ಏಳು ವರ್ಷದಲ್ಲಿ ತಂಬಾಕು ತ್ಯಜಿಸಿದ 35 ಲಕ್ಷ ಜನ


Team Udayavani, May 31, 2018, 6:10 AM IST

ban31051807medn.jpg

ಬೆಂಗಳೂರು: ತಂಬಾಕು ಪದಾರ್ಥಗಳ ನಿಷೇಧದ ಕುರಿತ ನಿರಂತರ ಜಾಗೃತಿ ಹಾಗೂ ಕಾರ್ಯಾಚರಣೆ ಪರಿಣಾಮ ಕಳೆದ ಏಳು ವರ್ಷಗಳಲ್ಲಿ ರಾಜ್ಯದಲ್ಲಿ ಸುಮಾರು 35 ಲಕ್ಷ ಜನ ತಂಬಾಕು ಪದಾರ್ಥಗಳನ್ನು ತ್ಯಜಿಸಿದ್ದಾರೆ.

ತಂಬಾಕು ಉತ್ಪಾದನೆ ಹಾಗೂ ಬಳಕೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದ್ದು, ರಾಜ್ಯದ ಆರೂವರೆ ಕೋಟಿ ಜನರ ಪೈಕಿ 1.50 ಕೋಟಿಗೂ ಹೆಚ್ಚು ಜನ ತಂಬಾಕು ಉತ್ಪನ್ನಗಳನ್ನು ಬಳಸುತ್ತಿದ್ದಾರೆ. ಆದರೆ, ಕಳೆದ ಏಳು ವರ್ಷಗಳಲ್ಲಿ ಶೇ.5.4ರಷ್ಟಿದೆ.

ಅಂದರೆ 35 ಲಕ್ಷ ಜನ ತಂಬಾಕು ಉತ್ಪನ್ನಗಳಿಂದ ದೂರ ಉಳಿದಿರುವುದು ಸಮೀಕ್ಷೆಯಿಂದ ಬೆಳಕಿಗೆ ಬಂದಿದೆ. ಪ್ರತಿವರ್ಷ ದೇಶದಲ್ಲಿ 10 ಲಕ್ಷ ಜನ ತಂಬಾಕು ಬಳಕೆಯಿಂದ ಕಾಣಿಸಿಕೊಳ್ಳುವ ಕಾಯಿಲೆಗಳಿಗೆ ತುತ್ತಾಗಿ ಮೃತಪಡುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆಯು ವಿಶ್ವ ಆರೋಗ್ಯ ಸಂಸ್ಥೆಯ ಸಹಯೋಗದಲ್ಲಿ 2016-17ನೇ ಸಾಲಿನಲ್ಲಿ ನಡೆಸಿದ “ವಿಶ್ವ ವಯಸ್ಕ ತಂಬಾಕು ಸಮೀಕ್ಷೆ’ಯಲ್ಲಿ ರಾಜ್ಯದಲ್ಲಿ ತಂಬಾಕು ಬಳಕೆದಾರರ ಸಂಖ್ಯೆ ಶೇ.5.4ರಷ್ಟು ಕಡಿಮೆಯಾಗಿರುವುದು ಕಂಡು ಬಂದಿದೆ.

ಫೋಟೋ ನೋಡಿ ಸಿಗರೇಟ್‌ ತೊರೆದರು: ಕಳೆದ ಏಳು ವರ್ಷಗಳಲ್ಲಿ 35 ಲಕ್ಷ ಜನ ತಂಬಾಕು ಉತ್ಪನ ಬಳಕೆ ತ್ಯಜಿಸಿದ್ದು, ಆ ಪೈಕಿ ಶೇ. 73.8ರಷ್ಟು ಜನರು ತಂಬಾಕು ಉತ್ಪನ್ನಗಳಾದ ಸಿಗರೇಟ್‌,ಬೀಡಿ, ಗುಟ್ಕಾ, ತಂಬಾಕು ಮಿಶ್ರಿತ ಅಡಿಕೆ ಪುಡಿ ಸೇರಿದಂತೆ ತಂಬಾಕು ಪದಾರ್ಥಗಳ ಪ್ಯಾಕೆಟ್‌ ಮೇಲೆ ಮುದ್ರಿಸಿರುವ ಕ್ಯಾನ್ಸರ್‌ ಚಿತ್ರಣ, ಹೃದಯ, ಶ್ವಾಸಕೋಶ, ದವಡೆ ಹಾಗೂ ಗಂಟಲಿಗೆ ಗಾಯವಾಗಿರುವ ಚಿತ್ರಗಳು ತಂಬಾಕು ಪದಾರ್ಥ‌ ಬಳಕೆಯಿಂದ ದೂರವಾಗಿರುವುದು ವರದಿಯಿಂದ ತಿಳಿದು ಬಂದಿದೆ.

