29,154 ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಆಟದ ಮೈದಾನಗಳೇ ಇಲ್ಲ
Team Udayavani, Mar 25, 2017, 3:45 AM IST
ವಿಧಾನಪರಿಷತ್ತು: ರಾಜ್ಯದ 29,154 ಸಾವಿರ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಆಟದ ಮೈದಾನಗಳೇ ಇಲ್ಲ. ಅಲ್ಲದೇ ಕಳೆದ 11 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ನೆನೆಗುದಿಗೆ ಬಿದ್ದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಕ್ಯಾ. ಗಣೇಶ್ ಕಾರ್ಣಿಕ್ ಪ್ರಶ್ನೆಗೆ ಲಿಖೀತ ರೂಪದಲ್ಲಿ ಒದಗಿಸಿದ ಉತ್ತರದಲ್ಲಿ ಸಚಿವರು ಈ ಮಾಹಿತಿ ನೀಡಿದ್ದು, 29,154 ಶಾಲೆಗಳ ಪೈಕಿ 10,310 ಕಿರಿಯ ಪ್ರಾಥಮಿಕ, 14,848 ಹಿರಿಯ ಪ್ರಾಥಮಿಕ, 3,879 ಸೆಕಂಡರಿ ಹಾಗೂ 117 ಹೈಯರ್ ಸೆಕಂಡರಿ ಶಾಲೆಗಳಲ್ಲಿ ಆಟದ ಮೈದಾನಗಳು ಇಲ್ಲ.
ಅದೇ ರೀತಿ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 2005-06, 2006-07, 2007-08, 2009-10, 2012-13ನೇ ಸಾಲಿನಲ್ಲಿ ಸಹಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲೇ ಅಧಿಸೂಚಿಸಿ ಅವಶ್ಯಕತೆಗನುಗುಣವಾಗಿ ನೇಮಕಾತಿ ಮಾಡಲಾಗುತ್ತಿದೆ. ಪ್ರಸ್ತುತ ಖಾಲಿ ಇರುವ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅರ್ಥಿಕ ಇಲಾಖೆ ಹೈದರಬಾದ ಕರ್ನಾಟಕ ಭಾಗದ ಮೀಸಲು ಹುದ್ದೆಗಳ ವಿವಿರ ಕೇಳಿದೆ. ಆರ್ಥಿಕ ಇಲಾಖೆ ಅನುಮತಿ ನೀಡಿದ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ 148 ಹುದ್ದೆಗಳ ನೇಮಕಾತಿಗೆ 2014-15ರಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ಹೈಕೋರ್ಟ್ನ ಧಾರವಾಡ ಪೀಠ ಅಧಿಸೂಚನೆಯನ್ನು ರದ್ದುಪಡಿಸಿದೆ. 2016ರಲ್ಲಿ ಪರಿಷ್ಕೃತ ವೃಂದ ಮತ್ತು ನೇಮಕಾತಿ ಪಟ್ಟಿ ಪ್ರಕಟಿಸಲಾಗಿತ್ತು. ಈ ಸಂಬಂಧ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯಲ್ಲಿ ದಾವೆ ಹೂಡಲಾಗಿದ್ದು, ಅರ್ಜಿದಾರರ ಪರ ತೀರ್ಪು ಬಂದಿದೆ. ಮೇಲ್ಮನವಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?