ಇನ್ನೂ 150 ಕಿ.ಮೀ. ವೈಟ್‌ಟಾಪಿಂಗ್‌


Team Udayavani, Feb 14, 2018, 11:27 AM IST

whitetopping.jpg

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ವೈಟ್‌ ಟಾಪಿಂಗ್‌ ಮತ್ತಷ್ಟು ರಸ್ತೆಗಳಿಗೆ ವಿಸ್ತರಣೆಯಾಗಲಿದ್ದು, ರಾಜ್ಯ
ಬಜೆಟ್‌ನಲ್ಲಿ 150 ಕಿ.ಮೀ. ರಸ್ತೆ ಮಾರ್ಗದಲ್ಲಿ ಯೋಜನೆ ಜಾರಿ ಘೋಷಣೆಯಾಗಲಿದೆ. ಸುಮಾರು ಒಂದು ಸಾವಿರ ಕೋಟಿ ರೂ. ಮೊತ್ತದ ಯೋಜನೆ ಜಾರಿ ಪ್ರಸ್ತಾವನೆ ನಗರಾಭಿವೃದ್ಧಿ ಇಲಾಖೆಗೆ ಬಿಬಿಎಂಪಿಯಿಂದ ಸಲ್ಲಿಕೆಯಾಗಿದ್ದು, ಬಜೆಟ್‌ನಲ್ಲಿ ಘೋಷಣೆ
ಯಾಗಲಿದೆ ಎಂದು ಹೇಳಲಾಗಿದೆ.

ಮಳೆಗಾಲ ಸಂದರ್ಭದಲ್ಲಿ ಪದೇ ಪದೇ ರಸ್ತೆಗಳಲ್ಲಿ ಗುಂಡಿ ಬೀಳುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಲುವಾಗಿ ರೂಪಿಸಿರುವ ವೈಟ್‌ ಟಾಂಪಿಗ್‌ ಯೋಜನೆ ಬಗ್ಗೆ ಉತ್ತಮ ಅಭಿಪ್ರಾಯ ಇರುವುದರಿಂದ ಮತ್ತಷ್ಟು ರಸ್ತೆಗಳಿಗೆ ವಿಸ್ತರಿಸಲು ಬಿಬಿಎಂಪಿ ಮುಂದಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರದ ನೆರವು ಕೋರಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಅಧಿಕಾರಿಗಳೊಂದಿಗೆ ಬಜೆಟ್‌ ಪೂರ್ವ ಸಭೆ ನಡೆಸಿ, ನಗರದಲ್ಲಿ ಮೇಲ್ಸೇತುವೆ, ಅಂಡರ್‌ ಪಾಸ್‌, ಗ್ರೇಟ್‌ ಸಪರೇಟರ್‌, ಟೆಂಡರ್‌ ಶೂರ್‌ ರಸ್ತೆಗಳ ಅಭಿವೃದ್ಧಿಗೆ ಈ ಸಾಲಿನ ಬಜೆಟ್‌ನಲ್ಲಿ ಮತ್ತಷ್ಟು ಅನುದಾನ ಕೋರಿ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ. ಅದರಲ್ಲಿ ವಿಶೇಷವಾಗಿ ನಗರದಲ್ಲಿ 150 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್‌ ಟಾಪಿಂಗ್‌ ಯೋಜನೆಯಡಿ ಕೈಗೊಳ್ಳುವುದು ಸೇರಿದೆ ಎಂದು ಹೇಳಲಾಗಿದೆ.

ಬಿಬಿಎಂಪಿ ಇದೀಗ ಒಂದು ಸಾವಿರ ಕೋಟಿ ವೆಚ್ಚದಲ್ಲಿ ಮತ್ತೆ 150 ಕಿಲೋ ಮಿಟರ್‌ ರಸ್ತೆ ಅಭಿವೃದ್ಧಿಗೆ ಯೋಜನೆ ರೂಪಿಸಿದೆ. ನಗರದ ಹೊರ ವರ್ತುಲ ರಸ್ತೆಗಳು ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವೈಟ್‌ ಟಾಪಿಂಗ್‌ಗೆ ರಸ್ತೆಗಳನ್ನು ಗುರುತಿಸಲಾಗಿದೆ. 

ಈಗಾಗಲೇ ಮೊದಲ ಹಂತದಲ್ಲಿ 900 ಕೋಟಿ ರೂ. ವೆಚ್ಚದಲ್ಲಿ 96 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್‌ ಟಾಪಿಂಗ್‌ ಅಡಿಯಲ್ಲಿ
ಅಭಿವೃದ್ಧಿ ಪಡಿಸಲಾಗುತ್ತಿದೆ. ನಗರೋತ್ಥಾನ ಯೋಜನೆಯಡಿ 93.47 ಕಿ.ಮೀ ಉದ್ದದ 29 ರಸ್ತೆಗಳು ಮತ್ತು ಆರು ಜಂಕ್ಷನ್‌ಗಳಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ.

