ಮಂಗಳಮುಖೀಯರ ಕೈಗೆಟುಕದ 3 ಕೋಟಿ!


Team Udayavani, Feb 21, 2020, 11:01 AM IST

bng-tdy-3

ಬೆಂಗಳೂರು: ನಗರದಲ್ಲಿ ವಾಸವಿರುವ ಮಂಗಳಮುಖೀಯರ ಶ್ರೇಯೋಭಿವೃದ್ಧಿ ಹಾಗೂ ಅವರ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಕಳೆದ ಮೂರು ವರ್ಷಗಳಿಂದ ಪಾಲಿಕೆಯ ಬಜೆಟ್‌ನಲ್ಲಿ ತಲಾ ಒಂದು ಕೋಟಿ ರೂ. ಅನುದಾನ ಮೀಸಲಿರಿಸುತ್ತಿದೆ. ಆದರೆ, ಇದರಲ್ಲಿ ನಯಾ ಪೈಸೆಯೂ ಫ‌ಲಾನುಭವಿಗಳನ್ನು ತಲುಪಿಲ್ಲ!

ಮಂಗಳಮುಖೀಯರಿಗೆ ಆರ್ಥಿಕವಾಗಿ ಸಹಾಯ ಮಾಡುವ ಉದ್ದೇಶದಿಂದ 2016ರಲ್ಲಿ ಮೊದಲ ಬಾರಿಗೆ ಪಾಲಿಕೆಯು ವಿಶೇಷ ಯೋಜನೆಯಡಿ ಒಂದು ಕೋಟಿ ರೂ. ಬಿಡುಗಡೆ ಮಾಡಿತ್ತು. ನಂತರ ಪ್ರತಿ ವರ್ಷ ತಲಾ ಒಂದು ಕೋಟಿ ರೂ. ಬಿಡುಗಡೆ ಮಾಡುತ್ತಿದೆ. ವಿಶೇಷ ಸೌಲಭ್ಯದಡಿ ಇರುವ ವಿವಿಧ ಯೋಜನೆಗಳನ್ನು ಬಳಸಿಕೊಳ್ಳಲು ಮಂಗಳಮುಖೀರು ಮುಂದೆ ಬರುತ್ತಿಲ್ಲ. ಇನ್ನೊಂದೆಡೆ ಯೋಜನೆ ಬಳಸಿಕೊಳ್ಳುವ ಉದ್ದೇಶದಿಂದ ಮುಂದೆ ಬಂದಿರುವ ಮಂಗಳಮುಖೀಯರು ಸೂಕ್ತ ದಾಖಲೆ ನೀಡದೆ ಇರುವುದರಿಂದ ಅವರಿಗೆ ಹಣ ಬಿಡುಗಡೆ ಆಗುತ್ತಿಲ್ಲ ಎನ್ನುವುದು ಬಿಬಿಎಂಪಿ ಅಧಿಕಾರಿಗಳ ವಾದ.

45 ಅರ್ಜಿಗಳು ತಿರಸ್ಕೃತ: ಬಿಬಿಎಂಪಿಗೆ ಇಲ್ಲಿಯವರೆಗೆ 45 ಮಂಗಳಮುಖೀಯರು, ವಿಶೇಷ ಯೋಜನೆಯಡಿ ಹಣ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಇವರ್ಯಾರೂ ಸೂಕ್ತ ದಾಖಲೆ ನೀಡದ ಕಾರಣ ಅರ್ಜಿಗಳನ್ನು ತಿರಸ್ಕರಿಸಲಾಗಿದೆ.ಅಲ್ಲದೆ, ಯೋಜನೆಗೆ ಸಂಬಂಧಿಸಿದಂತೆ ಅರ್ಜಿಗಳು ಸಲ್ಲಿಕೆಯಾಗಿದ್ದರೆ ಅಥವಾ ವಿಶೇಷ ಬೇಡಿಕೆಗಳು ಬಂದರೆ ಮಾಹಿತಿ ನೀಡುವಂತೆಯೂ ಬಿಬಿಎಂಪಿಯ ಎಂಟು ವಲಯಗಳ ಅಧಿಕಾರಿಗಳನ್ನು ಕೇಳಲಾಗಿದೆ. ಆದರೆ, ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಕಲ್ಯಾಣ ವಿಭಾಗದ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಾರೆ.

