ಫಲಪುಷ್ಪ ಪ್ರದರ್ಶನಕ್ಕೆ 1.72 ಲಕ್ಷ ಜನ ಭೇಟಿ


Team Udayavani, Aug 16, 2019, 3:06 AM IST

lalbhag

ಬೆಂಗಳೂರು: ಉದ್ಯಾನ ನಗರಿಯ ಸಸ್ಯಕಾಶಿ ಗುರುವಾರ ಹೌಸ್‌ಫ‌ುಲ್‌. ಒಂದೇ ದಿನದಲ್ಲಿ ಭೇಟಿ ಕೊಟ್ಟವರ ಸಂಖ್ಯೆ ಬರೋಬ್ಬರಿ 1.72ಲಕ್ಷ. 73ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಸರ್ಕಾರಿ ರಜಾ ದಿನವೂ ಇದ್ದ ಕಾರಣ ಲಾಲ್‌ಬಾಗ್‌ಗೆ ಜನಸಾಗರವೇ ಹರಿದು ಬಂದಿತ್ತು. ಕಣ್ಣು ಹಾಯಿಸಿದಷ್ಟೂ ಜನರಿಂದ ತುಂಬಿ ತುಳುಕುತ್ತಿತ್ತು.

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಒಂದೇ ದಿನದಲ್ಲಿ 8.07 ಲಕ್ಷ ರೂ. ಆದಾಯ ತೋಟಗಾರಿಕೆ ಇಲಾಖೆಗೆ ಬಂದಿದೆ. 1.31 ಲಕ್ಷ ವಯಸ್ಕರು ಮತ್ತು 41 ಸಾವಿರ ಮಕ್ಕಳು ಪಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿದ್ದರು.

ಮಕ್ಕಳಿಗೆ ಉಚಿತ ಪ್ರವೇಶ: ಫ‌ಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡುವ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ಗುರುವಾರ ಒಂದೇ ದಿನ 30 ಸಾವಿರಕ್ಕಿಂತ ಹೆಚ್ಚು ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಸಂಚಾರ ದಟ್ಟಣೆ: ಸ್ವಾಂತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್‌ಭಾಗ್‌ ಫ‌ಲಪುಷ್ಪ ಪ್ರದರ್ಶನ ವೀಕ್ಷಿಸಲು ರಾಜ್ಯದ ಮೂಲೆ ಮೂಲೆಯಿಂದ ಸಹಸ್ರಾರು ಜನ ಶುಕ್ರವಾರ ಆಗಮಿಸಿದ್ದರು. ಪರಿಣಾಮ ಲಾಲ್‌ಭಾಗ್‌ ಸುತ್ತಮುತ್ತಲ ಪ್ರದೇಶಗಳಲ್ಲಿ ಕಿಲೋಮೀಟರ್‌ಗಟ್ಟಲೆ ದೂರ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ಲಾಲ್‌ ಭಾಗ್‌ನ ಪಶ್ಚಿಮ, ಪೂರ್ವ ಸೇರಿದಂತೆ ನಾಲ್ಕು ಗೇಟ್‌ಗಳ ರಸ್ತೆಗಳಲ್ಲಿ ಉಂಟಾಗಿದ್ದ ಸಂಚಾರ ದಟ್ಟಣೆಯಿಂದ ವಾಹನ ಸವಾರರು ಪರದಾಡಿದರು.

ರಿಚ್‌ಮಂಡ್‌ ರಸ್ತೆ, ಶಾಂತಿನಗರ, ಕೆ.ಎಚ್‌ ರಸ್ತೆ, ಎಂ.ಎಚ್‌ ಮರಿಗೌಡ ರಸ್ತೆ , ಕೃಂಬಿಗಲ್‌ ರಸ್ತೆ ಸೇರಿದಂತೆ ಲಾಲ್‌ಭಾಗ್‌ ಸಂಪರ್ಕಿಸುವ ಸುತ್ತಮುತ್ತಲ ನಾಲ್ಕೈದು ಕಿಲೋಮೀಟರ್‌ ವ್ಯಾಪ್ತಿಯಲ್ಲಿ ಭಾರೀ ವಾಹನ ದಟ್ಟಣೆ ಕಂಡು ಬಂದಿತು. ಸರತಿ ಸಾಲಿನಲ್ಲಿ ಕಾಲಿಡಲು ಜಾಗದಂತೆ ನಿಂತುಕೊಂಡಿದ್ದ ವಾಹನಗಳು ಲಾಲ್‌ಭಾಗ್‌ ತಲುಪಲು ಗಂಟೆಗೂ ಹೆಚ್ಚು ಕಾಲ ಹಿಡಿಯುತ್ತಿತ್ತು. ರಿಚ್‌ ಮಂಡ್‌ ಮೇಲ್ಸೇತುವೆ ರಸ್ತೆ, ಶಾಂತಿನಗರ, ಕೃಂಬಿಗಲ್‌ ರಸ್ತೆಗಳಲ್ಲಿ ಉಂಟಾಗಿದ್ದ ಭಾರೀ ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರ ಪೊಲೀಸರು ಹರಸಾಹಸಪಟ್ಟರು.

ಲಾಲ್‌ಭಾಗ್‌ನ ಪಶ್ಚಿಮ ದ್ವಾರದ ಬಳಿಯಿರುವ ಮೆಟ್ರೋ ನಿಲ್ದಾಣದ ಸಮೀಪವೂ ಭಾರೀ ಸಂಚಾರ ದಟ್ಟಣೆ ಉಂಟಾಗಿತ್ತು. ಪರಿಣಾಮ ಮೆಟ್ರೋ ಅವಲಂಬಿತ ಪ್ರಯಾಣಿಕರು ನಿಲ್ದಾಣದಿಂದ ಹೊರಬಂದು ರಸ್ತೆದಾಟಲು ಹರಸಾಹಸಪಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ರಸ್ತೆ ದಾಟಿದರೆ ಸಾಕು ಎಂಬ ಭಾವನೆ ಜನರಲ್ಲಿ ಮೂಡಿತ್ತು. ಶುಕ್ರವಾರ ರಾತ್ರಿ 7ಗಂಟೆಯವರೆಗೂ ಇದೇ ಸಂಚಾರ ದಟ್ಟಣೆ ಉಂಟಾಗಿತ್ತು ಬಳಿಕ ಕಡಿಮೆಯಾಯಿತು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.