ಹಾಪ್‌ಕಾಪ್ಸ್‌ ಅಭಿವೃದ್ಧಿಗೆ 25 ಕೋಟಿ ಸಾಲ


Team Udayavani, Feb 20, 2020, 3:06 AM IST

hop-coms

ಬೆಂಗಳೂರು: ಹಾಪ್‌ಕಾಮ್ಸ್‌ ಅಭಿವೃದ್ಧಿಗೆ ಈ ಬಾರಿಯ ಬಜೆಟ್‌ನಲ್ಲಿ 25 ಕೋಟಿ ರೂ. ದೀರ್ಘಾವಧಿ ಸಾಲ ನೀಡುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗು ವುದು ಎಂದು ತೋಟಗಾರಿಕೆ ಸಚಿವ ನಾರಾಯಣ ಗೌಡ ಭರವಸೆ ನೀಡಿದ್ದಾರೆ.

ಲಾಲ್‌ಬಾಗ್‌ನಲ್ಲಿರುವ ಹಾಪ್‌ಕಾಮ್ಸ್‌ ಪ್ರಧಾನ ಕಚೇರಿ ಆವರಣದಲ್ಲಿ ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ ಆಯೋಜಿಸಿರುವ “ದ್ರಾಕ್ಷಿ ಹಾಗೂ ಕಲ್ಲಂಗಡಿ ಮೇಳ’ ಉದ್ಘಾಟಿಸಿ ಮಾತನಾಡಿದ ಅವರು, ಹಾಪ್‌ಕಾಮ್ಸ್‌ 10 ಸಾವಿರಕ್ಕೂ ಅಧಿಕ ನೊಂದಾಯಿತ ರೈತ ಸದಸ್ಯರನ್ನು ಹೊಂದಿದೆ.

ಇದರ ಇನ್ನಷ್ಟು ಅಭಿವೃದ್ಧಿಗಾಗಿ ಹಿಂದಿನ ತೋಟಗಾರಿಕೆ ಸಚಿವ ವಿ.ಸೋಮಣ್ಣ ಅವರ ಮುಖೇನ 25 ಕೋಟಿ ರೂ. ದೀರ್ಘಾವಧಿ ಸಾಲದ ಪ್ರಸ್ತಾವನೆ ಇಡಲಾಗಿತ್ತು ಎಂದು ತಿಳಿದುಬಂದಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಬಾರಿಯ ಬಜೆಟ್‌ನಲ್ಲಿ ದೀರ್ಘಾವಧಿ ಸಾಲ ಘೋಷಣೆ ಮಾಡುವಂತೆ ಮನವಿ ಮಾಡಲಾಗುವುದು ಎಂದರು.

ಈ ದೀರ್ಘಾವಧಿ ಸಾಲದಿಂದ ರಾಜ್ಯದ ವಿವಿಧೆಡೆ ಹಾಪ್‌ಕಾಮ್ಸ್‌ ಮಳಿಗೆಗಳನ್ನು ತೆರೆಯಲಾಗುವುದು. ಜತೆಗೆ ಮೂಲಸೌಕರ್ಯ ಒದಗಿಸಿ ಹೆಚ್ಚು ರೈತರನ್ನು ಹಾಗೂ ಗ್ರಾಹಕರು ಹಾಪ್‌ಕಾಮ್ಸ್‌ನತ್ತ ಸೆಳೆಯುವ ಪ್ರಯತ್ನ ಮಾಡಲಾಗುತ್ತದೆ. ಪ್ರಸ್ತುತ ಬೆಂಗಳೂರಿನಲ್ಲಿ 198 ಮಳಿಗೆಗಳಿದ್ದು, ಕೆಲವೆಡೆ ಕಟ್ಟಡ ಕೊರತೆ ಹಾಗೂ ಹಣಕಾಸಿನ ಸಮಸ್ಯೆಯಿಂದ ಮಳಿಗೆಗಳನ್ನು ಮುಚ್ಚಿದ್ದು, ಅವುಗಳ ಪುನರ್‌ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಈಗಾಗಲೇ ಹಾಪ್‌ಕಾಮ್ಸ್‌ ಮೂಲಕ ರೈತರಿಗೆ ಬೆಂಬಲ ಹಾಗೂ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಣ್ಣು, ತರಕಾರಿ ತಲುಪುತ್ತಿವೆ. ಇದೇ ರೀತಿ ಮಂಡ್ಯ ಮತ್ತು ಹಳೆ ಮೈಸೂರು ಭಾಗದಲ್ಲೂ ಹಾಪ್‌ಕಾಮ್ಸ್‌ ಮಳಿಗೆ ವಿಸ್ತರಿಸಬೇಕು. ತೋಟಗಾರಿಕಾ ಬೆಳೆಗಳನ್ನು ಬೆಳೆಯಲು ಅಲ್ಲಿನ ರೈತರಿಗೆ ಪ್ರೋತ್ಸಾಹಿಸಬೇಕು. ಈ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ಮತ್ತು ಹಾಪ್‌ಕಾಮ್ಸ್‌ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ತೋಟಗಾರಿಕೆ ಇಲಾಖೆ ನಿರ್ದೇಶಕ ವೆಂಕಟೇಶ್‌, ಹಾಪ್‌ಕಾಮ್ಸ್‌ ಅಧ್ಯಕ್ಷ ಎಸ್‌.ಚಂದ್ರೇಗೌಡ, ಉಪಾಧ್ಯಕ್ಷ ಬಿ.ಮುನೇ ಗೌಡ ಮತ್ತು ವ್ಯವಸ್ಥಾಪಕ ನಿರ್ದೇಶಕ ಬಿ.ಎನ್‌.ಪ್ರಸಾದ್‌ ಸೇರಿದಂತೆ ಮತ್ತಿರರರಿದ್ದರು.

