ವರ್ಷಕ್ಕೆ 2.50 ಕೋಟಿ ನಾಗರಿಕರ ಪ್ರಯಾಣ


Team Udayavani, Feb 1, 2018, 12:09 PM IST

Bengaluru-airport.jpg

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್‌)ದಲ್ಲಿ ಕಳೆದ ಒಂದು ವರ್ಷದಲ್ಲಿ ಎರಡೂವರೆ ಕೋಟಿ ಜನ ಪ್ರಯಾಣ ಮಾಡಿದ್ದು, ಡಿ. 23ರಂದು ಅತಿ ಹೆಚ್ಚು 87,815 ಮಂದಿ ಸಂಚರಿಸಿದ್ದಾರೆ. ಇದು ಈವರೆಗಿನ ಸಾರ್ವಕಾಲಿಕ ದಾಖಲೆಯಾಗಿದೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಮಂಗಳವಾರ ತನ್ನ ಪ್ರಸಕ್ತ ಸಾಲಿನ (2017ರ ಜನವರಿಯಿಂದ ಡಿಸೆಂಬರ್‌) ಫ‌ಲಿತಾಂಶ ಪ್ರಕಟಿಸಿದ್ದು, ಈ ಅವಧಿಯಲ್ಲಿ ವಿಮಾನಗಳ ದಟ್ಟಣೆ, ಪ್ರಯಾಣಿಕರ ಸಂಚಾರ ಸೇರಿದಂತೆ ಒಟ್ಟಾರೆ ವಾರ್ಷಿಕ ಶೇ. 12.9ರಷ್ಟು ಪ್ರಗತಿ ಸಾಧಿಸಿದೆ. 

ದಕ್ಷಿಣ ಭಾರತದ ಅತಿ ಹೆಚ್ಚು ವಿಮಾನಗಳ ದಟ್ಟಣೆ ಇರುವ ನಿಲ್ದಾಣಗಳಲ್ಲಿ ಒಂದಾದ ಕೆಐಎಎಲ್‌ನ ವಿಮಾನಗಳ ಸಂಚಾರ (ಎಟಿಎಂ) ದಲ್ಲಿ ಕೂಡ ಕಳೆದ ವರ್ಷಕ್ಕಿಂತ ಶೇ. 4.3ರಷ್ಟು ವೃದ್ಧಿಯಾಗಿದೆ. 43 ವಿಮಾನ ಅನುಸೂಚಿಗಳು ದೇಶೀಯ ಮತ್ತು ವಿದೇಶಿ ಸೇರಿ 62 ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಿವೆ. 

2017ರಲ್ಲಿ ಕೆಐಎಎಲ್‌ನಲ್ಲಿ ವಿಮಾನಗಳ ಸಂಚಾರ (ಏರ್‌ ಟ್ರಾಫಿಕ್‌ ಮೂವ್‌ಮೆಂಟ್‌) ಪ್ರತಿ ದಿನ ಸರಾಸರಿ 505 ಇದ್ದು, ಇಡೀ ವರ್ಷ ಈ ನಿಲ್ದಾಣದ ಮೂಲಕ 1,84,348 ಬಾರಿ ವಿಮಾನಗಳು ಹಾರಾಟ ನಡೆಸಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ ವಿಮಾನಗಳು 1,76,797 ಸಂಚರಿಸಿದ್ದವು.
 
ಒಂದೇ ದಿನ (ಡಿ. 23)ದಲ್ಲಿ ಈ ನಿಲ್ದಾಣದಿಂದ 87,815 ಜನ ಪ್ರಯಾಣಿಸಿದ್ದಾರೆ. ಇದು ಈ ನಿಲ್ದಾಣದಲ್ಲಿನ ಸಾರ್ವಕಾಲಿಕ ದಾಖಲೆಯಾಗಿದ್ದು, ಇದೇ ದಿನ ವಿಮಾನಗಳು 603 ಬಾರಿ ಕಾರ್ಯಾ ಚರಣೆ ಮಾಡಿವೆ. ದೇಶೀಯ ವಿಮಾನಯಾನ ಪ್ರಮಾ ಣ ಶೇ. 14.5ರಷ್ಟು ಮತ್ತು ವಿದೇಶಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 4.7ರಷ್ಟು ಹೆಚ್ಚಳ ಕಂಡುಬಂದಿದೆ. ಕಳೆದ ವರ್ಷ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದೇಶೀ ವಿಭಾಗದಲ್ಲಿ ನಾಲ್ಕು ಹೊಸ ಮಾರ್ಗಗಳು ಕೂಡ ಸೇರ್ಪಡೆಗೊಂಡಿವೆ. 

ಏರ್‌ ಕಾರ್ಗೊ; ಶೇ. 8ರಷ್ಟು ವೃದ್ಧಿ: ಅಲ್ಲದೆ, ಜನವರಿ-ಡಿಸೆಂಬರ್‌ ಅವಧಿಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಏರ್‌ಕಾರ್ಗೊ ಮೂಲಕ 3,39,461 ಮೆಟ್ರಿಕ್‌ ಟನ್‌ ಸರಕು-ಸಾಗಣೆ ಮಾಡಲಾಗಿದೆ. ಪ್ರಸ್ತುತ ಏರ್‌ ಕಾರ್ಗೊ ಸಾಮರ್ಥ್ಯ ವಾರ್ಷಿಕ 3.5 ಲಕ್ಷ ಮೆಟ್ರಿಕ್‌ ಟನ್‌ ಇದ್ದು, ಕಳೆದ ವರ್ಷ 3.2 ಲಕ್ಷ ಮೆಟ್ರಿಕ್‌ ಟನ್‌ ಇತ್ತು. ಕಾರ್ಗೊ ವಾರ್ಷಿಕ ಪ್ರಗತಿ ದರ ಶೇ. 8.1ರಷ್ಟಿದೆ. ಮುಂದಿನ ಐದು ವರ್ಷಗಳಲ್ಲಿ ಸರಕು-ಸಾಗಣೆ ಸಾಮರ್ಥ್ಯ 5.7 ಲಕ್ಷ ಮೆಟ್ರಿಕ್‌ ಟನ್‌ ತಲುಪಲಿದೆ ಎಂದು ಅಂದಾಜಿಸಲಾಗಿದೆ. 

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.