ಕಸ ಸುರಿಯುವವರ ಮೇಲೆ ಕಣ್ಣಿಡಲು 2,700 ಸಿಸಿಟಿವಿ ಕ್ಯಾಮೆರಾ


Team Udayavani, Nov 23, 2017, 11:34 AM IST

blore-1.jpg

ಬೆಂಗಳೂರು: ಎಲ್ಲೆಂದರಲ್ಲಿ ತ್ಯಾಜ್ಯ ಸುರಿಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಬಿಬಿಎಂಪಿ,
ನಗರದಾದ್ಯಂತ 2,700 ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಯೋಜನೆ ರೂಪಿಸಿದೆ.

ತ್ಯಾಜ್ಯ ವಿಂಗಡಣೆ ಹಾಗೂ ಸ್ವತ್ಛತೆ ಕಾಪಾಡುವಂತೆ ನಾಗರಿಕರಿಗೆ ಹಲವಾರು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಬದಲಾಗಿ ದಿನೇ ದಿನೆ ನಗರದಲ್ಲಿ ಬ್ಲಾಕ್‌ಸ್ಪಾಟ್‌ಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.

ಪಾಲಿಕೆಯ ಎಲ್ಲ 198 ವಾರ್ಡ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಗೆ ಪಾಲಿಕೆಯಿಂದ ಪ್ರತಿಯೊಂದು
ವಾರ್ಡ್‌ಗೆ 10 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ. ಜತೆಗೆ ಕ್ಯಾಮೆರಾಗಳ ಅಳವಡಿಕೆಗಾಗಿ ಸರ್ಕಾರದ ವಿಶೇಷ
ಅನುದಾನ ಬರಲಿದ್ದು, ಅದನ್ನು ಬಳಸಿ ನಗರದ ಪ್ರಮುಖ 2,700 ಕಡೆಗಳಲ್ಲಿ ಕ್ಯಾಮೆರಾಗಳ ಅಳವಡಿಕೆಗೆ ಯೋಜನೆ
ರೂಪಿಸಿ ಟೆಂಡರ್‌ ಆಹ್ವಾನಿಸಲಾಗಿದೆ.

ಅಪರಾಧ ಚಟುವಟಿಕೆಗಳಿಗೂ ಕಡಿವಾಣ: ಎಲ್ಲೆಂದರಲ್ಲಿ ತ್ಯಾಜ್ಯ ಎಸೆದು ನಗರದ ಸ್ವತ್ಛತೆ ಹಾಳು ಮಾಡುವವರ
ವಿರುದ್ಧ ಕ್ರಮಕೈಗೊಳ್ಳುವುದು ಒಂದೆಡೆಯಾದರೆ, ನಗರದಲ್ಲಿನ ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೂ
ಸಿಸಿಟಿವಿ ಕ್ಯಾಮೆರಾಗಳು ಸಹಕಾರಿಯಾಗಲಿವೆ. ಪಾಲಿಕೆಯಿಂದ ಅಳವಡಿಸುವ ಕ್ಯಾಮೆರಾಗಳಲ್ಲಿನ
ದೃಶ್ಯಾವಳಿಗಳು, ವಿವಿಧ ಪ್ರಕರಣಗಳಲ್ಲಿ ಅಪರಾಧಿಗಳನ್ನು ಹಿಡಿಯಲು ಪೊಲೀಸರಿಗೆ ಸಹಾಯವಾಗಲಿವೆ.

