ರಸ್ತೆ ನಿಯಮ ಉಲ್ಲಂಘಿಸಿ 15,400 ದಂಡ ಕಟ್ಟಿದ


Team Udayavani, Dec 15, 2019, 3:08 AM IST

traffic

ಬೆಂಗಳೂರು: ಒಂದೂವರೆ ವರ್ಷಗಳಿಂದ ಸಂಚಾರ ನಿಯಮ ಉಲ್ಲಂಘಿಸಿ ತಲೆಮರೆಸಿಕೊಂಡು ಓಡಾಡುತ್ತಿದ್ದ ತರಕಾರಿ ವ್ಯಾಪಾರಿ ವಿರುದ್ಧ 70 ಪ್ರಕರಣಗಳನ್ನು ದಾಖಲಿಸಿರುವ ಸಂಚಾರ ಪೊಲೀಸರು 15 ಸಾವಿರ ರೂ. ದಂಡ ವಿಧಿಸಿದ್ದಾರೆ.

ಯಶವಂತಪುರ ನಿವಾಸಿ ಮಂಜುನಾಥ್‌ ದಂಡ ಪಾವತಿಸಿದವರು. ಗುರುವಾರ ಬೆಳಗ್ಗೆ 10 ಗಂಟೆ ಹೊತ್ತಿನಲ್ಲಿ ರಾಜಾಜಿನಗರ ಸಂಚಾರ ಪೊಲೀಸರು ಮಹಾಲಕ್ಷ್ಮೀ ಲೇಔಟ್‌ನ ಶಂಕರನಗರ ಬಸ್‌ ನಿಲ್ದಾಣದ ಬಳಿ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಮಂಜುನಾಥ್‌ ಹೆಲ್ಮೆಟ್‌ ಧರಿಸದೆ ದ್ವಿಚಕ್ರ ವಾಹನದಲ್ಲಿ ಬಂದಿದ್ದಾರೆ. ಆತನನ್ನು ತಡೆದು ವಿಚಾರಿಸಿದಾಗ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಗೊತ್ತಾಗಿದೆ.

ಪೊಲೀಸರ ತಪಾಸಣೆ ವೇಳೆ ಆತನ ಬಳಿ ವಾಹನ ಚಾಲನೆ ಪರವಾನಗಿಯೂ ಇರಲಿಲ್ಲ. ಬಳಿಕ ಪಿಡಿಎ ಯಂತ್ರದಲ್ಲಿ ವಾಹನದ ಸಂಖ್ಯೆಯನ್ನು ನಮೂದಿಸಿ ಪರಿಶೀಲಿಸಿದಾಗ ಕಳೆದ ಒಂದೂವರೆ ವರ್ಷದಿಂದ ಸಂಚಾರ ನಿಯಮ ಉಲ್ಲಂಘಿಸಿರುವುದು ಕಂಡು ಬಂದಿದೆ. ಈ ಸಂಬಂಧ ದಾಖಲಾಗಿದ್ದ 70 ಪ್ರಕರಣಗಳ ಸಂಬಂಧ 15,400 ರೂ. ದಂಡ ವಿಧಿಸಿದ್ದಾರೆ.

ಅದನ್ನು ಪಾವತಿಸುವಂತೆ ಪೊಲೀಸರು ನೋಟಿಸ್‌ ಕೊಟ್ಟು ವಾಹನ ಜಪ್ತಿ ಮಾಡಿದ್ದರು. ಶನಿವಾರ 15,400 ರೂ. ದಂಡ ಕಟ್ಟಿ ವಾಹನ ಬಿಡಿಸಿಕೊಂಡಿದ್ದಾರೆ. ಬಹುತೇಕ ಕೇಸ್‌ಗಳು ಪರಿಷ್ಕೃತ ದಂಡ ಜಾರಿಯಾಗುವುದಕ್ಕಿಂತಲೂ ಹಳೇಯದ್ದಾಗಿವೆ. ಹೀಗಾಗಿ 70 ಕೇಸ್‌ಗಳಲ್ಲಿ 15,400 ರೂ. ದಂಡ ಪಾವತಿಸಬೇಕಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಸಿಸಿ ಕ್ಯಾಮರಾ ದೃಶ್ಯ ಪರಿಗಣಿಸಿ ಕೇಸ್‌ ದಾಖಲು: ತರಕಾರಿ ವ್ಯಾಪಾರಿಯಾಗಿರುವ ಮಂಜುನಾಥ್‌ ಒಂದೂವರೆ ವರ್ಷದಲ್ಲಿ ತನ್ನ ದ್ವಿಚಕ್ರ ವಾಹನದಲ್ಲಿ ಮೂವರ ಸವಾರಿ, ಸಿಗ್ನಲ್‌ ಉಲ್ಲಂಘನೆ, ಹೆಲ್ಮೆಟ್‌ ಧರಿಸಿದೆ ಇರುವುದು, ಚಾಲನೆ ವೇಳೆ ಮೊಬೈಲ್‌ ಬಳಕೆ ಸೇರಿದಂತೆ ಇನ್ನಿತರ ಸಂಚಾರ ನಿಯಮ ಉಲ್ಲಂಘನೆ ಕೇಸ್‌ಗಳಾಗಿವೆ.

ಪೊಲೀಸರು ಇಲ್ಲದ ಸ್ಥಳಗಳಲ್ಲಿಯೇ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸಿದ್ದರು. ಆದರೆ, ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದ ಫೋಟೋಗಳನ್ನು ಆಧರಿಸಿ ಕಂಟ್ರೋಲ್‌ ರೂಮ್‌ನಲ್ಲಿ ಕೇಸ್‌ ದಾಖಲಿಸಿದ್ದೇವೆ ಎಂದು ರಾಜಾಜಿನಗರ ಸಂಚಾರ ಠಾಣೆ ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.