ತಂಬಾಕು ರಹಿತ ಸಮಾಜಕ್ಕಾಗಿ “ವಾಕಥಾನ್‌’
ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಗುರುವಾರ (ಮೇ 31) ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಿವಿಧ ಸಂಘಟನೆಗಳ ಸಹಕಾರದೊಂದಿಗೆ “ತಂಬಾಕು ಸೇವನೆ ಹೃದಯಕ್ಕೆ ಹಾನಿ’ ಘೋಷವಾಕ್ಯದ ಮೂಲಕ ತಂಬಾಕುರಹಿತ ಸಮಾಜಕ್ಕಾಗಿ ಬೆಂಗಳೂರಿನ ಆನಂದರಾವ್‌ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ವಾಕಥಾನ್‌ ಹಮ್ಮಿಕೊಂಡಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಹೃದ್ರೋಗ ತಜ್ಞರು, ಸಾರ್ವಜನಿಕ ಆರೋಗ್ಯ ತಜ್ಞರು, ವಿವಿಧ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಭಾಗವಹಿಸಲಿದ್ದಾರೆ.

ದೂರು ನೀಡಲು “ನೋ ಟೊಬ್ಯಾಕೋ’ ಆ್ಯಪ್‌
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇವನೆ ಬಗ್ಗೆ ಸಾರ್ವಜನಿಕರಿಂದ ದೂರು ಸ್ವೀಕರಿಸಲು “ನೋ ಟೊಬ್ಯಾಕೋ’ ಆ್ಯಪ್‌ ಅಭಿವೃದಿಟಛಿಪಡಿಸಿದ್ದು, ಗುರುವಾರ ನಗರದ ಬೆಂಗಳೂರು ಮೆಡಿಕಲ್‌ ಕಾಲೇಜಿನಲ್ಲಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಂ.ಎನ್‌.ವೆಂಕಟಾಚಲಯ್ಯ ಅವರು ಬಿಡುಗಡೆಗೊಳಿಸಲಿದ್ದಾರೆ ಎಂದು ತಂಬಾಕು ಮುಕ್ತ ಕರ್ನಾಟಕ ಒಕ್ಕೂಟದ ಸಂಚಾಲಕ ಎಸ್‌.ಜೆ.ಚಂದನ್‌ ಮಾಹಿತಿ ನೀಡಿದರು.

10ಲಕ್ಷ ಸಹಿ ಸಂಗ್ರಹ ಅಭಿಯಾನ
ವಿಶ್ವ ತಂಬಾಕು ದಿನಾಚರಣೆಯ ಅಂಗವಾಗಿ ತಂಬಾಕು ಬಳಕೆಯ ದುಷ್ಟರಿಣಾಮಗಳ ಕುರಿತು ಮಕ್ಕಳುಹಾಗೂ ಯುವ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ತಂಬಾಕು ಮುಕ್ತ ಕರ್ನಾಟಕ ಒಕ್ಕೂಟವು ರಾಜ್ಯಾದ್ಯಂತ 10 ಲಕ್ಷ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ. ನಂತರ, ಮುಖ್ಯಮಂತ್ರಿಗೆ ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಒಕ್ಕೂಟ
ಯೋಜನೆ ರೂಪಿಸಿದೆ. ಅದರಂತೆ ಬೆಂಗಳೂರು, ಮೈಸೂರು, ಬಳ್ಳಾರಿ,ದಾವಣಗೆರೆ, ತುಮಕೂರು ಮತ್ತು
ಮಂಗಳೂರಿನಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯಲಿದೆ.

– ವೆಂ.ಸುನೀಲ್‌ ಕುಮಾರ್‌

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.