10.46 ಲಕ್ಷ ಕೋಟಿ ರೂ. ಕೃಷಿ ಸಾಲ ವಿತರಣೆ
Team Udayavani, Apr 13, 2018, 7:00 AM IST
ಬೆಂಗಳೂರು: ನಬಾರ್ಡ್ 2017-18ನೇ ಸಾಲಿನಲ್ಲಿ ದೇಶಾದ್ಯಂತ 10.46 ಲಕ್ಷ ಕೋಟಿ ರೂ. ಕೃಷಿ ಸಾಲ ನೀಡುವ ಮೂಲಕ ನಿರೀಕ್ಷೆಗೂ ಮೀರಿದ ಗುರಿ ಸಾಧನೆ ಮಾಡಿದೆ ಎಂದು ನಬಾರ್ಡ್ ಅಧ್ಯಕ್ಷ ಡಾ.ಹರೀಶ್ ಕುಮಾರ್ ಬನ್ಸಾಲ್ ಹೇಳಿದ್ದಾರೆ.
ನಗರದಲ್ಲಿ 2017-18ನೇ ಸಾಲಿನ ಫಲಿತಾಂಶ ಪ್ರಕಟಿಸಿ ಮಾತನಾಡಿದ ಅವರು, ಕಳೆದ ಹಣಕಾಸು ವರ್ಷದಲ್ಲಿ 10 ಲಕ್ಷ ಕೋಟಿ ರೂ.ಕೃಷಿ ಸಾಲ ವಿತರಿಸುವ ಗುರಿ ಇತ್ತು. ಆದರೆ,ಫೆ.28ರವರೆಗೆ ಈ ಗುರಿ ಮೀರಿ 10.46 ಲಕ್ಷ ಕೋಟಿ ರೂ. ಕೃಷಿ ಸಾಲ ವಿತರಿಸಲಾಗಿದ್ದು, ಸಾಲ ವಿತರಣೆ ಪ್ರಮಾಣ ನಿರೀಕ್ಷೆ ಮೀರಿ ಹೆಚ್ಚಳ ಕಂಡಿದೆ. ಅವಧಿ ಸಾಲದಡಿ 3.69 ಲಕ್ಷ ಕೋಟಿ ರೂ., ಬೆಳೆ ಸಾಲದಡಿ 6.76 ಲಕ್ಷ ಕೋಟಿ ರೂ. ವಿತರಿಸಲಾಗಿದೆ ಎಂದು ಹೇಳಿದರು.
ಹಾಗೆಯೇ, 1.45 ಲಕ್ಷ ಕೋಟಿ ರೂ. ಪುನರ್ಸಾಲ ವಿತರಿಸಲಾಗಿದೆ. ಇದರಲ್ಲಿ 65,240 ಕೋಟಿ ರೂ.ದೀರ್ಘಾವಧಿ ಸಾಲ ಹಾಗೂ 79,821 ಕೋಟಿ ರೂ. ಅಲ್ಪಾವಧಿ ಸಾಲವಿದ್ದು, ಆ ಮೂಲಕ ಪುನರ್ಸಾಲ ವಿತರಣೆ ಪ್ರಮಾಣದಲ್ಲಿ ಶೇ.14ರಷ್ಟು ಹೆಚ್ಚಳವಾಗಿದೆ ಎಂದು
ತಿಳಿಸಿದರು.
ಬಂಡವಾಳ ರಚನೆಗೆ ಪೂರಕವಾಗಿ ದೀರ್ಘಕಾಲೀನ ಸಾಲ ಹೆಚ್ಚಳ, ಗ್ರಾಮೀಣ ಹಣಕಾಸು ಸಂಸ್ಥೆಗಳಿಗೆ ಬ್ಯಾಂಕಿಂಗ್ ತಂತ್ರಜ್ಞಾನ ಅಳವಡಿಕೆಗೆ ನೆರವು, ನೀರಾವರಿ ಯೋಜನೆ ವ್ಯಾಪ್ತಿ ವಿಸ್ತರಣೆ, ನೀರಾವರಿ ದಕ್ಷತೆ ಹಾಗೂ ಗ್ರಾಮೀಣ ವಸತಿ ಸೌಲಭ್ಯಗಳನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸುವ ಕಾರ್ಯಕ್ಕೆ ಕಳೆದ ವರ್ಷದಲ್ಲಿ ಆದ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು