32 ಕೆ.ಜಿ. ಚಿನ್ನಾಭರಣ ಕಳವು
Team Udayavani, Aug 21, 2018, 12:01 PM IST
ಬೆಂಗಳೂರು: ಬಿಬಿಎಂಪಿ ಇಂಜಿನಿಯರ್ ದೇವರಾಜ್ ಅವರ ಮನೆಗೆ ನುಗ್ಗಿದ ಕಳ್ಳರು 32.55 ಕೆ.ಜಿ. ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿರುವ ಘಟನೆ ಎಚ್ಎಸ್ಆರ್ ಲೇಔಟ್ನಲ್ಲಿ ನಡೆದಿದೆ. ಇಂಜಿನಿಯರ್ ದೇವರಾಜ್ ಆ.17ರಂದು ಮಧ್ಯಾಹ್ನ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ಮೈಸೂರಿಗೆ ಹೋಗಿದ್ದರು.
ಇವರ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವಿಜಯ್ ಮನೆ ಬಳಿಯ ರೂಂನಲ್ಲಿ ವಾಸಿಸುತ್ತಿದರು. ಆ.19ರಂದು ದೇವರಾಜ್ ಅವರ ಮನೆ ಬಳಿ ಹೋದ ವಿಜಯ್ಗೆ ಮನೆ ಬಾಗಿಲು ಮುರಿದಿರುವುದು ಕಂಡಿದೆ. ಕೂಡಲೇ ದೇವರಾಜ್ ಪತ್ನಿ ಪ್ರೀತಿ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ.
ಆತಂಕಗೊಂಡ ದೇವರಾಜ್ ದಂಪತಿ ಕೂಡಲೇ ಮೈಸೂರಿನಿಂದ ಬೆಂಗಳೂರಿಗೆ ಬಂದು ಮನೆಯೊಳಗೆ ಹೋಗಿ ಪರಿಶೀಲಿಸಿದಾಗ ಮನೆಯೊಳಗಿದ್ದ ವಿವಿಧ ವಿನ್ಯಾಸದ ಚಿನ್ನಾಭರಣ, ವಜ್ರದ ಆಭರಣ, ಬೆಳ್ಳಿಯ ವಸ್ತುಗಳು ಸೇರಿ ಒಟ್ಟು 32.55 ಕೆ.ಜಿ ಚಿನ್ನಾಭರಣ ಹಾಗೂ 60 ಸಾವಿರ ರೂ. ನಗದು ಕಳವು ಮಾಡಿದ್ದಾರೆ.
ಅಲ್ಲದೆ, ಮನೆಯ ಹೊರಗಡೆ ಮತ್ತು ಒಳಭಾಗದಲ್ಲಿ ಅಳವಡಿಸಿದ್ದ ಸಿಸಿಟಿವಿ ಡಿವಿಆರ್ ಪ್ಲೇಯರ್ಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ ಎಂದು ದೇವರಾಜ್ ಪತ್ನಿ ಪ್ರೀತಿ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