24 ಹಳ್ಳಿಗಳಿಗೆ ಟ್ಯಾಂಕರ್‌ನೀರು

ಪ್ರತಿ ದಿನಕ್ಕೆ 140 ಟ್ರಿಪ್‌ ಪೂರೈಕೆ, ಸಂಪೂರ್ಣ ಬತ್ತಿದ ಕಾರಂಜಾ ನದಿ, ಮಳೆಗಾಲದಲ್ಲೂ ಮುಂದುವರಿದ ಬೇಸಿಗೆ ಪರಿಸ್ಥಿತಿ, ಜಾನುವಾರುಗಳಿಗೂ ಸಂಕಷ್ಟ

Team Udayavani, Jul 18, 2019, 10:39 AM IST

18-July-5

ಭಾಲ್ಕಿ: ದಾಡಗಿ ಹತ್ತಿರದ ಕಾರಂಜಾ ನದಿಗೆ ನಿರ್ಮಿಸಲಾದ ಬ್ಯಾರೇಜ್‌ ಬತ್ತಿರುವುದು.

ಭಾಲ್ಕಿ: ಮುಂಗಾರು ಹಂಗಾಮು ಆರಂಭವಾಗಿ ಸುಮಾರು 46 ದಿನಗಳು ಕಳೆದರೂ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿಲ್ಲ. ವಾಡಿಕೆಯಂತೆ ಮಳೆಯಾಗದೇ ನೀರಿನ ಸಮಸ್ಯೆ ಮಳೆಗಾಲದಲ್ಲೂ ತೀವ್ರವಾಗಿ ಕಾಡುತ್ತಿದೆ.

ತಾಲೂಕಿನ ಹಲವು ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಗಾಗಿ ಬೇಸಿಗೆಯಲ್ಲಿ ಆರಂಭಿಸಲಾಗಿದ್ದ ಟ್ಯಾಂಕರ್‌ ನೀರು ಇಂದಿಗೂ ಮುಂದುವರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕು ಅಧಿಕಾರಿಗಳ ಮಾಹಿತಿ ಪ್ರಕಾರ ತಾಲೂಕಿನ 24 ಗ್ರಾಮಗಳಿಗೆ 32 ಟ್ಯಾಂಕರ್‌ಗಳಿಂದ ದಿನಕ್ಕೆ 140 ಟ್ರಿಪ್‌ ನೀರು ಪೂರೈಸಲಾಗುತ್ತಿದೆ.

ತಾಲೂಕಿನ ಚಳಕಾಪುರ, ಚಳಕಾಪುರ ವಾಡಿ, ಹರಿವಾಡಿ, ಯೆಲ್ಲಮ್ಮ ವಾಡಿ, ಹಲಬರ್ಗಾ, ತೆಗಂಪುರ, ತರನಳ್ಳಿ, ಅಂಬೆಸಾಂಗವಿ, ಜೊಳದಪಕಾ, ಖಟಕಚಿಂಚೋಳಿ, ಭಾತಂಬ್ರಾ, ಮೆಹಕರ, ಧನ್ನೂರಾ(ಎಸ್‌), ನೆಳಗಿ, ಕೋನಮೆಳಕುಂದಾ, ರುದನೂರ, ತೆಲಗಾಂವ, ತಳವಾಡ, ಕಣಜಿ, ಕರಡ್ಯಾಳ ಸೇರಿದಂತೆ ಸುಮಾರು 24 ಗ್ರಾಮಗಳಿಗೆ ಇದುವರೆಗೂ ಟ್ಯಾಂಕರ್‌ ನೀರು ಪೂರೈಸಲಾಗುತ್ತಿದೆ ಎಂದು ತಹಶೀಲ್ದಾರ್‌ ಅಣ್ಣಾರಾವ ಪಾಟೀಲ ತಿಳಿಸಿದ್ದಾರೆ.

