152 ಕಡೆ ಬಯಲು ಮೂತ್ರ ವಿಸರ್ಜನೆ


Team Udayavani, Oct 21, 2019, 3:08 AM IST

152kade

ಬೆಂಗಳೂರು: ಪ್ರಸಕ್ತ ಸಾಲಿನ ಸ್ವಚ್ಛ ಸರ್ವೇಕ್ಷಣ್‌ನಲ್ಲಿ ಉತ್ತಮ ಸ್ಥಾನ ಗಳಿಸುವ ಉದ್ದೇಶದಿಂದ ಬಿಬಿಎಂಪಿಯು ಹಲವು ಸುಧಾರಣಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಮುಂದಾಗಿದೆ.

ಸ್ವಚ್ಛ ಸರ್ವೇಕ್ಷಣ್‌ನಲ್ಲಿ ಕಳೆದ ಬಾರಿ ಉತ್ತಮ ಸ್ಥಾನ ಕಳೆದುಕೊಳ್ಳಲು ಕಾರಣವಾಗಿದ್ದ ಹಲವು ವಿಭಾಗಗಳಲ್ಲಿ ಸುಧಾರಣಾ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಿದ್ದು, ಇದರ ಭಾಗವಾಗಿ ಎಲ್ಲೆಲ್ಲಿ ಬಯಲು ಪ್ರದೇಶಗಳಲ್ಲಿ ಸಾರ್ವಜನಿಕರು ಮೂತ್ರವಿರ್ಸಜನೆ ಮಾಡುತ್ತಿದ್ದಾರೆ ಎಂದು ತಿಳಿದುಕೊಳ್ಳಲು ಸರ್ವೇ ಪ್ರಾರಂಭಿಸಿದ್ದು, ಅಂತಹ 152 ಸ್ಥಳಗಳನ್ನು ಗುರುತಿಸಲಾಗಿದೆ.

ಪ್ರಮುಖವಾಗಿ ಶಿವಾಜಿನಗರ, ಕುಮಾರಸ್ವಾಮಿ ಬಡಾವಣೆ, ಮಹದೇವಪುರ, ದಕ್ಷಿಣ ವಲಯ ಹಾಗೂ ಯಲಹಂಕ ಸೇರಿದಂತೆ ನಗರದ ಹೊರ ವಲಯಗಳಲ್ಲಿ ಹೆಚ್ಚು ಬಯಲು ಪ್ರದೇಶದಲ್ಲಿ ಮೂತ್ರ ವಿರ್ಸಜನೆ ಮಾಡುವುದು ಪತ್ತೆಯಾಗಿದೆ. ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ಕ್ರಮಗಳು: ಕಳೆದ ಬಾರಿ ಹಲವು ಮುಂಜಾಗ್ರತಾ ಕ್ರಮಗಳ ನಡುವೆಯೂ ನಾಗರಿಕರ ನಿರಾಸಕ್ತಿ ಹಾಗೂ ಬಯಲು ಬಹಿರ್ದೆಸೆ ಮುಕ್ತವಾಗದ ಹಿನ್ನೆಲೆಯಲ್ಲಿ ಬೆಂಗಳೂರಿಗೆ 194ನೇ ರ್‍ಯಾಂಕ್‌ಗೆ ತೃಪ್ತಿ ಪಟ್ಟಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಮಾರ್ಷ್‌ಗಳ ನೇಮಕ, ಬಹಿರ್ದೆಸೆ ಪ್ರದೇಶ ಗುರುತಿಸುವುದು ಹಾಗೂ ಸಹಾಯ ಆ್ಯಪ್‌ನಲ್ಲಿ ದಾಖಲಾಗುವ ದೂರುಗಳನ್ನು ಕಾಲಮಿತಿಯಲ್ಲಿ ಬಗೆಹರಿಸುವುದಕ್ಕೆ ಮುಂದಾಗಿದೆ.

ದಾಖಲೆಯ ಪ್ರಮಾಣದ ದಂಡ: ನಗರದಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ನಿಯಮ ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸುವ ಉದ್ದೇಶದಿಂದ ಪಾಲಿಕೆಯು 232 (ನಿವೃತ್ತ ಸೈನಿಕರು) ಮಾರ್ಷಲ್‌ಗ‌ಳನ್ನು ನೇಮಿಸಿದ್ದು, ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವವರು, ಮೂತ್ರವಿರ್ಸಜನೆ ಮಾಡುವವರು, ಬ್ಲಾಕ್‌ಸ್ಪಾಟ್‌ ನಿರ್ಮಾಣ ಮಾಡುವುದು ಹಾಗೂ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಮಾಡುವವರಿಂದ ಸೆಪ್ಟೆಂಬರ್‌ನಲ್ಲಿ 14.33 ಲಕ್ಷ ರೂ. ಹಾಗೂ ಅಕ್ಟೋಬರ್‌ನಲ್ಲಿ (19ರ ವರೆಗೆ) 7,75,030 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ಈ ಕ್ರಮದಿಂದಲೂ ಈ ಬಾರಿಯ ಸ್ವಚ್ಛ ಸರ್ವೇಕ್ಷಣ್‌ನಲ್ಲಿ ಉತ್ತಮ ಅಂಕಗಳಿಸುವ ವಿಶ್ವಾಸದಲ್ಲಿ ಬಿಬಿಎಂಪಿ ಇದೆ.