ಭಿನ್ನ ಬೇಡಿಕೆ; ಅಧಿಕಾರಿಗಳು ಪೇಚಿಗೆ: ಬಹುತೇಕ ಮಂಗಳಮುಖೀಯರು ಹಾಗೂ ಸಂಬಂಧಿತ ಸಂಘಟನೆಗಳು ಪಾಲಿಕೆಯಿಂದ ನಿರೀಕ್ಷಿಸುತ್ತಿರುವ “ಭಿನ್ನ ಬೇಡಿಕೆ’ ಅಧಿಕಾರಿಗಳನ್ನು ಪೇಚಿಗೆ ಸಿಲುಕಿಸಿದೆ. ಜೀವನ ಮಟ್ಟ ಸುಧಾರಿಸಿಕೊಳ್ಳುವುದಕ್ಕೆ ಲಿಂಗ ಪರಿವರ್ತನೆ ಅನಿವಾರ್ಯವಾಗಿದ್ದು, ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಆರ್ಥಿಕ ಸಹಾಯ ಮಾಡುವಂತೆ ಮಂಗಳಮುಖೀಯರಿಂದ ಮನವಿ ಬರುತ್ತಿದ್ದು, ಇದಕ್ಕೆ ಹೇಗೆ ಪ್ರತಿಕ್ರಿಯಿಸುವುದು ಎಂದು ತಿಳಿಯುತ್ತಿಲ್ಲ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಗಳು ತಿಳಿಸಿದ್ದಾರೆ. ಪಾಲಿಕೆಯ ವಿಶೇಷ ಯೋಜನೆಯಲ್ಲಿ ಲಿಂಗಪರಿವರ್ತನೆ ಶಸ್ತ್ರಚಿಕಿತ್ಸೆಗೆ ಹಣ ನೀಡುವುದಕ್ಕೆ ಅವಕಾಶವಿಲ್ಲ. ಹೀಗಾಗಿ, ಈ ಬೇಡಿಕೆಯನ್ನು ಮುಂದಿನ ಬಜೆಟ್‌ನಲ್ಲಿ ಸೇರಿಸಲು ಇರುವ ಸಾಧ್ಯತೆಗಳ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಅಧಿಕಾರಿಗಳು ಸ್ಪಂದಿಸುತ್ತಿಲ್ಲ: ಮಂಗಳಮುಖೀಯರು ಸೂಕ್ತ ದಾಖಲೆ ನೀಡದೆ ಇರುವುದರಿಂದ ಅವರ ಅರ್ಜಿಗಳನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ದೂರುತ್ತಾರೆ. ಆದರೆ, ಮಂಗಳಮುಖೀಯರು ಇದಕ್ಕೆ ತದ್ವಿರುದ್ಧವಾಗಿ ಪ್ರತಿಕ್ರಿಯಿಸುತ್ತಾರೆ. ಮಂಗಳಮುಖೀಯೊಬ್ಬರು ಹೇಳುವಂತೆ “ಇಂಥದ್ದೇ ದಾಖಲೆ ಬೇಕು ಎಂದು ಅಧಿಕಾರಿಗಳು ಸರಿಯಾಗಿ ಹೇಳುವುದಿಲ್ಲ. ಕೆಲವರು ನಮ್ಮನ್ನು ಕೀಳಾಗಿ ಕಾಣುತ್ತಾರೆ. ಹೀಗಾಗಿ, ಇವರ ಅನುದಾನವೂ ಬೇಡ, ಸಹಾಯ ಕೇಳಿ ಅವಮಾನ ಅನುಭವಿಸುವುದೂ ಬೇಡ ಎಂದೆನಿಸಿದೆ’ ಎಂದು ಬೇಸರ ವ್ಯಕ್ತಪಡಿಸುತ್ತಾರೆ.