ಡಿಜಿಟಲ್‌ ಡೋರ್‌ ಸಂಖ್ಯೆ
ಬೆಂಗಳೂರು:
ಬಿಬಿಎಂಪಿಯು ನಗರದಲ್ಲಿರುವ ಪ್ರತಿ ಆಸ್ತಿಗಳಿಗೂ ಡಿಜಿಟಲ್‌ ಡೋರ್‌ ಸಂಖ್ಯೆ ನೀಡಲು ಮುಂದಾಗಿದ್ದು, ಏಪ್ರಿಲ್‌ನಿಂದ ಹೊಸ ಸಂಖ್ಯೆ ನೀಡಲು ಚಿಂತಿಸಿದೆ. ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ಆಸ್ತಿಗಳನ್ನು ಗುರುತಿಸಿ ಸೂಕ್ತ ತೆರಿಗೆ ಸಂಗ್ರಹಿಸುವ ಸಲುವಾಗಿ ಸಮಗ್ರ ಮಾಹಿತಿಯಿರುವ ಡಿಜಿಟಲ್‌ ಡೋರ್‌ ಸಂಖ್ಯೆ ನೀಡಲು ಸಿದ್ಧತೆ ನಡೆಸಿದೆ. 

ಯೋಜನೆ ಅನುಷ್ಠಾನಕ್ಕೆ ತಗುಲುವ ವೆಚ್ಚ, ಯೋಜನೆ ಜಾರಿ ವಿಧಾನ ರೂಪಿಸುವ ಜವಾಬ್ದಾರಿ ಯನ್ನು ಖಾಸಗಿ ಸಂಸ್ಥೆಗೆ ವಹಿಸಿದೆ. ಸಂಸ್ಥೆ ನೀಡುವ ವರದಿ ಆಧರಿಸಿ ಪ್ರತಿ ಆಸ್ತಿ, ಕಟ್ಟಡಕ್ಕೂ ಏಕರೂಪದ ಪ್ರತ್ಯೇಕ ಡಿಜಿಟಲ್‌ ಸಂಖ್ಯೆ ನೀಡಲು ನಿರ್ಧರಿಸಿದೆ. ಪ್ರತಿ ಆಸ್ತಿಗೂ ಅಕ್ಷರ ಸಹಿತ 7ರಿಂದ 11 ಸಂಖ್ಯೆಯ ಡಿಜಿ ಟಲ್‌ ಸಂಖ್ಯೆ ನೀಡಲಾಗುತ್ತದೆ. ಆ ಸಂಖ್ಯೆ ಆಧರಿಸಿ ಆಸ್ತಿಯ ವಿಳಾಸ ವನ್ನು ಜಿಐಎಸ್‌ ಮ್ಯಾಪಿಂಗ್‌ ಮೂಲಕ ನಮೂದಿಸಲಾಗುತ್ತದೆ. ಇದರಿಂದ ವೆಬ್‌ಸೈಟ್‌ನಲ್ಲಿ ಡಿಜಿಟಲ್‌ ಸಂಖ್ಯೆ ನಮೂದಿಸಿದರೆ ಅದು ಯಾರ ಆಸ್ತಿ, ಯಾವ ಸ್ಥಳದಲ್ಲಿದೆ ಎಂಬ ಸಮಗ್ರ ಮಾಹಿತಿ ತಿಳಿಯಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ ಆಸ್ತಿಗಳಿಗೆ ಡಿಜಿಟಲ್‌ ಡೋರ್‌ ಸಂಖ್ಯೆ ನೀಡುವ ಸಂಬಂಧ ಯೋಜನಾ ವೆಚ್ಚ ಹಾಗೂ ಅನುಷ್ಠಾನದ ಬಗ್ಗೆ ವರದಿ ನೀಡುವ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗೆ ವಹಿಸಲಾಗಿದೆ. ಶೀಘ್ರವಾಗಿ ವರದಿ ಪಡೆದು ಡಿಜಿಟಲ್‌ ಡೋರ್‌ ಸಂಖ್ಯೆ ನೀಡಿಕೆಗೆ ಚಾಲನೆ ನೀಡಲು ಪ್ರಯತ್ನಿಸಲಾಗುವುದು ಎಂದು ಮೇಯರ್‌ ಆರ್‌.ಸಂಪತ್‌ರಾಜ್‌ ತಿಳಿಸಿದರು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.