ಸರ್ದಾರ್ ವಲ್ಲಭಭಾಯಿ ಪಟೇಲ್ 144ನೇ ಜನ್ಮದಿನ: ಬೆಂಗಳೂರಿನಲ್ಲಿ ಏಕತಾ ಓಟ
Team Udayavani, Oct 31, 2019, 9:55 AM IST
ಬೆಂಗಳೂರು: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 144ನೇ ಜನ್ಮದಿನದ ಹಿನ್ನೆಲೆ ಬೆಂಗಳೂರಿನಲ್ಲಿ ನಡೆದ ಏಕತೆಗಾಗಿ ಓಟ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಪಮುಖ್ಯಮಂತ್ರಿ ಡಾ, ಸಿ ಎನ್ ಆಶ್ವಥ್ ನಾರಾಯಣ, ಮತ್ತು ಸಚಿವ ಸಿ.ಟಿ ರವಿ ಭಾಗವಹಿಸಿದ್ದಾರೆ.
ದೇಶದಾದ್ಯಂತ ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 144ನೇ ಜನ್ಮದಿನೋತ್ಸವವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದೆ.ಬೆಂಗಳೂರಿನಲ್ಲಿ ನಡೆದ ಏಕತಾ ಓಟಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಅಶ್ವಥ್ ನಾರಾಯಣ್ ಹಾಗೂ ಸಚಿವ ಸಿ.ಟಿ.ರವಿ ಸೇರಿದಂತೆ ಅನೇಕ ನಾಯಕರು ಹಾಗೂ ಯುವ ಸಮೂಹ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಏಕತೆಗಾಗಿ ಓಟ ಎಂಬ ಫಲಕ ಹಾಗೂ ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ಓಡಿದರು.