11ಮಂದಿ ಅಂತಾರಾಜ್ಯ ದರೋಡೆಕೋರರ ಬಂಧನ


Team Udayavani, Sep 2, 2019, 3:08 AM IST

mahile

ಬೆಂಗಳೂರು: ಸಹೋದರಿ ಹಾಗೂ ಇತರ ಪರಿಚಯಸ್ಥರ ಮನೆಗಳಲ್ಲಿ ಕಳ್ಳತನ ಹಾಗೂ ದರೋಡೆ ಮಾಡುತ್ತಿದ್ದ ಮಹಿಳೆ ಸೇರಿ 11 ಮಂದಿ ರಾಜ್ಯ ಮತ್ತು ಅಂತಾರಾಜ್ಯ ಕಳ್ಳರನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಗಿರಿಜಮ್ಮ (47), ರಾಜು ಅಲಿಯಾಸ್‌ ಸ್ಟೀಫ‌ನ್‌ ರಾಜು ಅಲಿಯಾಸ್‌ ಡಿಚ್ಚಿ ರಾಜು (51), ರಘುವರನ್‌ (30), ಸುರೇಶ್‌ (36), ಲಿಂಗರಾಜು(34) ಹಾಗೂ ತಮಿಳುನಾಡಿನ ಸ್ಟೀಫ‌ನ್‌ ರಾಜು (25), ಮಣಿಕಂಠನ್‌ (25), ಸತೀಶ್‌ (20), ರಾಜೇಶ್‌ (21), ಅಬ್ದುಲ್‌ ಸಮ್ಮದ್‌ (29) ಮತ್ತು ಸತೀಶ್‌ ಕುಮಾರ್‌ (24) ಬಂಧಿತರು.

ಅವರಿಂದ ಚಿನ್ನಾಭರಣಗಳು ಮತ್ತು ಬೆಳ್ಳಿ ವಸ್ತುಗಳು ಹಾಗೂ ಒಂದು ಆಟೋ ರಿಕ್ಷಾ, ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಆರೋಪಿಗಳ ವಿರುದ್ಧ ಕೋಣನಕುಂಟೆ, ಕಾಡುಗೋಡಿ, ಮಲ್ಲೇಶ್ವರ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು. ಪ್ರಕರಣದಲ್ಲಿ ಮಾಸ್ಟರ್‌ ಮೈಂಡ್‌ ಆಗಿರುವ ಡಿಚ್ಚಿ ರಾಜು ವಿರುದ್ಧ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಕಳ್ಳತನ, ದರೋಡೆ ಪ್ರಕರಣಗಳು ದಾಖಲಾಗಿವೆ.

ಕೆಲ ತಿಂಗಳ ಹಿಂದಷ್ಟೇ ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ, ಗಿರಿಜಮ್ಮ ಹೊರತು ಪಡಿಸಿ ಇತರೆ ಆರೋಪಿಗಳನ್ನು ಅಲ್ಲಿಯೇ ಪರಿಚಯ ಮಾಡಿಕೊಂಡಿದ್ದ. ಕೋಣನಕುಂಟೆ ಬಳಿ ಪುತ್ರನ ಜತೆ ವಾಸವಾಗಿದ್ದ ಗಿರಿಜಮ್ಮ, ಚೀಟಿ ವ್ಯವಹಾರದಲ್ಲಿ 10 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಈ ಮಧ್ಯೆ ಕೆಲ ವರ್ಷಗಳ ಹಿಂದೆ ಚೀಟಿ ವ್ಯವಹಾರದಲ್ಲಿಯೇ ಪರಿಚಯವಾದ ಡಿಚ್ಚಿ ರಾಜು, ಗಿರಿಜಮ್ಮನಿಗೆ ಪರಿಚಯಸ್ಥರ ಮನೆಗಳಲ್ಲಿ ಕಳ್ಳತನ ಮಾಡಿ ಸಾಲ ತೀರಿಸುವ ಬಗ್ಗೆ ಸಲಹೆ ನೀಡಿದ್ದ.

