4 ವರ್ಷದಲ್ಲಿ 15 ಲಕ್ಷ ಉದ್ಯೋಗ ಸೃಷ್ಟಿ


Team Udayavani, Nov 24, 2017, 12:27 PM IST

15lac-job.jpg

ಬೆಂಗಳೂರು: ರಾಜ್ಯ ಸರ್ಕಾರವು ನಾಲ್ಕು ವರ್ಷಗಳಲ್ಲಿ 13.19 ಲಕ್ಷ ಉದ್ಯೋಗ ಸೃಷ್ಟಿಸಿದೆ. 2019ರ ವೇಳೆಗೆ 15 ಲಕ್ಷ ಉದ್ಯೋಗ ಸೃಷ್ಟಿಸುವ ಯೋಜನೆ ಹಾಕಿಕೊಂಡಿರುವುದಾಗಿ ಬೃಹತ್‌ ಕೈಗಾರಿಕೆ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು.

ರಾಜ್ಯ ಸರ್ಕಾರ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸರಬರಾಜುದಾರರ ಅಭಿವೃದ್ಧಿ ಮತ್ತು ಹೂಡಿಕೆದಾರರ ಶೃಂಗಸಭೆ ಉದ್ಘಾಟಿಸಿ ಮಾತನಾಡಿ, “ಯುವ ಜನತೆ ಉದ್ಯೋಗ ಹುಡುಕುವುದಕ್ಕಿಂತ ಉದ್ಯೋಗ ಸೃಷ್ಟಿಕರ್ತರಾಗಬೇಕು.

ಭಾರತವು ವಿಶ್ವದ ಯುವ ರಾಷ್ಟ್ರವಾಗಿದ್ದು, ಉದ್ಯೋಗ ಸೃಷ್ಟಿಗೆ ಹಲವು ಮಾರ್ಗವನ್ನು ಸಂಶೋಧಿಸುತ್ತಿದ್ದೇವೆ’ ಎಂದು ಹೇಳಿದರು. 2013ರಿಂದ ಈವರೆಗೆ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಂದ 12.03 ಲಕ್ಷ, ಬೃಹತ್‌ ಕೈಗಾರಿಕೆಗಳಿಂದ 1.88 ಲಕ್ಷ ಉದ್ಯೋಗ ಸೃಷ್ಟಿಸಲಾಗಿದೆ. 2018ರೊಳಗೆ 5.79 ಉದ್ಯೋಗ ಸೃಷ್ಟಿಸುವ ಕಾರ್ಯ ಪ್ರಗತಿಯಲ್ಲಿದೆ ಎಂಬ ಮಾಹಿತಿ ನೀಡಿದರು.

ಶೇ.11ಜವಳಿ ರಫ್ತು: ಜವಳಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿ, ಜವಳಿ ಉದ್ಯಮದಲ್ಲಿ ಲಕ್ಷಾಂತರ ಜನರು ತೊಡಗಿಸಿಕೊಂಡಿದ್ದಾರೆ. ಕರ್ನಾಟಕದಿಂದ ಶೇ.11 ಜವಳಿ ಉತ್ಪನ್ನ ರಫ್ತು ಮಾಡುತ್ತಿದ್ದೇವೆ. 2013-18ರ ಜವಳಿ ನೀತಿ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ವಿವರಿಸಿದರು.

ಫೆಸಿಲಿಟಿ ಕೇಂದ್ರಕ್ಕೆ ಶಂಕುಸ್ಥಾಪನೆ: ದೇವನಹಳ್ಳಿಯಲ್ಲಿ ವಿಮಾನದ ಬಿಡಿಭಾಗ ಉತ್ಪಾದಿಸುವ ಕಾಮನ್‌ ಫಿನಿಶಿಂಗ್‌ ಫೆಸಿಲಿಟಿ ಕೇಂದ್ರದ ಶಿಲಾನ್ಯಾಸ ನೆರವೇರಿಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 210 ಕೋಟಿ ರೂ. ವೆಚ್ಚದಲ್ಲಿ ಈ ಕೇಂದ್ರ ನಿರ್ಮಾಣವಾಗಲಿದೆ.

ಕೇಂದ್ರ ಸರ್ಕಾರ 42 ಕೋಟಿ ರೂ. ನೀಡಲಿದ್ದು, ಉಳಿಕೆ ಮೊತ್ತವನ್ನು ರಾಜ್ಯ ಸರ್ಕಾರ ಭರಿಸಲಿದೆ. ಕೆಐಎಡಿಬಿ ನೀಡಿದ 40 ಎಕರೆ ಜಾಗದಲ್ಲಿ ನಿರ್ಮಾಣವಾಗುವ ಈ ಕೇಂದ್ರದಲ್ಲಿ ವಿಮಾನದ ಬಿಡಿಭಾಗ ತಯಾರಿ, ಎಲೆಕ್ಟ್ರಿಕ್‌ ಭಾಗಗಳ ತಯಾರಿ, ವಿಮಾನಕ್ಕೆ ಬಣ್ಣ ಬಳಿಯುವುದು ಹಾಗೂ ಕೊನೆ ಹಂತದ ತಯಾರಿ ಪ್ರಕ್ರಿಯೆಗಳು ನಡೆಯಲಿವೆ.