ಗ್ರಾಮಗಳಲ್ಲದೇ ಪಟ್ಟಣದಲ್ಲಿಯೂ ಕುಡಿಯುವ ನೀರಿನ ತೊಂದರೆ ವಿಪರೀತವಾಗಿ ಕಾಡುತ್ತಿದೆ. ಪಟ್ಟಣದಲ್ಲಿ ಪ್ರತಿನಿತ್ಯ 75 ಟ್ಯಾಂಕರ್‌ಗಳ ಮೂಲಕ 27 ವಾರ್ಡ್‌ಗಳಿಗೆ ನೀರು ಪೂರೈಸಲಾಗುತ್ತಿದೆ ಪುರಸಭೆ ಮುಖ್ಯಾಧಿಕಾರಿ ಶಿವಕುಮಾರ ತಿಳಿಸಿದ್ದಾರೆ.ಮಳೆಗಾಲ ಪ್ರಾರಂಭವಾಗಿ ಸುಮಾರು ಒಂದೂವರೆ ತಿಂಗಳು ಗತಿಸಿದರೂ ಕುಡಿಯಲು ಸಮರ್ಪಕವಾಗಿ ನೀರು ಸಿಗುತ್ತಿಲ್ಲ. ಹೀಗೆ ಮುಂದುವರಿದರೆ ಜನ ಜಾನುವಾರಗಳ ಪಾಡೇನು? ಸರಕಾರ ಜನರಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಸುತ್ತದೆ. ಆದರೆ ಜಾನುವಾರುಗಳ ಗತಿ ಏನು ಎಂಬ ಪ್ರಶ್ನೆ ಎದುರಾಗಿದೆ.

ಕಳೆದ ಸಾಲಿನ ಜೂನ್‌ನಲ್ಲಿ ಸಾಕಷ್ಟು ಮಳೆಯಾಗಿ ಹಳ್ಳ ಕೊಳ್ಳಗಳು ತುಂಬಿ ನದಿಗೆ ನೀರು ಬಂದಿತ್ತು. ಆದರೆ ಈ ವರ್ಷ ಇನ್ನೂ ಬೇಸಿಗೆಯಂತೆಯೇ ಇದೆ. ಹೀಗಾಗಿ ಪಟ್ಟಣದ ಕುಡಿಯುವ ನೀರಿನ ಮೂಲ ದಾಡಗಿ ಹತ್ತಿರದ ಕಾರಂಜಾ ನದಿ ಸಂಪೂರ್ಣ ಬತ್ತಿ ಹೋಗಿದೆ. ಹೀಗಾಗಿ ಪಟ್ಟಣದಲ್ಲಿ ಇದುವರೆಗೂ ಟ್ಯಾಂಕರ್‌ ನೀರು ಸರಬರಾಜು ಮಾಡಲಾಗುತ್ತಿದೆ. ಟ್ಯಾಂಕರ್‌ ನೀರು ಬರುವವರೆಗೆ ಪಟ್ಟಣದ ನಾಗರಿಕರು ಕೊಡ ಹಿಡಿದು ಕಾಯುವಂತಾಗಿದೆ. ಆದಷ್ಟು ಬೇಗ ಸತತ ಮಳೆ ಸುರಿದು ತಾಲೂಕಿನ ಜನರ ನೀರಿನ ದಾಹ ತಣಿಸುವುದೋ ಆ ದೇವರೇ ಬಲ್ಲ.

ಪ್ರತಿನಿತ್ಯ ಮುಗಿಲಿಗೆ ಮುಖಮಾಡಿ ಮಳೆಗಾಗಿ ದೇವರನ್ನು ನೆನೆಸುವುದೇ ನಮ್ಮ ಕಾಯಕವಾಗಿದೆ ಎನ್ನುತ್ತಾರೆ ಹಲಬರ್ಗಾ ಗ್ರಾಮದ ನಿವಾಸಿ ಸುರೇಶ ಪ್ರಭಾ.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.