ಅಬ್ಬಾ..ಬಿಎಂಟಿಸಿ ಒಳಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ !
Team Udayavani, Feb 21, 2018, 11:34 AM IST
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬುಧವಾರ ಬೆಳಗಿನ ಜಾವ ನಡೆದ ಬೆಚ್ಚಿ ಬೀಳಿಸುವ ದುಷ್ಕೃತ್ಯವೊಂದರಲ್ಲಿ ಮೂವರು ದುಷ್ಕರ್ಮಿಗಳು ಬಿಎಂಟಿಸಿ ಬಸ್ ಒಳಗೆ ನುಗ್ಗಿ ವ್ಯಕ್ತಿಯೊಬ್ಬನನ್ನು ಇರಿದು ಬರ್ಬರವಾಗಿ ಇರಿದು ಕೊಲೆಗೈದು ಪರಾರಿಯಾಗಿದ್ದಾರೆ.
ಅತ್ತಿಬೆಲೆಯಿಂದ ಬೆಂಗಳೂರು ನಗರಕ್ಕೆ ಬರುತ್ತಿದ್ದ ಬಸ್ಸನ್ನು ಚಂದಾಪುರದಿಂದ ಬೆಂಬತ್ತಿದ ಮೂವರು ಇಲೆಕ್ಟ್ರಾನಿಕ್ ಸಿಟಿಯ ಕೋನಪ್ಪನ ಅಗ್ರಹಾರ ಬಳಿ ಬಸ್ ನಿಲ್ಲುತ್ತಿದ್ದಂತೆ ಒಳ ನುಗ್ಗಿದ ಮೂವರು ದುಷ್ಕರ್ಮಿಗಳು ಆಂಧ್ರ ಮೂಲದ 35 ವರ್ಷದ ವ್ಯಕ್ತಿಯನ್ನು ಬರ್ಬರವಾಗಿ ಇರಿದು ಕೊಲೆಗೈದು ಪರಾರಿಯಾಗಿದ್ದಾರೆ.
ಇರಿತದಿಂದಾಗಿ ವ್ಯಕ್ತಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದಾರೆ. ಭೀಕರ ದೃಶ್ಯ ಕಂಡು ಬಸ್ನಲ್ಲಿದ್ದ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ.
ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.