ಕೌಶಲ್ಯ ತರಬೇತಿ ನೀಡಿ :  ಮಂಗಳಮುಖೀಯರಿಗೆ ಪಾಲಿಕೆಯಿಂದ ಆರ್ಥಿಕ ಸಹಾಯ ನೀಡುವ ಬದಲು, ಅವರಿಗೆ ಕೌಶಲ್ಯ ತರಬೇತಿ ನೀಡಲಿ ಎಂಬುದು ಸಂಗಮ ಹಾಗೂ ಸಮ್ಮಿಲನ ಸಂಸ್ಥೆ ಸಂಸ್ಥಾಪಕಿ ನಿಶಾ ಗುಳೂರು ಒತ್ತಾಯ. ಮಂಗಳಮುಖೀಯರಿಗೆ ಪಾಲಿಕೆಯಿಂದ ಬಿಡುಗಡೆ ಯಾಗುತ್ತಿರುವ ಅನುದಾನಕ್ಕೆ ಸಂಬಂಧಿಸಿದಂತೆ “ಉದಯವಾಣಿ’ಗೆ ಪ್ರತಿಕ್ರಿಯೆ ನೀಡಿದ ಅವರು, ಆರ್ಥಿಕ ನೆರವು ನೀಡುವುದಕ್ಕಿಂತ ಕೌಶಲ್ಯ ತರಬೇತಿ ನೀಡಿದರೆ ಉತ್ತಮ. ಸಮಾಜದಲ್ಲಿ ಮಂಗಳಮುಖೀಯರನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ಬಹುತೇಕ ಕಂಪನಿಗಳು ಉದ್ಯೋಗ ನೀಡಲು ಮುಂದೆ ಬರುತ್ತಿವೆ. ಆದರೆ, ಮಂಗಳಮುಖೀಯರಿಗೆ ಕಂಪ್ಯೂಟರ್‌ ಹಾಗೂ ಸಾಮಾನ್ಯ ಇಂಗ್ಲಿಷ್‌ ಜ್ಞಾನದ ಕೊರತೆ ಇರುವುದರಿಂದ ಉದ್ಯೋಗಕ್ಕೆ ಸೇರಲು ಸಾಧ್ಯವಾಗುತ್ತಿಲ್ಲ. ಈ ಸಂಬಂಧ ಕೌಶಲ್ಯ ತರಬೇತಿ ನೀಡಿದರೆ, ಉದ್ಯೋಗಕ್ಕೆ ಸೇರಲ ಅಥವಾ ನಾವೇ ಸ್ಟಾರ್ಟ್‌ಅಪ್‌ ಆರಂಭಿಸಲು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಡುತ್ತಾರೆ.

ಮುಂಗಳಮುಖೀ ಸಮುದಾಯದೊಂದಿಗೆ ಈ ಬಗ್ಗೆ ಚರ್ಚೆ ಮಾಡಲಾಗುವುದು. ಅವರ ಅಗತ್ಯ ಹಾಗೂ ನಿರೀಕ್ಷೆಗೆ ಅನುಗುಣವಾಗಿ ಅವರಿಗೆ ಕೌಶಲ್ಯಾಭಿವೃದ್ಧಿ ಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲೂ ಕ್ರಮ ತೆಗೆದುಕೊಳ್ಳಲಾಗುವುದು. ಬಿ.ಎಚ್‌.ಅನಿಲ್‌ಕುಮಾರ್‌, ಬಿಬಿಎಂಪಿ ಆಯುಕ್ತ

 

ಹಿತೇಶ್‌ ವೈ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.