ಮಳೆಗೆ 3 ಬಲಿ; ಮುಳುಗಿದ ಶೃಂಗೇರಿಯ ಕಪ್ಪೆ ಶಂಕರ


Team Udayavani, Jun 10, 2018, 6:45 AM IST

0906ule4.jpg

ಬೆಂಗಳೂರು: ಕೊಡಗು, ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು,
ಸಿಡಿಲಬ್ಬರದ ಮಳೆಗೆ ಮೂವರು ಬಲಿಯಾಗಿದ್ದಾರೆ. ಚಿಕ್ಕಮಗಳೂರಿನ ಕಗ್ಗನಾಳದಲ್ಲಿ ಮನೆ ಮೇಲೆ ಮರ
ಬಿದ್ದು ಮೂವರು ಗಾಯಗೊಂಡಿದ್ದಾರೆ. ನೇತ್ರಾವತಿ, ಕುಮಾರಧಾರಾ, ಅಘನಾಶಿನಿ, ತುಂಗಾ, ಭದ್ರಾ ಸೇರಿದಂತೆ ರಾಜ್ಯದ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದೆ.

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಳೆಯ ಕಾರುಗಳ ಸರದಾರನೆಂದೇ ಖ್ಯಾತಿ ಪಡೆದಿದ್ದ ಸಿದ್ದಾಪುರದ ರೈತ, ಪಿ.ಸಿ.ಅಹಮ್ಮದ್‌ ಕುಟ್ಟಿ ಹಾಜಿ (68) ಅವರು ಮರದ ಕೊಂಬೆ ಬಿದ್ದು ಮೃತಪಟ್ಟಿದ್ದಾರೆ. ಅವರ ತೋಟದಲ್ಲಿ ಮರವೊಂದು ಬಿದ್ದಿದ್ದು, ಅದನ್ನು ವೀಕ್ಷಿಸಲೆಂದು ಶನಿವಾರ ಬೆಳಗ್ಗೆ ತೋಟಕ್ಕೆ ತೆರಳಿದ್ದರು. ಈ ಸಂದರ್ಭ ಮರದ ಕೊಂಬೆ ಅವರ ಮೆಲೆ ಬಿದ್ದು, ಸ್ಥಳದಲ್ಲಿಯೇ ಅಸುನೀಗಿದರು.

ಮಳೆಗೆ ಮರಬಿದ್ದು ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಳಲೆ ಗ್ರಾಮದಲ್ಲಿ ಪುಟ್ಟಯ್ಯ (60) ಎಂಬುವರು ಮೃತಪಟ್ಟಿದ್ದಾರೆ. ಶನಿವಾರ ಬೆಳಗ್ಗೆ ಸ್ನೇಹಿತನ ಮನೆಗೆ ಹೊರಟಿದ್ದಾಗ ದಾರಿಯಲ್ಲಿ ಮರ ಬಿದ್ದು ಅಸುನೀಗಿದರು.

ಕರಾವಳಿಯಲ್ಲಿಯೂ ಧಾರಾಕಾರ ಮಳೆಯಾಗುತ್ತಿದ್ದು, ಬೆಳ್ತಂಗಡಿ ತಾಲೂಕಿನ ಶಿರ್ಲಾಲಿನಲ್ಲಿ ಬಟ್ಟೆ ಒಗೆಯಲು ನದಿಗೆ ತೆರಳಿದ್ದ ಆನೆಕೊಡಂಗೆ ನಿವಾಸಿ ರೇವತಿ (60) ಎಂಬುವರು ನೆರೆ ನೀರಲ್ಲಿ ಕೊಚ್ಚಿಹೋಗಿದ್ದಾರೆ. ಫ‌ಲ್ಗುಣಿ ನದಿಯ ಬೈರವಗುಂಡಿ ಬಳಿ ತೆರಳಿದ್ದ ಅವರು, ನೀರಿಗೆ ಇಳಿದಿದ್ದರು. ಮಳೆಯಿಂದಾಗಿ ನದಿಯಲ್ಲಿ ನೀರಿನ ಸೆಳೆತ ಜಾಸ್ತಿಯಿದ್ದು, ನೀರಿನ ರಭಸಕ್ಕೆ ಕೊಚ್ಚಿಹೋಗಿ ಸ್ಪಲ್ಪ ದೂರದಲ್ಲೇ ಇರುವ ಪೊದೆಯಲ್ಲಿ ಸಿಲುಕಿ ಕೊಂಡಿದ್ದರು.

ಇದನ್ನು ಗಮನಿಸಿದ ದಾರಿಹೋಕರು ಆಸ್ಪತ್ರೆಗೆ ದಾಖಲಿಸಿದರಾದರೂ, ಅಷ್ಟರಲ್ಲಾಗಲೇ ಕೊನೆಯುಸಿರೆಳೆ
ದಿದ್ದರು. ಇದೇ ವೇಳೆ, ಪ್ರತಿಕೂಲ ಹವಾಮಾನದಿಂದಾಗಿ ಅರಬ್ಬಿ ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿದ್ದ ತಮಿಳುನಾಡು ಮೂಲದ 10 ಮೀನುಗಾರರನ್ನು ಕರಾವಳಿ ತಟ ರಕ್ಷಣಾ ಪಡೆಯವರು ಶನಿವಾರ ರಕ್ಷಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಶನಿವಾರವೂ ಮುಂದುವರಿದಿದ್ದು, ಮೂಡಿಗೆರೆ ತಾಲೂಕು
ಕಳಸ ಸಮೀಪದ ಕಗ್ಗನಾಳದ ಪಡೀಲ್‌ ಎಂಬಲ್ಲಿ ಮನೆಯೊಂದರ ಮೇಲೆ ಮರ ಉರುಳಿ ಬಿದ್ದು, ಐದು ವರ್ಷದ ಮಗು ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಗಾಳಿ-ಮಳೆಗೆ ಪ್ರಸಾದ್‌ ಎಂಬುವರ ಮನೆ ಮೇಲೆ ಮರ ಬಿದ್ದಿದ್ದು, ಮನೆಯಲ್ಲಿದ್ದ ಪ್ರಸಾದ್‌, ಅವರ ಪತ್ನಿ ಪವಿತ್ರಾ ಹಾಗೂ ಮಗು ಪ್ರಜ್ಞಾ ಗಾಯಗೊಂಡಿದ್ದಾರೆ.

ಜಿಲ್ಲೆಯ ಪ್ರಮುಖ ನದಿಗಳಾದ ತುಂಗಾ, ಭದ್ರಾಗಳಲ್ಲಿ ನೀರಿನ ಹರಿವು ಹೆಚ್ಚಿದ್ದು, ಶೃಂಗೇರಿ ಮಠದ ಕಪ್ಪೆ
ಶಂಕರ ನೀರಿನಲ್ಲಿ ಮುಳುಗಿದೆ. ಕೈಮನೆ ಸಮೀಪ ಮರ ಬಿದ್ದು, ಶೃಂಗೇರಿ-ಆಗುಂಬೆ ರಸ್ತೆ ಸಂಚಾರ ಕೆಲಕಾಲ
ಸ್ಥಗಿತಗೊಂಡಿತ್ತು.ಇದೇ ವೇಳೆ, ಬಳ್ಳಾರಿ, ಬಾಗಲಕೋಟೆ, ಹಾಸನ, ಮಂಡ್ಯ, ಶಿರಸಿ, ಸಾಗರ, ಬೆಳಗಾವಿ ಸೇರಿದಂತೆ ರಾಜ್ಯದ ಇತರೆಡೆಯೂ ಮಳೆಯಾದ ವರದಿಯಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.