3 ತಿಂಗಳಲ್ಲಿ ಪಾಲಿಕೆಗೆ 1,757 ಕೋಟಿ ತೆರಿಗೆ ಸಂಗ್ರಹ


Team Udayavani, Jul 4, 2019, 3:08 AM IST

palike

ಬೆಂಗಳೂರು: ಬಿಬಿಎಂಪಿ ತೆರಿಗೆ ಸಂಗ್ರಹ ಗುರಿಮುಟ್ಟುವಲ್ಲಿ ಅರ್ಧದಷ್ಟು ಯಶಸ್ವಿಯಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ತ್ತೈಮಾಸಿಕ ಮಾಸ( ಏಪ್ರಿಲ್‌, ಮೇ ಮತ್ತು ಜೂನ್‌)ದಲ್ಲಿ ಶೇ.50.22 ರಷ್ಟು ಆಸ್ತಿ ತೆರಿಗೆ ಹಣ ಸಂಗ್ರಹವಾಗಿದೆ.

ಜೂನ್‌ ಮಾಸಾಂತ್ಯಕ್ಕೆ ಬಿಬಿಎಂಪಿಗೆ 1,757 ಕೋಟಿ ರೂ. ಆಸ್ತ ತೆರಿಗೆ ಹಣ ಸಂಗ್ರಹವಾಗಿದೆ. 2019-20 ನೇ ಸಾಲಿನಲ್ಲಿ ಬಿಬಿಎಂಪಿ 3,500 ಕೋಟಿ ರೂ. ತೆರಿಗೆ ಸಂಗ್ರಹ ಮಾಡುವ ಗುರಿಯನ್ನು ಹೊಂದಿದೆ.

ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹಕ್ಕೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಸುಧಾರಣೆ ಕಂಡಿದೆ. ಜತೆಗೆ ಏಪ್ರಿಲ್‌ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ.5 ರಷ್ಟು ವಿನಾಯಿತಿ ನೀಡುವುದಾಗಿ ಘೋಷಿಸಿದ್ದರಿಂದ ಒಂದೇ ತಿಂಗಳಲ್ಲಿ 945 ಕೋಟಿ ರೂ.ದಾಖಲೆ ಸಂಗ್ರಹವಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಕ್ಕಾಗಿ “ಪ್ರತಿ ಬುಧವಾರ ಕಂದಾಯ “ಆಂದೋಲ ದಿನ’ ಅಭಿಯಾಮನ ಆರಂಭಿಸಲಾಗಿದೆ. ತೆರಿಗೆ ಹಣ ಬಾಕಿ ಉಳಿಸಿಕೊಂಡಿರುವವರ ಪಟ್ಟಿ ಸಿದ್ಧಪಡಿಸಿಕೊಳ್ಳಲಾಗುತ್ತಿದೆ. ಶೋಕಸ್‌ ನೋಟಿಸ್‌ ಸಹ ನೀಡಲಾಗುತ್ತಿದೆ. ಜತೆಗೆ ಕಂದಾಯ ಇಲಾಖೆಯಿಂದ ವಲಯವಾರು ಸಭೆಗಳನ್ನು ನಡೆಸಲಾಗುತ್ತಿದೆ.

ಕೋರ್ಟ್‌ ಮೊರೆ: ನಿರ್ಮಿತ ವಿಸ್ತೀರ್ಣಕ್ಕೆ ತಕ್ಕಂತೆ ಆಸ್ತಿ ತೆರಿಗೆ ಪಾವತಿಸದೆ ವಂಚನೆ ಪ್ರಕರಣ ತಡೆಗಟ್ಟಲು ಒಟ್ಟಾರೆ ನಿರ್ಮಿತ ಪ್ರದೇಶದ ಟೋಟಲ್‌ ಸ್ಟೇಷನ್‌ ಸರ್ವೆ ಪ್ರಗತಿಯಲ್ಲಿದ್ದು, ಕೆಲವರು ಕೋರ್ಟ್‌ ಮೊರೆಹೋಗಿದ್ದಾರೆ. ಇದು ನಿರ್ಣಯವಾದರೆ ಮತ್ತಷ್ಟು ತೆರಿಗೆ ಸಂಗ್ರಹವಾಗಲಿದೆ ಎಂದು ಕಂದಾಯ ಇಲಾಖೆಯ ಉಪಆಯುಕ್ತ ಅವಿನಾಶ್‌ಬಾಬು ಮಾಹಿತಿ ನೀಡಿದರು.