ಅಲ್ಲದೆ, ಕೃತ್ಯ ಎಸಗಿದರೆ ಇಂತಿಷ್ಟು ಹಣ ಕೊಡುವುದಾಗಿಯೂ ಆಮಿಷವೊಡ್ಡಿದ್ದ. ಈ ಹಿನ್ನೆಲೆಯಲ್ಲಿ ಗಿರಿಜಮ್ಮ, ಪರಿಚಯ ಇರುವ ಗಂಡಸರು ಇಲ್ಲದ ಮನೆಗಳನ್ನು ಆಯ್ಕೆ ಮಾಡಿಕೊಂಡು ದರೋಡೆಗೆ ಸಂಚು ರೂಪಿಸಿದ್ದಳು. ಬಳಿಕ ಡಿಚ್ಚಿ ರಾಜು, ತನಗೆ ಪರಿಚಯ ಇರುವ ಇತರೆ ಆರೋಪಿಗಳನ್ನು ನಿಗದಿತ ಸ್ಥಳಕ್ಕೆ ಕಳುಹಿಸಿ ಕೃತ್ಯ ಎಸಗಿ ಬಂದ ಹಣದಲ್ಲಿ ಎಲ್ಲರು ಹಂಚಿಕೊಳ್ಳುತ್ತಿದ್ದರು ಎಂದು ಪೊಲೀಸರು ಹೇಳಿದರು.

ಇತ್ತೀಚೆಗೆ ಕೋಣನಕುಂಟೆಯ ಚುಂಚಘಟ್ಟ ಮುಖ್ಯ ರಸ್ತೆಯ ಹಳೇ ಬ್ಯಾಂಕ್‌ ಕಾಲೋನಿ ನಿವಾಸಿ ಪ್ರಭಾವತಿ ಎಂಬವರು ತಾಯಿ ನರಸಮ್ಮ ಅವರ ಜತೆ ವಾಸವಾಗಿದ್ದರು. ಆ ಮನೆ ಪಕ್ಕದಲ್ಲೇ ಗಿರಿಜಮ್ಮ ವಾಸವಾಗಿದ್ದಳು. ಪ್ರಭಾವತಿ ಅವರ ಜತೆ ಸಲುಗೆಯಿಂದ ವರ್ತಿಸಿ, ಅವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದ ಆರೋಪಿ, ಆ.22ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಇತರೆ ಐವರು ಆರೋಪಿಗಳನ್ನು ಕರೆಸಿ ಮನೆಗೆ ನುಗ್ಗಿ, ದರೋಡೆ ಮಾಡಿ 298 ಗ್ರಾಂ ಚಿನ್ನಾಭರಣ ಕಳವು ಮಾಡಿಸಿದ್ದಳು. ಆಟೋದಲ್ಲಿ ಮೂವರು ಪ್ರಯಾಣಿಸಿದರೆ, ಇಬ್ಬರು ದ್ವಿಚಕ್ರ ವಾಹನದಲ್ಲಿ ಆಟೋ ಹಿಂಬಾಲಿಸುತ್ತಿದ್ದರು.

ಆದರೆ, ಗಿರಿಜಮ್ಮ ಮಾತ್ರ ಅನುಮಾನ ಬಾರದಂತೆ ಅಲ್ಲಿಯೇ ವಾಸವಾಗಿದ್ದಳು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಘಟನಾ ಸ್ಥಳದ ಸಮೀಪದಲ್ಲಿರುವ ಸಿಸಿಕ್ಯಾಮೆರಾ ದೃಶ್ಯಗಳನ್ನು ಸಂಗ್ರಹಿಸಿ ತನಿಖೆ ನಡೆಸಿದಾಗ ಆರೋಪಿಗಳ ಸುಳಿವು ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಗಿರಿಜಮ್ಮನನ್ನು ವಿಚಾರಣೆಗೊಳಪಡಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.

ಸಹೋದರಿಯ ಮನೆಯಲ್ಲಿ ಕಳವು: ಗಿರಿಜಮ್ಮನ ಸಹೋದರಿ ಮಲ್ಲೇಶ್ವರದಲ್ಲಿ ವಾಸವಾಗಿದ್ದು, ಕೆಲ ತಿಂಗಳ ಹಿಂದೆ ಅವರು ಕುಟುಂಬ ಸಮೇತ ತಮಿಳುನಾಡಿಗೆ ತೆರಳಿದ್ದರು. ಈ ಮಾಹಿತಿ ತಿಳಿದ ಗಿರಿಜಮ್ಮ, ತಮಿಳುನಾಡಿನಿಂದ ಆರೋಪಿಗಳನ್ನು ಕರೆಸಿ, ತಡರಾತ್ರಿ ಅವರ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ 5 ಲಕ್ಷ ರೂ. ನಗದು ಕಳವು ಮಾಡಿಸಿದ್ದಳು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.