ಮಾರ್ಚ್‌ ತಿಂಗಳ ಅಂತ್ಯದವರೆಗೂ ಮೇಳ: ಫೆ.19ರಿಂದ ಆರಂಭವಾಗಿರುವ ದ್ರಾಕ್ಷಿ ಹಾಗೂ ಕಲ್ಲಂಗಡಿ ಮೇಳ, ಮಾರ್ಚ್‌ ತಿಂಗಳ ಅಂತ್ಯದವರೆಗೆ ನಗರದ ಎಲ್ಲಾ ಹಾಪ್‌ಕಾಮ್ಸ್‌ ಮಳಿಗೆಗಳಲ್ಲಿ ನಡೆಯಲಿದೆ. ಮೇಳದಲ್ಲಿ 13ರಿಂದ 15 ತಳಿಯ ದ್ರಾಕ್ಷಿಗಳು, 4 ತಳಿಯ ಕಲ್ಲಂಗಡಿ, ವಿವಿಧ ಬಗೆಯ ಖರ್ಜೂರ, ಚಕ್ಕೋತ, ಡ್ರೈಪ್ರೋಟ್‌ಗಳು ಲಭ್ಯವಿವೆ. ಇನ್ನು ಮೇಳದಲ್ಲಿ ದ್ರಾಕ್ಷಿ -ಕಲ್ಲಂಗಡಿ ಖರೀದಿಸುವವರಿಗೆ ಶೇ.10 ರಿಯಾಯಿತಿ ನೀಡಲಾಗುತ್ತಿದೆ.

ಐಷಾರಾಮಿ ಹೋಟೆಲ್‌ಗೆ ಹಣ್ಣು ತರಕಾರಿ ಸರಬರಾಜು: ಬೆಂಗಳೂರಿನಲ್ಲಿರುವ ಐಷರಾಮಿ ಹೋಟೆಲ್‌ಗ‌ಳಿಗೆ ಅಗತ್ಯವಿರುವ ತರಕಾರಿ, ಹಣ್ಣು ಮತ್ತಿತರ ಪದಾರ್ಥಗಳನ್ನು ಹಾಪ್‌ಕಾಮ್ಸ್‌ನಿಂದ ಪೂರೈಸುವ ಚಿಂತನೆ ಇದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಉದ್ಯಮಿಗಳೊಂದಿಗೆ ಸಭೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ತೋಟಗಾರಿಕಾ ಸಚಿವ ನಾರಾಯಣ ಗೌಡ ಇದೇ ವೇಳೆ ತಿಳಿಸಿದರು.

ಮೇಳದಲ್ಲಿ ಹಣ್ಣಿನ ದರ
ತಳಿ ದರ
ದ್ರಾಕ್ಷಿ ಬೆಂಗಳೂರು ನೀಲಿ 38 ರೂ.
ಟಿಎಸ್‌ 70 ರೂ.
ಥಾಷ್‌ ಗಣೇಶ್‌ 72 ರೂ.
ಸೊನಿಕಾ 80 ರೂ.
ಸೂಪರ್‌ ಸೊನಿಕಾ 86 ರೂ.
ಸೂಪರ್‌ ಸೊನಿಕಾ(ಬಾಕ್ಸ್‌) 88
ಶರದ್‌ 110 ರೂ.
ಕೃಷ್ಣ ಶರದ್‌ 114 ರೂ.
ಕೃಷ್ಣ ಶರದ್‌ ಸೂಪರ್‌ 160 ರೂ.
ಜಂಬೂ ಶರದ್‌ 160 ರೂ.
ಫ್ಲೇಮ್‌ 160 ರೂ.
ಇಂಡಿಯನ್‌ ರೆಡ್‌ ಗ್ಲೋಬ್‌ 174 ರೂ.
ಒಣದ್ರಾಕ್ಷಿ 300 ರೂ.
ಕಲ್ಲಂಗಡಿ ಕಿರಣ್‌ 18 ರೂ.
ನಾಮಧಾರಿ 20 ರೂ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.