BBMP: ಬಿಎಂಟಿಸಿಗೆ 11.81 ಕೋಟಿ ನಷ್ಟ
Team Udayavani, Feb 4, 2024, 9:00 AM IST
ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಿಎಂಟಿಸಿಗೆ ಕೋಟ್ಯಂತರ ರೂ. ವಂಚಿಸಿದ ಮತ್ತೂಂದು ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಸಂಸ್ಥೆಯ ವಾಣಿಜ್ಯ ಶಾಖೆ ಮತ್ತು ಲೆಕ್ಕಪತ್ರ ಶಾಖೆಯ ಮುಖ್ಯಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರ ಅಬ್ದುಲ್ ಖುದ್ದೂಸ್ ಎಂಬವರನ್ನು ವಿಲ್ಸನ್ ಗಾರ್ಡ್ನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಅಬ್ದುಲ್ ಖುದ್ದೂಸ್ ಬಿಎಂ ಟಿಸಿಗೆ 11.81 ಕೋಟಿ ರೂ. ವಂಚಿಸಿದ್ದಾರೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಸಂಸ್ಥೆಯ ಸಹಾಯಕ ಭದ್ರತಾ ಮತ್ತು ಜಾಗೃತಾಧಿಕಾರಿ ಸಿ.ಕೆ. ರಮ್ಯಾ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ವಂಚನೆ ಹೇಗೆ?: ಸಂಸ್ಥೆಯ ಅಧೀನದಲ್ಲಿರುವ ವಾಣಿಜ್ಯ ಮಳಿಗೆಗಳು/ಜಾಹೀರಾತುಗಳಿಗೆ ಸಂಬಂಧಿಸಿದಂತೆ ಪರವಾನ ಗಿದಾರರಿಂದ ಕರಾರು ಒಪ್ಪಂದದ ಪ್ರಕಾರ ಪ್ರತಿ ತಿಂಗಳು ಸ್ವೀಕರಿಸಬೇಕಾದ ಲೈಸೆನ್ಸ್ ಫ್ರೀ, ಅದಕ್ಕೆ ಸಂಬಂಧಿಸಿದ ಜಿಎಸ್ಟಿ ಮೊತ್ತಕ್ಕೆ ವಾಣಿಜ್ಯ ಶಾಖೆಯಿಂದ ರಸೀದಿ ನೀಡಬೇಕಾಗಿದೆ. ಆದರೆ, ಸಂಸ್ಥೆಯಲ್ಲಿ 2021ರ ಮಾರ್ಚ್ನಿಂದ 2022ರ ಡಿಸೆಂಬರ್ವರೆಗೆ 20,24, 10,923 ರೂ. ಮೊತ್ತದ 456 ಕ್ರೆಡಿಟ್ ನೋಟ್ಗಳನ್ನು ಪರವಾನಗಿದಾರರಿಗೆ ವಿನಾಯಿತಿ ನೀಡಲಾಗಿದೆ.
ಅಲ್ಲದೆ, ಲೆಕ್ಕಪತ್ರ ಶಾಖೆ ಅಧಿಕಾರಿಯ ಆದೇಶವಿಲ್ಲದೆ 5.01ಕೋಟಿ ರೂ. ಮೊತ್ತದ 52 ಕ್ರೆಡಿಟ್ ನೋಟ್ಗಳನ್ನು ಅಕ್ರಮವಾಗಿ ತಯಾರಿಸಿ ಜಿಎಸ್ಟಿ ರಸೀದಿ ಜತೆ ಪಾವತಿಗಾಗಿ ಸಂಸ್ಥೆಯ ಲೆಕ್ಕಪತ್ರ ಇಲಾಖೆಗೆ ಕಳುಹಿಸಲಾಗಿತ್ತು. ವಾಣಿಜ್ಯ ಆದಾಯವನ್ನು ಕಡಿತಗೊಳಿಸಿ ಲೆಕ್ಕಪತ್ರ ಹೊಂದಾಣಿಕೆ ಮಾಡಿರುವುದೂ ಅಲ್ಲದೆ, ಜಿಎಸ್ಟಿ ಮೊತ್ತ ಪಾವತಿಸುವಾಗ ಸಂಸ್ಥೆಗೆ ಸಂದಾಯವಾಗಬೇಕಾಗಿದ್ದ ಪರವಾನಗಿ ಶುಲ್ಕದಲ್ಲಿಯೂ ಕಡಿತಗೊಳಿಸಲಾಗಿದೆ. ಅದರಿಂದ ಸಂಸ್ಥೆ ಹಾಗೂ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗಿದೆ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಅಬ್ದುಲ್ ಖುದ್ದೂಸ್ ಹಾಗೂ ಇಲಾಖೆಯ ಇತರೆ ಅಧಿಕಾರಿ-ಸಿಬ್ಬಂದಿ ವಿರುದ್ಧ ಕಾನೂನು ಕ್ರಮಕೈಗೊ ಳ್ಳುವಂತೆ ರಮ್ಯಾ ದೂರಿನಲ್ಲಿ ಕೋರಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