ಪ್ರತ್ಯೇಕ ನಿಯಂತ್ರಣ ಕೊಠಡಿ: ಪಾಲಿಕೆಯಿಂದ ಅಳವಡಿಸುವ ಸಿಸಿಟಿವಿ ಕ್ಯಾಮೆರಾಗಳ ನಿರ್ವಹಣೆ ಮತ್ತು
ದೃಶ್ಯಾವಳಿಗಳ ಪರಿಶೀಲನೆ ಕಾರ್ಯಕ್ಕಾಗಿ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ನೂತನ ನಿಯಂತ್ರಣ ಕೊಠಡಿ
(ಕಂಟ್ರೋಲ್‌ ರೂಂ) ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತದೆ. ನಿಯಂತ್ರಣಕೊಠಡಿಯಲ್ಲಿ ಕುಳಿತು ಸಿಸಿಟಿವಿ
ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಿರುವ ಪಾಲಿಕೆಯ ಸಿಬ್ಬಂದಿ, ಎಲ್ಲೆಂದರಲ್ಲಿ ಕಸ ಎಸೆಯುವ
ನಾಗರಿಕರು, ಕಸಕ್ಕೆ ಬೆಂಕಿ ಹಚ್ಚುವವರು, ಅನುಮತಿಯಿಲ್ಲದೆ ರಸ್ತೆ ಅಗೆಯುವುದು ಸೇರಿ ಇನ್ನಿತರ
ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಸಂಬಂಧಪಟ್ಟ
ವಾರ್ಡ್‌ ಅಥವಾ ವಲಯ ಅಧಿಕಾರಿಗಳಿಗೆ ರವಾನಿಸಿ ಕ್ರಮಕೈಗೊಳ್ಳುವಂತೆ ಸೂಚಿಸಲಿದ್ದಾರೆ ಎಂದು ಪಾಲಿಕೆ
ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುಳ್ಳು ಮಾಹಿತಿ ನೀಡಿದ ಅಧಿಕಾರಿಯ ತರಾಟ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿದ್ದುಕೊಂಡು ಸುಳ್ಳು ಮಾಹಿತಿ ನೀಡಿದ
ವಿಶೇಷ ಆಯುಕ್ತರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಬುಧವಾರ ಪಾಲಿಕೆಯಲ್ಲಿ ನಡೆಯಿತು.

ಸಮಿತಿಯ ವತಿಯಿಂದ ಬುಧವಾರ ಕರೆಯಲಾಗಿದ್ದ ಅಧಿಕಾರಿಗಳ ಸಭೆಗೆ ಆಡಳಿತ ವಿಭಾಗದ ವಿಶೇಷ ಆಯುಕ್ತೆ ಸಾವಿತ್ರಿ ಅವರು ಗೈರಾಗಿದ್ದರು. ಸಮಿತಿಯ ಅಧ್ಯಕ್ಷರು ಕರೆ ಮಾಡಿ ವಿಚಾರಿಸಿದಾಗ ಕೆಲಸ ನಿಮಿತ್ತ ತಾವು
ಹೈಕೋರ್ಟ್‌ನಲ್ಲಿರುವುದಾಗಿ ಸಬೂಬು ನೀಡಿದ್ದಾರೆ. ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಕೇಂದ್ರ ಕಚೇರಿಯ ಡಿಸಿಯವರ ಕಚೇರಿಗೆ ಭೇಟಿ ನೀಡಿದಾಗ ಅವರು ಕಚೇರಿಯಲ್ಲಿರುವುದು ಬೆಳಕಿಗೆ ಬಂದಿತ್ತು.

ಇದರಿಂದ ಸಿಟ್ಟಿಗೆದ್ದ ಅಧ್ಯಕ್ಷ ಲಕ್ಷ್ಮೀನಾರಾಯಣ್‌ ಹಾಗೂ ಸಮಿತಿಯ ಸದಸ್ಯರು ಸಾವಿತ್ರಿ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ನಾವೇನು ನಮ್ಮ ಸ್ವಂತ ಕೆಲಸಗಳಿಗಾಗಿ ಸಭೆ ಕರೆದಿದ್ದೇವೆಯೇ, ಸಾರ್ವಜನಿಕರಿಗೆ ಸುಲಭವಾಗಿ ಆಡಳಿತ ನೀಡುವ ಉದ್ದೇಶದಿಂದ ಹಲವು ಯೋಜನೆಗಳ ಕುರಿತು ಚರ್ಚಿಸಿದರೆ ಬರಲು ನಿಮಗೇನು
ತೊಂದರೆ. ಕಚೇರಿಯಲ್ಲಿದ್ದುಕೊಂಡು ಸುಳ್ಳು ಹೇಳುತ್ತೀರಾ ಜನಪ್ರತಿನಿಧಿಗಳನ್ನು ಏನೆಂದು ತಿಳಿದುಕೊಂಡಿದ್ದೀರಾ ಎಂದು ಏರುದನಿಯಲ್ಲಿ ತರಾಟೆಗೆ ತೆಗೆದುಕೊಂಡರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.