ಬನಶಂಕರಿ: ಸ್ಕೂಲ್ ಬಸ್ ಢಿಕ್ಕಿಯಾಗಿ 16 ವರ್ಷದ ಬಾಲಕಿ ಸ್ಥಳದಲ್ಲೇ ಸಾವು
Team Udayavani, May 26, 2022, 3:44 PM IST
ಬೆಂಗಳೂರು : ನಗರದ ಬನಶಂಕರಿಯಲ್ಲಿ ಗುರುವಾರ ಬೆಳಗ್ಗೆ ಸ್ಕೂಲ್ ಬಸ್ ಢಿಕ್ಕಿಯಾಗಿ 16 ವರ್ಷದ ಬಾಲಕಿಯೊಬ್ಬಳು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಅವಘಡ ನಡೆದಿದೆ.
ಹಾರೋಹಳ್ಳಿಯ ನಿವಾಸಿ ದರ್ಶನ್ (21) ಎಂಬುವವರು ಕೀರ್ತನ ಮತ್ತು ಹರ್ಷಿತ 15 ವರ್ಷ ರವರನ್ನು ಬೈಕ್ ನಲ್ಲಿ ಹಿಂಬದಿಯಲ್ಲಿ ಕೂರಿಸಿಕೊಂಡು ಕಿತ್ತೂರು ರಾಣಿ ಚೆನ್ನಮ್ಮ ಜಂಕ್ಷನ್ ಕಡೆಯಿಂದ ಕಾಮಾಕ್ಯ ಕಡೆಗೆ ಹೋಗುತ್ತಿರುವಾಗ ಫ್ಲೈ ಓವರ್ ಮೇಲಿನಿಂದ ಬಂದ ಖಾಸಗಿ ಶಾಲಾ ಬಸ್ ಚಾಲಕ ವೈಟ್ ರಾಕ್ ಹೋಟೆಲ್ ಮುಂಭಾಗ ಬೈಕ್ ಗೆ ಗುದ್ದಿದ ಪರಿಣಾಮ, ಮೂವರೂ ವಾಹನ ಸಮೇತವಾಗಿ ರಸ್ತೆ ಮೇಲೆ ಬಿದ್ದಾಗ, ಸ್ಕೂಲ್ ಬಸ್ಸಿನ ಚಕ್ರ ಹಿಂಬದಿಯಲ್ಲಿದ್ದ ಕೀರ್ತನ ತಲೆಯ ಮೇಲೆ ಹರಿದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಸಂಬಂಧ ಬನಶಂಕರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಘಟನೆ ಬಳಿಕ ಪರಾರಿಯಾಗಿರುವ ಬಸ್ ಚಾಲಕನಿಗಾಗಿ ಶೋಧ ನಡೆಸಲಾಗುತ್ತಿದೆ. ವೇಗವಾಗಿ ಮತ್ತು ನಿರ್ಲಕ್ಷತೆ ಯಿಂದ ಚಾಲನೆ ಮಾಡಿಕೊಂಡು ಬಂದದ್ದೆ ಅವಘಡಕ್ಕೆ ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