156 ಬರಪೀಡಿತ ತಾಲೂಕು
Team Udayavani, Dec 30, 2018, 1:00 AM IST
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಹಿಂಗಾರು ವೈಫಲ್ಯದ ಹಿನ್ನೆಲೆಯಲ್ಲಿ ಇನ್ನೂ 56 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ, ಒಟ್ಟಾರೆ ಬರಪೀಡಿತ ತಾಲೂಕುಗಳ ಸಂಖ್ಯೆ 156ಕ್ಕೆ ಏರಿಕೆಯಾಗಿರುವ ಬಗ್ಗೆ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ.
ಕೂಡಲೇ ಬರಪೀಡಿತ ತಾಲೂಕುಗಳಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಿರುವ ಬರ ನಿರ್ವಹಣೆ ಕೈಪಿಡಿ- 2016 ಹಾಗೂ ಪರಿಷ್ಕೃತ ಕೈಪಿಡಿಯಂತೆ ಬೆಳೆ ಹಾನಿಯ ಬಗ್ಗೆ ಕೂಡಲೇ ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಈ ತಾಲೂಕುಗಳಲ್ಲಿನ ಭೂರಹಿತ ಕಾರ್ಮಿಕರು, ಸಣ್ಣ, ಅತಿ ಸಣ್ಣ ರೈತರಿಗೆ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸುವ ಕ್ರಮ ವಹಿಸುವ ಜತೆಗೆ ಕುಡಿಯುವ ನೀರು, ಮೇವು ಪೂರೈಕೆ ಹಾಗೂ ಜಾನುವಾರು ಸಂರಕ್ಷಣೆ ಇತರೆ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ಪ್ರಸಕ್ತ ಹಿಂಗಾರು ಹಂಗಾಮಿನಲ್ಲಿ ಘೋಷಣೆಯಾದ 156 ಬರಪೀಡಿತ ತಾಲೂಕುಗಳು ಹಳೆಯ ತಾಲೂಕುಗಳಾಗಿದ್ದು, ಹೊಸದಾಗಿ ರಚನೆಯಾದ ತಾಲೂಕುಗಳನ್ನು ಸೇರಿಸಿಲ್ಲ. ಹಾಗಾಗಿ 156 ತಾಲೂಕುಗಳಲ್ಲಿ ಹೊಸದಾಗಿ ರಚನೆಯಾದ ತಾಲೂಕುಗಳ ಸಹ ಬರಪೀಡಿತ ತಾಲೂಕುಗಳ ವ್ಯಾಪ್ತಿಗೆ ಒಳಪಟ್ಟಿದ್ದು, ಅವು ಸಹ ಬರ ಪರಿಹಾರಕ್ಕೆ ಸಂಬಂಧಿಸಿದ ಎಲ್ಲ ನೆರವು ಪಡೆಯಲಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ
CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