ಪತ್ರಕರ್ತರಿಗೆ ವಿಶೇಷ ರಕ್ಷಣೆ ಅಗತ್ಯ: ಫಾ| ಡಿಸೋಜಾ
ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಕಾರ್ಯ ಮುಖ್ಯ
Team Udayavani, Jul 19, 2019, 4:06 PM IST
ಭಾಲ್ಕಿ: ಏಸು ನಿಲಯದಲ್ಲಿ ಆರ್ಬಿಟ್ ಸಂಸ್ಥೆಯಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರವನ್ನು ಏಸು ನಿಲಯದ ನಿರ್ದೇಶಕ ಫಾದರ್ ಕ್ಲೇರಿ ಡಿಸೋಜಾ ಉದ್ಘಾಟಿಸಿದರು.
ಭಾಲ್ಕಿ: ಪತ್ರಕರ್ತರು ಜೀವದ ಹಂಗು ತೊರೆದು ಕೆಲವು ಸಮಸ್ಯಾತ್ಮಕ ಸುದ್ದಿಗಳನ್ನು ಪ್ರಕಟಿಸುತ್ತಾರೆ. ಅಂತಹ ಸಂದರ್ಭದಲ್ಲಿ ಸರ್ಕಾರ ಪತ್ರಕರ್ತರಿಗೆ ವಿಶೇಷ ರಕ್ಷಣೆ ನಿಡುವುದು ಅಗತ್ಯ ಎಂದು ಏಸು ನಿಲಯದ ನಿರ್ದೇಶಕ ಫಾದರ್ ಕ್ಲೇರಿ ಡಿಸೋಜಾ ಹೇಳಿದರು.
ಪಟ್ಟಣದ ಏಸು ನಿಲಯದಲ್ಲಿ ಆರ್ಬಿಟ್ ಸಂಸ್ಥೆ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಕಾರ್ಯ ಶ್ರೇಷ್ಠವಾಗಿದೆ. ವರ್ತಮಾನ ಪತ್ರಿಕೆಗಳು ಸಮಾಜದ ಸಿಹಿ-ಕಹಿ ಘಟನೆಗಳನ್ನು ಯಥಾವತ್ತಾಗಿ ಪ್ರಕಟಿಸಿ ಸಮಾಜವನ್ನು ಜಾಗೃತಗೊಳಿಸುತ್ತವೆ. ಕಾರಣ ಪತ್ರಿಕೆಗಳು ಸಮಾಜದ ಕನ್ನಡಿಯಾಗಿವೆ ಎಂದರು. ಆರ್ಬಿಟ್ ಸಂಸ್ಥೆಯು ಸುಮಾರು 25 ವರ್ಷಗಳಿಂದ ಎಚ್ಐವಿ ಸೊಂಕು ಪೀಡಿತರಿಗೆ, ಮಾನಸಿಕ ಅಸ್ವಸ್ಥರಿಗೆ, ಅಂಗವಿಕಲರಿಗೆ, ಕುಷ್ಠರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತಿದೆ. ಮಹಿಳಾ ಸಬಲೀಕರಣಕ್ಕಾಗಿ ಸ್ವಸಹಾಯ ಸಂಘಗಳ ಸ್ಥಾಪನೆ, ನೀರಿನ ಬರ ನೀಗಿಸಲು ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸಲಾಗುತ್ತಿದೆ ಎಂದರು.
ನಿಲಯದ ಮೂಲಕ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ವ್ಯವಸ್ಥೆ ಮಾಡಲಾಗಿದೆ. ಚರ್ಚ್ನಲ್ಲಿ ನಡೆಯುವ ಧಾರ್ಮಿಕ ಕಾರ್ಯಗಳನ್ನು ಎಲ್ಲ ಪತ್ರಕರ್ತರು ಉತ್ತಮ ರೀತಿಯಿಂದ ಪ್ರಕಟಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಪತ್ರಕರ್ತರ ಸಂಘದ ಅಧ್ಯಕ್ಷ ಅಶೋಕ ರಾಜೋಳೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸನ್ಮಾನ: ಇದೇ ವೇಳೆ ಪತ್ರಕರ್ತರಾದ ಚಂದ್ರಶೇಖರ ಎಮ್ಮೆ, ಗಣಪತಿ ಬೋಚರೆ, ರಾಜೇಶ ಮುಗಟೆ, ಪ್ರದೀಪ ಬಿರಾದಾರ, ದಿಲೀಪ ಜೋಳದಾಪ್ಕೆ, ಸಂತೋಷ ಹಡಪದ ಅವರನ್ನು ಆರ್ಬಿಟ್ ಸಂಸ್ಥೆಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಿಸ್ಟರ್ ಜ್ಯೋತಿ, ಸಿಸ್ಟರ್ ಮಿನಿ, ಫಾದರ್ ದೀಪಕ, ಫಾದರ ಪ್ರಭು, ಫಾದರ್ ಪ್ರವೀಣ ಉಪಸ್ಥಿತರಿದ್ದರು. ಸಿಸ್ಟರ್ ಶೋಭಾ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್