ಒಂದೇ ವರ್ಷ 1086 ಕೋಟಿ ಸಾಲ ಮರುಪಾವತಿ


Team Udayavani, Aug 4, 2019, 3:07 AM IST

bbmp2

ಬೆಂಗಳೂರು: ಆಸ್ತಿಗಳನ್ನು ಅಡವಿಟ್ಟು ಆರ್ಥಿಕ ಅಶಿಸ್ತು ಪ್ರದರ್ಶಿಸಿದ್ದ ಬಿಬಿಎಂಪಿ, ಈಗ ಅಡಮಾನವಿರಿಸಿದ್ದ ಆಸ್ತಿಗಳನ್ನು ಋಣಮುಕ್ತಗೊಳಿಸುತ್ತಿದೆ. ತಾನು ಅಡವಿಟ್ಟಿದ್ದ 11 ಆಸ್ತಿಗಳ ಪೈಕಿ ಈಗಾಗಾಲೇ 10 ಆಸ್ತಿಗಳನ್ನು ಬಿಡಿಸಿಕೊಂಡಿರುವ ಪಾಲಿಕೆ, ಕಳೆದ ಒಂದು ವರ್ಷದಲ್ಲಿ ಆರು ಆಸ್ತಿಗಳನ್ನು ಋಣಮುಕ್ತಗೊಳಿಸಿದೆ.

ಗಂಗಾಂಬಿಕೆ ಮಲ್ಲಿಕಾರ್ಜುನ್‌ ಪಾಲಿಕೆಯ ಮೇಯರ್‌ ಆಗಿ ಒಂದು ವರ್ಷ ಪೂರೈಸುವ ಮುನ್ನವೇ ಪಾಲಿಕೆಯ ಆರು ಆಸ್ತಿಗಳನ್ನು ಸಾಲದ ಸುಳಿಯಿಂದ ಬಿಡಿಸಿದಂತಾಗಿದೆ. ಒಂದೇ ವರ್ಷದಲ್ಲಿ ಸುಮಾರು 1086 ಕೋಟಿ ಸಾಲ ಹಿಂತಿರುಗಿಸಿರುವ ಪಾಲಿಕೆ, ಮತ್ತೆ ತನ್ನ ಆಸ್ತಿಗಳನ್ನು ತಮ್ಮದಾಗಿಸಿಕೊಂಡಿದೆ. ಈ ರೀತಿ ವರ್ಷವೊಂದರಲ್ಲಿ ಅತೀ ಹೆಚ್ಚು ಸಾಲ ಮರುಪಾವತಿ ಮಾಡಿರುವುದು ಪಾಲಿಕೆ ಇತಿಹಾಸದಲ್ಲೇ ಇದೇ ಮೊದಲ ಬಾರಿ.

2015-16ನೇ ಸಾಲಿನ ಆರ್ಥಿಕ ವರ್ಷದ ಅಂತ್ಯಕ್ಕೆ 11 ಆಸ್ತಿಗಳನ್ನು ಅಡವಿಟ್ಟಿದ್ದ ಬಿಬಿಎಂಪಿ 1796.41 ಕೋಟಿ ಸಾಲವನ್ನು ಹೊಂದಿತ್ತು. ನಂತರದ ಎರಡು ವರ್ಷಗಳಲ್ಲಿ 713 ಕೋಟಿ ಮರುಪಾವತಿಸಿದ ಬಿಬಿಎಂಪಿ, ಕೆಂಪೇಗೌಡ ಮ್ಯೂಸಿಯಂ, ಮೆಯೋ ಹಾಲ್‌, ಜಾನ್ಸನ್‌ ಮಾರ್ಕೆಟ್‌ ಮತ್ತು ಮಲ್ಲೇಶ್ವರ ಮಾರುಕಟ್ಟೆಗಳನ್ನು ಋಣಮುಕ್ತಗೊಳಿಸಿತ್ತು.

2018ರ ಆಗಸ್ಟ್‌ನಲ್ಲಿ ಮೇಯರ್‌ ಆಗಿ ಆಯ್ಕೆಯಾದ ಗಂಗಾಂಬಿಕೆ, ತಮ್ಮ ಅಧಿಕಾರಾವಧಿಯಲ್ಲಿ 1086 ಕೋಟಿ ರೂ. ಸಾಲ ಮರು ಪಾವತಿ ಮಾಡಿದ್ದಾರೆ. ಆರಮಭದಲ್ಲೇ 871 ಕೋಟಿ ರೂ. ಸಾಲ ಮರುಪಾವತಿಸಿ ದಾಸಪ್ಪ ಆಸ್ಪತ್ರೆ ಕಟ್ಟಡ, ಪಬ್ಲಿಕ್‌ ಯುಟಿಲಿಟಿ ಕಟ್ಟಡ, ಬಿಬಿಎಂಪಿ ಕಚೇರಿ- ಪೂರ್ವ ಮತ್ತು ಕಲಾಸಿಪಾಳ್ಯ ಮಾರುಕಟ್ಟೆಯನ್ನು ಋಣಮುಕ್ತಗೊಳಿಸಿದ್ದರು.

ಇನ್ನು ಅಧಿಕಾರಾವಧಿ ಒಂದು ತಿಂಗಳು ಬಾಕಿ ಇರವಾಗ ಮತ್ತೆ 211.68 ಕೋಟಿ ಸಾಲ ಮರುಪಾವತಿಸಿ ಸ್ಲಾಟರ್‌ ಹೌಸ್‌ ಮತ್ತು ರಾಜಾಜಿನಗರ ಆಸ್ತಿಯನ್ನು ಹಿಂಪಡೆದಿದ್ದಾರೆ. ಈ ಮೂಲಕ 1796 ಕೋಟಿ ಸಾಲ ಮೊತ್ತ 463 ಕೋಟಿಗೆ ಇಳಿದಿದೆ.

ಈಗಾಗಲೇ ಪಾಲಿಕೆ ಮಾಡಿದ್ದ ಸಾಲವನ್ನು ತೀರಿಸುವ ಉದ್ದೇಶದಿಂದ, ಸರ್ಕಾರ ನೀಡುತಿದ್ದ ಅನುದಾನ ಮತ್ತು ಪಾಲಿಕೆಯ ತೆರಿಗೆ ಹಣವನ್ನು ಸರಿಯಾಗಿ ಬಳಕೆ ಮಾಡಲು ತೀರ್ಮಾನಿಯಲಾಗಿತ್ತು.
-ಎನ್‌.ಮಂಜುನಾಥ್‌ ಪ್ರಸಾದ್‌, ಪಾಲಿಕೆ ಆಯುಕ್ತ

ಪಾಲಿಕೆಯ ಆಸ್ತಿ ಕಾಪಾಡುವುದು ನಮ್ಮ ಕರ್ತವ್ಯವಾಗಿದ್ದು, ಆರ್ಥಿಕ ಶಿಸ್ತು ಕಾಪಾಡಲು ಯೋಜನೆ ರೂಪಿಸಲಾಗಿತ್ತು. ಅದರಂತೆ ಒಂದು ವರ್ಷದ ಅಧಿಕಾರಾವಧಿಯಲ್ಲಿ ಆರು ಆಸ್ತಿಗಳನ್ನು ಋಣಮುಕ್ತಗೊಳಿಸಲಾಗಿದೆ.
-ಗಂಗಾಂಬಿಕೆ ಮಲ್ಲಿಕಾರ್ಜುನ್‌, ಮೇಯರ್‌

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.