ತೆರಿಗೆ ಪಾವತಿಯಲ್ಲಿ ಶೇ.5ರಷ್ಟು ವಿನಾಯಿತಿಯನ್ನು ಪ್ರತಿ ವರ್ಷ ಜೂನ್‌ ಮತ್ತು ಜುಲೈನಲ್ಲಿ ಎರಡು ತಿಂಗಳು ನೀಡಲಾಗುತ್ತಿತ್ತು. ಈ ವರ್ಷ ಚುನಾವಣೆ ಎದುರಾಗಿದ್ದರಿಂದ ಕೇವಲ ಒಂದು ತಿಂಗಳ ಕಾಲಾವಕಾಶ ನೀಡಲಾಗಿತ್ತು. ಈ ಅವಧಿಯಲ್ಲಿ ಗಣನೀಯ ಪ್ರಮಾಣದ ತೆರಿಗೆ ಹಣ ಸಂಗ್ರಹವಾಗಿದೆ ತಿಳಿಸಿದರು.

ದಾಖಲೆ ಪ್ರಮಾಣದ ತೆರಿಗೆ ಸಂಗ್ರಹ: ಬಿಬಿಎಂಪಿ ಏಪ್ರಿಲ್‌ ತಿಂಗಳಲ್ಲಿ ತೆರಿಗೆ ಪಾವತಿಸುವವರಿಗೆ ತೆರಿಗೆ ಮೊತ್ತದಲ್ಲಿ ಶೇ.5ರಷ್ಟು ವಿನಾಯತಿ ನೀಡಲಾಗಿತ್ತು. ಈ ಅವಧಿಯಲ್ಲಿ ಹಣ ಪಾವತಿಸುವವರಿಗೆ ಶೇ.5ರಷ್ಟು ಹಣ ಉಳಿಸಿಕೊಳ್ಳುವ ಅವಕಾಶವಿತ್ತು. ಇದನ್ನು ಬಹುತೇಕ ತೆರಿಗೆದಾರರು ಸರ್ಮಪಕವಾಗಿ ಬಳಸಿಕೊಂಡಿದ್ದು, ಏಪ್ರಿಲ್‌ ತಿಂಗಳಲ್ಲಿ 945 ಕೋಟಿ ರೂ.ಗಳು ಸಂಗ್ರಹವಾಗಿದೆ.

ಆನ್‌ಲೈನ್‌ ತೆರಿಗೆ ಪಾವತಿಗೆ ಒಲವು: ಸಾರ್ವಜನಿಕರು ತೆರಿಗೆಯನ್ನು ಆನ್‌ಲೈನ್‌ ಮೂಲಕ ಸಲ್ಲಿಸಲು ಹೆಚ್ಚು ಆಸಕ್ತಿ ತೋರಿಸಿದ್ದಾರೆ. ಈ ವರ್ಷದ ಮೊದಲ ತ್ತೈಮಾಸಿಕದಲ್ಲಿ ಆನ್‌ಲೈನ್‌ನ ಮೂಲಕ 642 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಈ ಹಿಂದೆ 2018ರಲ್ಲಿ 459 ಕೋಟಿ ರೂ. , 2017ರಲ್ಲಿ 384 ಕೋಟಿ. ರೂ ಮತ್ತು 2016ರಲ್ಲಿ 235 ಕೋಟಿ. ರೂ. ತೆರಿಗೆ ಹಣ (ಮೊದಲ ತ್ತೈಮಾಸಿಕ) ಸಂಗ್ರಹವಾಗಿದೆ. ವರ್ಷದಿಂದ ವರ್ಷಕ್ಕೆ ಆನ್‌ಲೈನ್‌ ತೆರಿಗೆ ಪಾವತಿದಾರರ ಸಂಖ್ಯೆ ಹೆಚ್ಚಾಗಿದೆ.

ವರ್ಷ ತೆರಿಗೆ ಸಂಗ್ರಹ ಗುರಿ ತೆರಿಗೆ ಸಂಗ್ರಹ ಶೇಕಡವಾರು
2016 2,300 1,997.28 86.83
2017 2,600 2,132.42 82.01
2018 3,100 2,529.42 81.59
2019 3,500 1,757.91 50.22 (ಜೂನ್‌ ಅಂತ್ಯದವರೆಗೆ)

ವರ್ಷ ಪಾವತಿಸಿದ ಆಸ್ತಿಗಳ ವಿವರ ಹಿಂದಿನ ವ. ಬಾಕಿದಾರರು ಆಸ್ತಿಗಳ ಸಂಖ್ಯೆ
2016 11,57,167 4,63,973 16,21,140
2017 11,99,211 6,28,579 18,27,790
2018 12,41,316 6,76,883 19,18,199
2019 9,90,618 1,92,681 11,83,299

* ಹಿತೇಶ್‌ ವೈ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.