ಮಾರ್ಷಲ್‌ಗ‌ಳಿಗೆ ಪ್ರಹರಿ ಬೆಂಬಲ: ಮಾರ್ಷಲ್‌ಗ‌ಳ ಮೇಲೆ ಆಗುತ್ತಿರುವ ಹಲ್ಲೆಯನ್ನು ತಪ್ಪಿಸುವ ಉದ್ದೇಶದಿಂದ ಬಿಬಿಎಂಪಿಯು ಮಾರ್ಷಲ್‌ಗ‌ಳಿಗೆ ಎರಡು ಪ್ರಹರಿ ವಾಹನದ ವ್ಯವಸ್ಥೆ ಮಾಡಿದೆ. ಈ ಹಿಂದೆ ರಾತ್ರಿ ಪಾಳಿಯಲ್ಲಿ ಒಬ್ಬರೇ ಮಾರ್ಷಲ್‌ಗ‌ಳು ಗಸ್ತು ತಿರುಗುತ್ತಿದ್ದರು. ಈಗ ಮೂರರಿಂದ ನಾಲ್ಕು ಜನ ಗಸ್ತು ತಿರುಗುತ್ತಿದ್ದಾರೆ. ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಪ್ರಹರಿ ವಾಹನವನ್ನು ಆಯಾ ಪ್ರದೇಶಗಳಲ್ಲಿ ಬಳಸಲಾಗುತ್ತಿದೆ ಎಂದು ಕರ್ನಲ್‌ ರಾಜ್‌ ಬೀರ್‌ ಸಿಂಗ್‌, ಚೀಫ್ ಮಾರ್ಷಲ್‌ ತಿಳಿಸಿದರು.

ಸ್ವಚ್ಛ ಸರ್ವೇಕ್ಷಣ್‌ನಲ್ಲಿ ಕಳೆದ ಬಾರಿಗಿಂತ ಈ ಬಾರಿ ಉತ್ತಮ ರ್‍ಯಾಂಕಿಂಗ್‌ ಬರಲಿದೆ. ಇದಕ್ಕೆ ಬೇಕಾದ ಸಿದ್ಧತೆಗಳನ್ನು ಬಿಬಿಎಂಪಿ ಮಾಡಿಕೊಂಡಿದೆ.

-ಸರ್ಫರಾಜ್‌ ಖಾನ್‌, ಘನತ್ಯಾಜ್ಯ ಜಂಟಿ ಆಯುಕ್ತ

ಸೆಪ್ಟೆಂಬರ್‌ನಲ್ಲಿ ಸಂಗ್ರಹವಾದ ದಂಡ
ಕಸ ಎಸೆದ ಪ್ರಕರಣ ಸಂಖ್ಯೆ: 1,092
ದಂಡ: 4,47,325 ರೂ.
ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಪ್ರಕರಣ: 1,449
ದಂಡ: 7,02,250 ರೂ.
ಮೂತ್ರ ವಿಸರ್ಜನೆ ಪ್ರಕರಣ: 295
ದಂಡ: 1,05,480 ರೂ.
ಒಟ್ಟು: 14.33 ಲಕ್ಷ ರೂ.

ಅಕ್ಟೋಬರ್‌ನಲ್ಲಿ (ಅ.19ರವರೆಗೆ) ಸಂಗ್ರಹಿಸಿರುವ ದಂಡ
ಸೆಪ್ಟೆಂಬರ್‌ನಲ್ಲಿ ಸಂಗ್ರಹವಾದ ದಂಡ
ಕಸ ಎಸೆದ ಪ್ರಕರಣ ಸಂಖ್ಯೆ: 1054
ದಂಡ: 3,96,780
ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಪ್ರಕರಣ: 454
ದಂಡ: 3,60,500
ಮೂತ್ರ ವಿಸರ್ಜನೆ ಪ್ರಕರಣ: 54
ದಂಡ: 17,750
ಒಟ್ಟು: 7,75,030

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.