೇ ಪ್ರಸಿದ್ಧರಾದ ಲಿಂ| ಡಾ| ಚನ್ನಬಸವ ಪಟ್ಟದ್ದೇವರ ಕೊಡುಗೆ ಅಪಾರವಾಗಿದ್ದು, ಏ.21 ಮತ್ತು 22ರಂದು ನಡೆಯಲಿರುವ ಲಿಂ| ಡಾ| ಚನ್ನಬಸವ ಪಟ್ಟದ್ದೇವರ 20ನೇ ಸ್ಮರಣೋತ್ಸವ
ಹಾಗೂ ವಚನ ಜಾತ್ರೆ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವಂತೆ ಹಿರೇಮಠ ಸಂಸ್ಥಾನದ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದರು.
ಹಿರೇಮಠ ಸಂಸ್ಥಾನದಲ್ಲಿ ಲಿಂ| ಡಾ| ಚನ್ನಬಸವ ಪಟ್ಟದ್ದೇವರ 20ನೇ ಸ್ಮರಣೋತ್ಸವ ಹಾಗೂ ವಚನ ಜಾತ್ರೆ ನಿಮಿತ್ತ ಪ್ರಚಾರದ ಭಿತ್ತಿ ಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಭವ್ಯ ಪ್ರಮಾಣದಲ್ಲಿ ಸ್ಮರಣೋತ್ಸವ ಹಾಗೂ ವಚನ ಜಾತ್ರೆ ಹಮ್ಮಿಕೊಳ್ಳಲಾಗುತ್ತಿದೆ.
ಜೊತೆಗೆ ಅನ್ನ ದಾಸೋಹವೂ ನೆರವೇರಲಿದೆ. ಉತ್ತಮ ವಾಗ್ಮಿಗಳಿಂದ ಮಕ್ಕಳಿಗೆ ಶೈಕ್ಷಣಿಕ ಪ್ರಚೋದನಕಾರಿ ಸಭೆಗಳು ಜರುಗಲಿವೆ ಎಂದು ತಿಳಿಸಿದರು.
ಹಿರೇಮಠ ಸಂಸ್ಥಾನ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ,
ಪ್ರಸಕ್ತ ಸಾಲಿನ ವಚನ ಜಾತ್ರೆ ಮತ್ತು ಲಿಂ| ಡಾ| ಚನ್ನಬಸವ ಪಟ್ಟದ್ದೇವರ 20ನೇ ಸ್ಮರಣೋತ್ಸವ ಸಂದರ್ಭದಲ್ಲಿ ಕೆಲವು ಮರಾಠಿ ಗ್ರಂಥಗಳು ಮತ್ತು ಸಿ.ಡಿ. ಲೋಕಾರ್ಪಣೆ ಮಾಡಲಾಗುತ್ತಿದೆ. ಇಲ್ಲಿಯವರೆಗೆ 140 ಗ್ರಂಥಗಳು ಪ್ರಕಟವಾಗಿರುವುದು ಹೆಮ್ಮೆಯ ವಿಷಯ ಎಂದರು. ಈ ಸಂದರ್ಭದಲ್ಲಿ ರೈತ
ಸಂಘದ ತಾಲೂಕು ಅಧ್ಯಕ್ಷ ಸಿದ್ರಾಮಪ್ಪ ಅಣದೂರೆ, ರಾಜಪ್ಪ ಜಲ್ದೆ, ಸಂಜು ಕರಕಾಳೆ, ಸಂಗಮೇಶ ವಾಲೆ, ಕಪಲಾಪೂ ಗ್ರಾಮದ ಮಲಶೆಟ್ಟೆಪ್ಪ ಭಾಲ್ಕೆ, ಬಾಬು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!