10 ಸ್ಥಾಯಿ ಸಮಿತಿ ಅಧ್ಯಕ್ಷರ ಅವಿರೋಧ ಆಯ್ಕೆ
Team Udayavani, Jan 24, 2020, 10:48 AM IST
ಬೆಂಗಳೂರು: ಬಿಬಿಎಂಪಿಯ 10 ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ತೋಟಗಾರಿಕೆ ಹಾಗೂ ಲೆಕ್ಕ ಪತ್ರ ಸ್ಥಾಯಿ ಸಮಿತಿ ಚುನಾವಣೆ ಮುಂದೂಡಲಾಗಿದೆ.
ಬಿಬಿಎಂಪಿ ಕೇಂದ್ರ ಕಚೇರಿಯ ಪೌರ ಸಭಾಂಗಣದಲ್ಲಿ ಮೇಯರ್ ಗೌತಮ್ಕುಮಾರ್ ನೇತೃತ್ವದಲ್ಲಿಗುರುವಾರ ನಡೆದ ಸಭೆಯಲ್ಲಿ 10 ಸ್ಥಾಯಿ ಸಮಿತಿಗಳಿಗೆ ಪ್ರತ್ಯೇಕವಾಗಿ ಚುನಾವಣೆ ನಡೆಸಲಾಯಿತು. ಈ ವೇಳೆ ನಾಮಪತ್ರ ಸಲ್ಲಿಕೆ ಮತ್ತು ವಾಪಸ್ ಪಡೆಯಲು ಮೇಯರ್ ತಲಾ ಒಂದು ನಿಮಿಷ ಕಾಲಾವಕಾಶ ನೀಡಿದರು. ಅಂತಿಮವಾಗಿ ಎಲ್ಲ ಹತ್ತು ಸ್ಥಾಯಿ ಸಮಿತಿಗಳ ಅಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮೇಯರ್ ಘೋಷಿಸಿದರು.
ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದಲ್ಲಿ ಈ ಬಾರಿ ಎಲ್ಲ ಪಕ್ಷದ ಸದಸ್ಯರೂ ಇದ್ದಾರೆ. ಅದರಂತೆ ಜೆಡಿಎಸ್ನಿಂದ ಲಗ್ಗೆರೆ ವಾರ್ಡ್ನ ಮಂಜುಳಾ ನಾರಾಯಣಸ್ವಾಮಿ, ಕಾಂಗ್ರೆಸ್ನಿಂದ ಯಶವಂತಪುರ ವಾರ್ಡ್ನ ಜಿ.ಕೆ. ವೆಂಕಟೇಶ್ ಹಾಗೂ ದೊಮ್ಮಲೂರು ವಾರ್ಡ್ನ ಪಕ್ಷೇತರ ಸದಸ್ಯ ಲಕ್ಷ್ಮೀನಾರಾಯಣ ಅವರಿಗೆ ಅವಕಾಶ ಸಿಕ್ಕಿದೆ. ಇನ್ನು ಬಿಜೆಪಿಯ ಎಲ್.ಶ್ರೀನಿವಾಸ್, ಮಂಜುನಾಥ ರಾಜು, ಆಶಾ ಸುರೇಶ್, ಹನುಂತಯ್ಯ, ಮೋಹನ್ಕುಮಾರ್, ಆರ್.ಪದ್ಮಾವತಿ ಹಾಗೂ ಅರುಣಾ ರವಿ ಅವರಿಗೂ ಈ ಬಾರಿ ಅಧ್ಯಕ್ಷಗಿರಿ ಸಿಕ್ಕಿದೆ.
ತಾಂತ್ರಿಕ ಸಮಸ್ಯೆಯಿಂದ ಲೆಕ್ಕಪತ್ರ ಹಾಗೂ ತೋಟಗಾರಿಕಾ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಸಾಧ್ಯವಾದಷ್ಟು ಬೇಗ ಅಧ್ಯಕ್ಷರ ಆಯ್ಕೆ ಮಾಡಲಾಗುವುದು. –ಗೌತಮ್ ಕುಮಾರ್, ಬಿಬಿಎಂಪಿ ಮೇಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