ಏರೊನಾಟಿಕಲ್‌ ಎಂಜಿನಿಯರಿಂಗ್‌, ಉತ್ಪಾದನೆ, ಎಲೆಕ್ಟ್ರಿಕಲ್‌ ವಾಹನಗಳು, ಡ್ರೋಣ್‌ ತಂತ್ರಜ್ಞಾನ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಕ್ರಿಯವಾಗಿದ್ದೇವೆ. ಹೊಸ ಉದ್ಯೋಗ ಸೃಷ್ಟಿಸುವಲ್ಲಿ ಮುಂದಿದ್ದೇವೆ. ಭವಿಷ್ಯದಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಲಿವೆ.
ಕಿರಣ್‌ ಮಜುಂದರ್‌ ಷಾ, ಬಯೊಕಾನ್‌

ದೇಶಿ, ವಿದೇಶಿ ಸಂಸ್ಥೆಗಳ ಸಮಾಗಮ: ರಾಜ್ಯ ಸರ್ಕಾರ ತುಮಕೂರು ರಸ್ತೆಯ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಹಮ್ಮಿಕೊಂಡಿರುವ ಸರಬರಾಜುದಾರರ ಅಭಿವೃದ್ಧಿ ಮತ್ತು ಹೂಡಿಕೆದಾರರ ಶೃಂಗಸಭೆಯಲ್ಲಿ ದೇಶಿ ಹಾಗೂ ವಿದೇಶಿ ಸಂಸ್ಥೆಗಳ ಸಮಾಗಮದ ಜೊತೆಗೆ ಗುಡಿ ಕೈಗಾರಿಕೆಯಿಂದ ಬೃಹತ್‌ ಕೈಗಾರಿಕೆಗಳು ತಮ್ಮ ಉತ್ಪನ್ನದ ಪರಿಚಯ ಮಾಡಿಸಿದರು.

ಎಚ್‌ಎಎಚ್‌, ಟಾಟಾ, ಜೆ.ಕೆ.ಟಯರ್ ಮೊದಲಾದ ದೇಶಿ ಸಂಸ್ಥೆಗಳ ಜತೆಗೆ ವೋಲ್ವೊ, ಟೊಯೊಟಾ ಕಿರ್ಲೋಸ್ಕರ್‌ ಸಂಸ್ಥೆಗಳು ಭಾಗವಹಿಸಿವೆ. ಖಾದಿ ಉದ್ಯಮ, ತೆಂಗು ನಾರು ಅಭಿವೃದ್ಧಿ ಮಂಡಳಿಯ ಉತ್ಪನ್ನ, ಗುಡಿ ಕೈಗಾರಿಕೆಗಳಿಂದ ತಯಾರಾದ ಅಲಂಕಾರಿಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಇಲ್ಲಿದೆ.

ಮಷಿನ್‌ ಟೂಲ್‌ಗ‌ಳು, ಬಟ್ಟೆ, ವಾಹನಗಳ ಬಿಡಿಭಾಗ, ಪಂಪ್‌ಸೆಟ್‌, ಟಯರ್‌, ಫ್ಯಾಬ್ರಿಕ್‌ ಮೊದಲಾದ ಉತ್ಪನ್ನಗಳನ್ನು ತಯಾರಿಸುವ ಸುಮಾರು 700 ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ 300 ಬೃಹತ್‌ ಕೈಗಾರಿಕೆಗಳು ತಮ್ಮ ಉತ್ಪನ್ನದ ಪ್ರದರ್ಶನಕ್ಕೆ ಇಟ್ಟಿದ್ದರು.

ಮುಂದಿನ 10 ವರ್ಷಗಳಲ್ಲಿ ಒಂದು ಸಾವಿರ ವಿಮಾನಗಳ ನಿರ್ಮಾಣ ಗುರಿ ಹೊಂದಿದ್ದೇವೆ. ಭಾರತೀಯ ಮೈತ್ರಿಕೂಟದ ಸುಖೋಯ್‌-30ಎಂಕೆಐ ಮೂಲಕ ಬ್ರಹ್ಮೋಸ್‌ ಕ್ಷಿಪಣಿ ಯಶಸ್ವಿಯಾಗಿ ಉಡಾವಣೆಯಾಗಿದೆ. 2,500 ಕೇಜಿ ತೂಕದ ಕ್ಷಿಪಣಿಯಲ್ಲಿ ಬೆಂಗಳೂರಿನ ಹಲವಾರು ಬಿಡಿಭಾಗಗಳ ಸಂಸ್ಥೆಗಳ ಕೊಡುಗೆ ಇದೆ.
-ಟಿ.ಸುವರ್ಣ ರಾಜು, ಎಚ್‌ಎಎಲ್‌ ವ್ಯವಸ್ಥಾಪಕ ನಿರ್ದೇಶಕ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.