ಬೆಲೆ ಕುಸಿತ |ಬಾಳೆ ಗೊನೆ ತಿಪ್ಪೆಗೆಸೆದ ರೈತ

ಬೆಲೆ ಕುಸಿತಗೊಂಡ ಹಿನ್ನೆಲೆ 3 ಎಕರೆಯಲ್ಲಿ ಬೆಳೆದಿದ್ದ ಫಸಲು ಗೊಬ್ಬರ ಮಾಡಲು ನಿರ್ಧಾರ

Team Udayavani, Sep 26, 2021, 8:07 PM IST

xfgsedre

ವರದಿ: ಮಂಜುನಾಥ ಎಚ್‌. ಕುಂಬಳೂರ

ರಾಣಿಬೆನ್ನೂರ: ತಾಲೂಕಿನ ಮಾಕನೂರ ಗ್ರಾಮದ ರೈತ ಶಿವನಗೌಡ ನಾಗಪ್ಪ ಮುದಿಗೌಡ್ರ ತನ್ನ 3 ಎಕರೆ ಜಮೀನಿನಲ್ಲಿ ಬಾಳೆ ಬೆಳೆದಿದ್ದು, ಫಸಲು ಉತ್ತಮವಾಗಿ ಬಂದಿದೆ. ಆದರೆ, ಬೆಲೆ ಕುಸಿತಗೊಂಡು ಕೇಳುವವರಿಲ್ಲದಂತಾಗಿದೆ. ಹಾಗಾಗಿ, ಎಲ್ಲ ಬಾಳೆ ಗೊನೆಗಳನ್ನು ತಿಪ್ಪೆಗೆ ಹಾಕಿ ಹಸಿರು ಗೊಬ್ಬರ ತಯಾರಿಸಲು ಮುಂದಾಗಿದ್ದಾರೆ.

ಬಾಳೆ ಸಸಿ ನಾಟಿ ಮಾಡುವುದರಿಂದ ಹಿಡಿದು ಗೊಬ್ಬರ, ಕ್ರಿಮಿನಾಶಕ, ಕೊಯ್ಲು, ಕೂಲಿ ಆಳಿನ ಖರ್ಚು ಸೇರಿ 1ಲಕ್ಷಕ್ಕೂ ಅ ಧಿಕ ಹಣ ಖರ್ಚು ತಗುಲುತ್ತಿದೆ. ಪ್ರಸ್ತುತ ಬೆಲೆ ಕುಸಿದ ಕಾರಣ ಕೆಜಿಗೆ 3 ರೂ. ಇದೆ. ಅದನ್ನು ವ್ಯಾಪಾರಸ್ಥರು ಕೇಳುತ್ತಿಲ್ಲ. ಇದರಿಂದ ಅಸಹಾಯಕನಾಗಿದ್ದೇನೆ. ಒಂದು ಎಕರೆಗೆ 25 ಟನ್‌ ಬಂದರೂ 75 ಸಾವಿರ ರೂ. ಆಗುತ್ತದೆ. ಅದಕ್ಕೂ ಬೇಡಿಕೆ ಇಲ್ಲ. ಮಾಡಿದ ಖರ್ಚಿಗಿಂತ ಆದಾಯ ಕಡಿಮೆಯಾಗುವುದರಿಂದ ವ್ಯರ್ಥ ಶ್ರಮ ಹಾಕುವುದು ಬೇಡ ಎಂದು ಭಾವಿಸಿ ಎಲ್ಲ ಬಾಳೆ ಗೊನೆಗಳನ್ನು ತಿಪ್ಪೆಗೆ ಹಾಕಲು ಮುಂದಾಗಿದ್ದೇನೆ ಎಂದು ರೈತ ಶಿವನಗೌಡ “ಉದಯವಾಣಿ’ ತಿಳಿಸಿದರು.

ರೈತರ ಬದುಕು ಒಂದಿಲ್ಲೊಂದು ಸಂಕಷ್ಟದಲ್ಲಿ ಸಿಲುಕಿ ಬೆಂಡಾಗುತ್ತಲೇ ಇದೆ. ಕೊರೊನಾ ಮಹಾಮಾರಿ ರೈತರ ಬದುಕಿನಲ್ಲಿ ಕರಿನೆರಳು ಬೀರಿದರೆ, ಅತಿವೃಷ್ಟಿ ಅಥವಾ ಅನಾವೃಷ್ಟಿ, ಉತ್ತಮವಾಗಿ ಬಂದ ಫಸಲಿಗೆ ಬೆಲೆ ಸಿಗದೆ ಮಾಡಿದ ಖರ್ಚು ಕೂಡ ಬಾರದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನು ಮೆಟ್ಟಿ ನಿಲ್ಲಲು ರೈತರು ವೈಜ್ಞಾನಿಕ ಕೃಷಿಯತ್ತ ಸಾಗಬೇಕಿದೆ.

ರೈತ ತನ್ನ ಒಟ್ಟು ಜಮೀನಿನಲ್ಲಿ ಸಮಗ್ರ ಕೃಷಿ ಅಳವಡಿಸಿಕೊಳ್ಳುವುದು ಉತ್ತಮ. ಜೋಳ, ರಾಗಿ, ನವಣಿ, ತೊಗರಿ, ಹೆಸರು, ಹಲಸಂದಿ, ಹತ್ತಿ, ತರಕಾರಿ ಬೆಳೆಗಳು ಸೇರಿದಂತೆ ಎಲ್ಲ ವಿಧದ ಬೆಳೆಗಳನ್ನು ಬೆಳೆದಲ್ಲಿ ಇವುಗಳಲ್ಲಿ ಕೆಲವು ಬೆಳೆಗಳಿಗೆ ಬೆಲೆ ಕುಸಿಯಬಹುದು. ಆದರೆ ಎಲ್ಲ ಬೆಳೆಗಳಿಗೂ ಬೆಲೆ ಕುಸಿಯಲು ಸಾಧ್ಯವಿಲ್ಲ. ಒಬ್ಬ ರೈತ ಒಂದೇ ಬೆಳೆಗೆ ತನ್ನ ಎಲ್ಲ ಜಮೀನನ್ನು ಉಪಯೋಗಿಸಿದಲ್ಲಿ ಈ ವೇಳೆ ಬೆಲೆ ಕುಸಿದರೆ ದಿಕ್ಕು ತೋಚದಂತಾಗಿ ಮಂಕಾಗುತ್ತಾನೆ. ಇದಕ್ಕೆ ಉದಾಹರಣೆಗೆ ರಾಣಿಬೆನ್ನೂರ ತಾಲೂಕಿನ ಮಾಕನೂರ ಗ್ರಾಮದ ರೈತನ ಬಾಯಿಗೆ ಬಂದ ತುತ್ತು ಕೈಗೆ ಬಾರದಂತಾಗಿ ಅಂದಾಜು 3 ಲಕ್ಷ ರೂ. ಮೌಲ್ಯದ ಸುಮಾರು 2.25 ಟನ್‌ ಬಾಳೆ ನಷ್ಟವಾಗಿ ಸಂಕಷ್ಟ ಎದುರಿಸುವಂತಾಗಿದೆ.

ಇತ್ತ ತೋಟಗಾರಿಕಾ ಇಲಾಖೆ ಅಧಿಕಾರಿಗಳು ರೈತನ ಬಾಳೆ ತೋಟಕ್ಕೆ ಭೇಟಿ ನೀಡಿ ರೈತನ ಸಂಕಷ್ಟಕ್ಕೆ ನೆರವಾಗುವರೋ ಎಂಬುದನ್ನು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.